nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲೂಕಿನಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಒಟ್ಟು 61 ಪ್ರತ್ಯೇಕ ಸ್ಮಶಾನ ಮೀಸಲಿವೆ : ತಹಶೀಲ್ದಾರ್ ಕೆ. ಮಂಜುನಾಥ್
    ಕೊರಟಗೆರೆ December 28, 2023

    ಕೊರಟಗೆರೆ ತಾಲೂಕಿನಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಒಟ್ಟು 61 ಪ್ರತ್ಯೇಕ ಸ್ಮಶಾನ ಮೀಸಲಿವೆ : ತಹಶೀಲ್ದಾರ್ ಕೆ. ಮಂಜುನಾಥ್

    By adminDecember 28, 2023No Comments2 Mins Read
    koratagere

    ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ಕೊರಟಗೆರೆ: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದು ಕೊರತೆಯ ಸಭೆಯು ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಿತು.


    Provided by
    Provided by

    ಸಭೆಯನ್ನು ಉದ್ದೇಶಿಸಿ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಪ.ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಪ್ರತ್ಯೇಕ ಆದಾಯವನ್ನು ಮೀಸಲು ಇಡಲಾಗಿದೆ, ಎಂದು ಪ.ಪಂ ಮುಖ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದಿನ ಸಭೆಯಲ್ಲಿ ಸಂಪೂರ್ಣ ವರದಿಯನ್ನು ನೀಡುವಂತೆ ಪ.ಪಂ ಮುಖ್ಯಾಧಿಕಾರಿಗೆ ತಿಳಿಸಿದರು.

    ಶುದ್ಧ ಕುಡಿಯುವ ನೀರಿನ ಘಟಕ, ರಸ್ತೆ, ಹೈಮಾಸ್ಕ್ ದೀಪದ ಸಂಪೂರ್ಣ ಮಾಹಿತಿಯನ್ನು ಕಡ್ಡಾಯವಾಗಿ ಶನಿವಾರ ನೀಡುವಂತೆ ಕೆಆರ್‍ಡಿಎಲ್ ಇಲಾಖೆಗೆ ಸೂಚಿಸಿದ್ದೇನೆ, ಕಂದಾಯ ಇಲಾಖೆಯ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾ.ಪಂ ಅಧಿಕಾರಿಗಳು ಡಿ.21ರಂದು ದಾಸರಹಳ್ಳಿ ಗ್ರಾಮದ ಸ್ಮಶಾನ ಭೂಮಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳದ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ ವೇಳೆ ಸ್ಮಶಾನ ಜಾಗ ಒತ್ತುವಾರಿಯಾಗಿರುವುದು ಕಂಡು ಬಂದಿದೆ ಜ.1ರಂದು ಒತ್ತುವರಿಯಾದ ಸ್ಮಶಾನ ಜಾಗವನ್ನು ತೆರವು ಕಾರ್ಯಾಚರಣೆ ಮಾಡಲಾಗುವುದು ಜೊತೆಗೆ ಎಂದು ಹೇಳಿದರು.

    ಹೊಳವನಹಳ್ಳಿ ಹೋಬಳಿ ಬಿ.ಡಿ ಪುರ ಗ್ರಾಮದಲ್ಲಿ ಸ.ನಂ.73ರಲ್ಲಿ 1 ಎಕರೆ ಸಾರ್ವಜನಿಕ ರುದ್ರಭೂಮಿ ಇದೆ, ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಪ್ರತ್ಯೇಕ ಸ್ಮಶಾನ ಮಂಜೂರು ಮಾಡಲು ಅವಕಾಶವಿಲ್ಲ, ಇದರಲ್ಲಿ 13 ಗುಂಟೆ ಒತ್ತುವರಿಯಾಗಿದೆ ಜ.6ರಂದು ತೆರವು ಕಾರ್ಯಾಚರಣೆ ಮಾಡಲಾಗುವುದು ಎಂದರು.
    ತಾಲೂಕಿನಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಒಟ್ಟು ಈಗಾಗಲೇ 61 ಪ್ರತ್ಯೇಕ ಸ್ಮಶಾನ ಮೀಸಲು ಇರಿಸಿದ ಸ್ಮಶಾನಗಳಿವೆ, ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿಯ ಗ್ರಾಮೀಣಾ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತೆಗೆದುಕೊಳ್ಳಬಹುದು, ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿಯ ಇದರ ಹಣ ಸ್ಮಶಾನದ ಅಭಿವೃದ್ಧಿಗೆ ಬಳಸದೆ ಇತರೆ ಸಾಮಾನ್ಯದ ಹಣವನ್ನು ಬಳಸುವಂತೆ ಪ.ಪಂ ಅಧಿಕಾರಿಗಳಿಗೆ ತಿಳಿಸಲಾಗಿದೆ.

    ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ರೀತಿಯ ಜನಾಂಗದವರು ರಸ್ತೆಯ ಅಂಗಡಿ ಮಳಿಗೆಗಳಲ್ಲಿ ಮತ್ತು ಮನೆಗಳಲ್ಲಿ ಅಕ್ರಮವಾಗಿ ಮಧ್ಯಪಾನವನ್ನು ಮಾರಾಟ ಮಾಡುತ್ತಾರೆ, ಆದರೆ ಅಬಕಾರಿ ಇಲಾಖೆಯವರು ಪರಿಶಿಷ್ಟ ಜಾತಿಯವರನ್ನೇ ಟಾರ್ಗೇಟ್ ಮಾಡಿ ದಂಡ ಹಾಕುತ್ತಿದ್ದಾರೆ ಎಂದು ದಲಿತ ಮುಖಂಡರು ಆರೋಪ ಮಾಡಿದ್ದಾರೆ, ಅಬಕಾರಿ ಇಲಾಖೆಯ ವಿರುದ್ಧ ಸಭೆಯಲ್ಲಿ ಹೆಚ್ಚಿನ ಆರೋಪಗಳು ಕೇಳಿ ಬಂದಿವೆ, ಪ್ರತಿ ತಿಂಗಳು ಅಕ್ರಮ ಮಧ್ಯಪಾನದ ದಂಡ ವಸೂಲಿಯ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದರು.

    ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಡಿ.26ರಂದು ಯುವನಿಧಿಗೆ ಚಾಲನೆ ನೀಡಿದ್ದಾರೆ, 2022-23ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಪದವಿಧರ, ಡಿಪ್ಲೋಮೊ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಉದ್ಯೋಗ ಸೃಷ್ಟಿಸಿಕೊಳ್ಳುವವರೆಗೆ ಸಹಾಯ ಧನ ಬರಲಿದೆ ಅರ್ಹ ಫಲಾನುಭವಿಗಳು ಇಂದೇ ಅರ್ಜಿ ಹಾಕಿ ಸೌಲಭ್ಯವನ್ನು ಪಡೆದುಕೊಳ್ಳಿ ಎಂದರು.
    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಸರ್ಕಾರವು ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಪ್ರತ್ಯೇಕ ಸ್ಮಶಾನ ಮಂಜೂರು ಮಾಡಬೇಕು. ಏಕೆಂದರೆ, ದಲಿತ ಜನಾಂಗದವರನ್ನು ಸಮಾಜವು ಇಂದಿಗೂ ಅಸ್ಪøಶರಂತೆ ಕಾಣುತ್ತಿದೆ. ಈಗಲು ಸಹ ಅನೇಕ ದೇವಾಲಯಗಳಲ್ಲಿ ನಮ್ಮ ಜನಾಂಗ ದವರಿಗೆ ಪ್ರವೇಶವಿಲ್ಲ, ಆದ್ದರಿಂದ ಜಾತಿ ಪದ್ಧತಿ ಹೋಗುವವರೆಗೆ ದಲಿತರಿಗೆ ಪ್ರತ್ಯೇಕ ಸ್ಮಶಾನ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

     

    ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ:

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಸಮುದಾಯದ ಮಕ್ಕಳು ಯುಪಿಎಸ್ಸಿ, ಕೆಎಎಸ್, ಐಎಎಸ್ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ತೆಗೆದುಕೊಳ್ಳುವಂತಿದ್ದರೆ ಸರ್ಕಾರವೇ ಅದರ ವೆಚ್ಚವನ್ನು ಭರಿಸಿ 10 ತಿಂಗಳವರೆಗೆ ಉಚಿತವಾಗಿ ತರಬೇತಿ ನೀಡುತ್ತಿದೆ, ಎಸ್ಸಿ/ಎಸ್ಟಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ, ಓಬಿಸಿ ಜನಾಂಗಕ್ಕೆ ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ಇರಬೇಕು, ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್‍ನಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ ಇಂತಹ ಸೌಲಭ್ಯಗಳು ಸಿಕ್ಕಲ್ಲಿ ಯುವ ಜನತೆ ಕೂಡಲೇ ಬಳಸಿಕೊಳ್ಳಬೇಕು ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ನರಸಿಂಹಮೂರ್ತಿ, ತಾ.ಪಂ ಇಓ ಅಪೂರ್ವ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಯಮುನಾ, ಪಿಎಸ್‍ಐ ಚೇತನ್‍ಕುಮಾರ್, ಪರಿಶಿಷ್ಟ ಜಾತಿಯ ಚಿಕ್ಕರಂಗಯ್ಯ, ಸಿದ್ದಪ್ಪ, ದೊಡ್ಡಯ್ಯ, ಮಂಜುನಾಥ್, ಸುರೇಶ್, ಶಿವರಾಂ, ಗಿರಿನಗರ ನಾಗರಾಜು, ವಿನಯ್, ನಂದೀಶ್, ನವೀನ್, ನಾಗೇಶ, ಪರಿಶಿಷ್ಟ ವರ್ಗದ ಓಬಳರಾಜು, ಮಂಜುನಾಥ್, ವಿನಯ್, ಮಹೇಶ್ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.