ಹಾಸನ: ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ಮತ್ತು ಮೈಸೂರು ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ಏಪ್ರಿಲ್ 20 ಮತ್ತು 21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6ವರೆಗೆ ನಡೆದ ಎರಡು ದಿನ ಈ ಕಾರ್ಯಕ್ರಮದಲ್ಲಿ ಭಾರತ ದೇಶದ ಚೆನ್ನೈ, ಆಂಧ್ರ ಪ್ರದೇಶ್, ಒರಿಸ್ಸಾ ಗುಜರಾತ್ , ಬಿಹಾರ್ , ಉತ್ತರ ಪ್ರದೇಶ್ ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ಭರತನಾಟ್ಯ, ಕುಚುಪುಡಿ, ಓಡಿಸಿ, ಕಥಕ್ ಸೇರಿದಂತೆ ವಿವಿಧ ನೃತ್ಯಗಳನ್ನು ಪ್ರದರ್ಶನ ನೀಡಿ ದೇವಾಲಯಕ್ಕೆ ಬಂದಿದ್ದ ಸಾವಿರಾರು ಭಕ್ತಾದಿಗಳ ಮನಸೆಳೆದರು.
ನಿರಂತರ ಎರಡು ದಿನಗಳ ಕಾಲ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ನೃತ್ಯೋತ್ಸವ ಕಾರ್ಯಕ್ರಮ ಜನ ಮೆಚ್ಚುಗೆ ಪಾತ್ರವಾಯಿತು .
ಭಾರತೀಯ ಸಂಸ್ಕೃತಿಯ ಕಲೆಯಲ್ಲಿ ಶಾಸ್ತ್ರೀಯ ನೃತ್ಯಕ್ಕೆ ವಿಶೇಷ ಸ್ಥಾನಮಾನವಿದೆ, ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿಯು ಪ್ರಸಿದ್ಧ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಕಲಿಯುವ ಕಲಿಯುತ್ತಿರುವ ಹಲವಾರು ಗುರುಗಳಿಗೆ ಸೇರಿದಂತೆ ಕಲಿತಂತಹ ನೃತ್ಯ ಪ್ರದರ್ಶನವನ್ನು ಭಗವಂತನ ಮುಂದೆ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಿ ಕೊಡುತ್ತಿರುವುದು ಶ್ಲಾಘನೀಯವಾದದ್ದು ಎಂದು ಕೊಯಂಬತ್ತೂರ್ ಹಿರಿಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಮೀರಾಬಾಯ್ ಹೇಳಿದರು.
ನೃತ್ಯ ಹಬ್ಬವನ್ನು ನಿರಂತರವಾಗಿ ಮಾಡುವುದರ ಮೂಲಕ ಹಲವಾರು ಪುಟ್ಟ ಪುಟ್ಟ ಮಕ್ಕಳು ಹಾಗೂ ಯುವ ನೃತ್ಯ ಪಟುಗಳನ್ನು ಬೆಳೆಸುವ ಜವಾಬ್ದಾರಿ ನಿಮ್ಮದಾಗಲಿ ಎಂದು ಇದೇ ವೇಳೆ ಕಾರ್ಯಕ್ರಮದ ಆಯೋಜನ ಕಾರ್ಯದರ್ಶಿ ಡಾ.ಸ್ವಾತಿ ಪಿ.ಭಾರದ್ವಾಜ್ ರವರಲ್ಲಿ ಮನವಿ ಮಾಡಿ, ಅಕಾಡೆಮಿ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ನೃತ್ಯೋತ್ಸವದಲ್ಲಿ ಕೊಯಂಬತ್ತೂರ್, ಚೆನ್ನೈ, ಬೆಂಗಳೂರು, ವಿಜಯವಾಡ, ಕೇರಳ, ಒಡಿಸ್ಸಾ ಇಂದ ಆಗಮಿಸಿದ ಹಿರಿಯ ನೃತ್ಯ ಗುರುಗಳಿಗೆ ಅಕಾಡೆಮಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಕಲ್ಪತರು ನಾಡಿನ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ, ಕ್ಷೇತ್ರದ ಧರ್ಮದರ್ಶಿ ಶ್ರೀ ಲಕ್ಷ್ಮೀಶರವರು ಕಲಾವಿದರನ್ನು ವೇದಿಕೆಯಲ್ಲಿ ಗೌರವಿಸಿದರು ಹಾಗೂ ಕೇರಳದ 50 ವರ್ಷ ಹಿರಿಯ ವೈದ್ಯಾಧಿಕಾರಿ ಡಾ.ಭದ್ರಾ ನಯನ್ ರವರ ನೃತ್ಯ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296