ಶಿವಮೊಗ್ಗ: ಶಿವಮೊಗ್ಗದಲ್ಲಿ ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕನಾಗಿದ್ದಾನೆ.
ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಆತ ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನಾ ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


