nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ

    February 19, 2026

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಮ್ ಆದ್ಮಿ ಪಾರ್ಟಿ ಪದಾಧಿಕಾರಿ ಬಿಜೆಪಿ ಸೇರಿಲ್ಲ: ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟನೆ
    ತುಮಕೂರು April 20, 2024

    ಆಮ್ ಆದ್ಮಿ ಪಾರ್ಟಿ ಪದಾಧಿಕಾರಿ ಬಿಜೆಪಿ ಸೇರಿಲ್ಲ: ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟನೆ

    By adminApril 20, 2024Updated:April 21, 2024No Comments2 Mins Read
    aap

    ತುಮಕೂರು: ಜಿಲ್ಲೆಯ ಆಮ್ ಆದ್ಮಿ ಪಾರ್ಟಿಯ ಯಾವೊಬ್ಬ ಪದಾಧಿಕಾರಿಯೂ ಬಿಜೆಪಿ ಸೇರ್ಪಡೆಯಾಗಿಲ್ಲ ಎಂದು ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಸ್ಪಷ್ಟಪಡಿಸಿದ್ದಾರೆ.

    ರಾಷ್ಟ್ರ ಮಟ್ಟದಲ್ಲಿ ಆಗಿರುವ ಇಂಡಿಯಾ ಮಹಾ ಘಟ್ ಬಂಧನ್ ಮೈತ್ರಿ ಕೂಟದಲ್ಲಿ ಆಮ್ ಆದ್ಮಿ ಪಾರ್ಟಿ ಕೂಡ ಪ್ರಮುಖ ಪಕ್ಷವಾಗಿದ್ದು, ಈ ಮೈತ್ರಿ ಧರ್ಮದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಆಮ್ ಆದ್ಮಿ ಪಾರ್ಟಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.


    Provided by
    Provided by

    ಆದರೆ ಸೋಲಿನ ಭೀತಿಯಲ್ಲಿರುವ ಜಿಲ್ಲಾ ಬಿಜೆಪಿ ಕಳೆದ ಹತ್ತು ವರ್ಷಗಳ ಹಿಂದೆ ನಮ್ಮ ಪಕ್ಷದಲ್ಲಿದ್ದು, ನಂತರ ನಾಪತ್ತೆಯಾಗಿದ್ದ ಮುನಿಯಪ್ಪ ಎಂಬುವರನ್ನು ಹುಡುಕಿ ಜಿಲ್ಲಾ ಎಎಪಿ ಖಜಾಂಚಿ ಬಿಜೆಪಿ ಸೇರ್ಪಡೆ ಆಗಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಇದು ಸತ್ಯಕ್ಕೆ ದೂರ. ಅಸಲಿ ವಿಷಯವೆಂದರೆ ನಮ್ಮ ಜಿಲ್ಲಾ ಎಎಪಿಯಲ್ಲಿ ಈವರೆಗೆ ಖಜಾಂಚಿ ಹುದ್ದೆಯೇ ಇಲ್ಲ ಎಂದು ಎ ಎ ಪಿ ಮುಖಂಡರು ತಿರುಗೇಟು ನೀಡಿದ್ದಾರೆ.

    ನಮ್ಮ ಆಮ್ ಆದ್ಮಿ ಪಾರ್ಟಿಯ ಅತ್ಯುನ್ನತ ನಾಯಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟು ಲೋಕಸಭಾ ಚುನಾವಣೆ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನೇ ಅನುಸರಿಸಿ ಜಿಲ್ಲಾ ಬಿಜೆಪಿ ನಮ್ಮ ಪಕ್ಷದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಎಂದು ಖಂಡಿಸಿದ್ದಾರೆ.

    ಜಿಲ್ಲಾ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಾದ ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ, ಚಿತ್ರದುರ್ಗದ ಬಿ.ಎನ್.ಚಂದ್ರಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್ ಗೆಲುವಿಗೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಯಾ ಕ್ಷೇತ್ರವಾರು  ‘ಮಾಡು ಇಲ್ಲವೇ ಮಡಿ’ ಎಂಬಂತೆ ದುಡಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ನಾವು ಚುನಾವಣೆ ಪ್ರಚಾರಕ್ಕೆ ಹೋದಡೆಯೆಲ್ಲಾ ನಮ್ಮ ನಾಯಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಬಾರಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಎಚ್.ಎ.ಜಯರಾಮಯ್ಯ ಹಾಗೂ ಎಎಪಿ ನಗರಾಧ್ಯಕ್ಷ ಮೊಹಮ್ಮದ್ ಗೌಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ

    February 19, 2026

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ

    February 19, 2026

    ತುಮಕೂರು: ಕ್ಯಾತ್ಸಂದ್ರ ಮೈದಾನ ರಸ್ತೆಯಲ್ಲಿ ಬುಧವಾರ ಬೆಳಂಬೆಳಿಗ್ಗೆಯೇ ವೃದ್ಧೆ ಪಾರ್ವತಮ್ಮ ಅವರ ಚಿನ್ನದ ಸರವನ್ನು ಕಳ್ಳ ಕಿತ್ತೊಯ್ದ ಘಟನೆ ನಡೆದಿದೆ.…

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.