11 ವರ್ಷದಲ್ಲೇ ಎಎಪಿ ರಾಷ್ಟ್ರೀಯ ಪಕ್ಷವಾಗಿ ಬೆಳೆದಿದೆ. ಇದಕ್ಕೆ ಕಾರ್ಯಕರ್ತರು ಕಾರಣ, ಮೊದಲ ಚುನಾವಣೆಯಲ್ಲಿ ಸರ್ಕಾರಿ ಟೀಚರ್ ಮಗಳಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದೇವೆ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹೇಳಿದರು. ಎಎಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು ಎಎಪಿ ಹುಟ್ಟಿದ್ದು ಬೆಂಗಳೂರಿನಲ್ಲೇ. ಬೆಂಗಳೂರಿನ ಜಿಂದಾಲ್ ನೇಚರ್ ಕೇರ್ ನಲ್ಲಿ ಪಕ್ಷ ಕಟ್ಟುವ ಬಗ್ಗೆ ಚರ್ಚೆ ನಡೆದಿದ್ದು, ಅರವಿಂದ್ ಕೇಜ್ರವಾಲ್, ಜಸ್ಟಿಸ್ ಹೆಗಡೆಯವರು ಚರ್ಚೆ ಮಾಡಿದ್ದರು ಎಂದರು.
ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಎಎಪಿ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಎಎಪಿ ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ ಕೇಜ್ರವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಶಾಸಕ, ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. ಎಎಪಿ ಸ್ಥಾಪನೆಯಾಗಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಜನರ ಜೀವನ ಸುಧಾರಿಸಲು ಪಕ್ಷ ಕೆಲಸ ಮಾಡಿದೆ.


