ಕಾಶಿಯಾತ್ರೆ ಕೈಗೊಳ್ಳುವವರಿಗೆ ನೀಡುತ್ತಿರುವ ಸಹಾಯಧನವನ್ನು 5,000 ದಿಂದ 7,500 ರೂ. ಗಳಿಗೆ ಹೆಚ್ಚಿಸಲು ಚಿಂತನೆ ಮಾಡಲಾಗಿದೆ. ಆ ಮೂಲಕ ಸಾಮಾನ್ಯ ಭಕ್ತರು ಕೂಡ ಕಾಶಿಯಾತ್ರ ಕೈಗೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯ ಸರಕಾರದಿಂದ ರಿಯಾಯಿತಿ ದರದ ‘ಕರ್ನಾಟಕ ಭಾರತ್’ ಗೌರವ ಕಾಶಿ ದರ್ಶನ’ ಯೋಜನೆಯಡಿ ಬೆಂಗಳೂರಿನಿಂದ 450 ಪ್ರಯಾಣಿಕರನ್ನು ಹೊತ್ತ ವಿಶೇಷ ರೈಲು ನಗರದ ಯಶವಂತಪುರ ರೈಲ್ವೆ ನಿಲ್ದಾಣದಿಂದ ಶನಿವಾರ ತೆರಳಿತು. ರೈಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು. ಕಾಶಿಯಾತ್ರೆಯ ಸಹಾಯಧನ ಹೆಚ್ಚಿಸುವ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಂತಿಮ ಕೈಗೊಳ್ಳಲಾಗುವುದು. ಮುಂದಿನ ಟ್ರಿಪ್ ಆ. 12ಕ್ಕೆ ಹೊರಡಲಿದೆ. ರಾಮೇಶ್ವರಂ, ಗಯಾ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುವು ಮಾಡಿಕೊಡಲಾಗುವುದು, ಎಂದು ತಿಳಿಸಿದರು.
”ಒಟ್ಟು 8 ದಿನಗಳ ಕಾಶಿ ಪ್ರವಾಸ ಇದಾಗಿದ್ದು, ಒಬ್ಬರಿಗೆ 20, 000 ರೂ. ವೆಚ್ಚವಾಗಲಿದೆ. ಇದರಲ್ಲಿ 5,000 ರೂ. ರಾಜ್ಯ ಸರಕಾರದಿಂದ ಸಹಾಯಧನ ಸಿಗಲಿದೆ. ಈ ಪ್ಯಾಕೇಜ್ನಲ್ಲಿ ಪ್ರಯಾಣ, ಊಟ, ವಸತಿ ವ್ಯವಸ್ಥೆ ಧಾರ್ಮಿಕ ಕ್ಷೇತ್ರಗಳ ದರ್ಶನ ವೆಚ್ಚವೂ ಸೇರಿದೆ” ಎಂದರು. ಒಟ್ಟು 8 ದಿನಗಳ ಯಾತ್ರೆಯಲ್ಲಿ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್, ರಾಜ್ ಕ್ಷೇತ್ರಗಳಿಗೆ ತೆರಳಲು ರಾಜ್ಯ ಸರಕಾರವು ಐಆರ್ ಸಿಟಿಸಿ ಮತ್ತು ಭಾರತೀಯ ರೈಲ್ವೆ ಇಲಾಖೆ ಸಹಯೋಗದೊಂದಿಗೆ ವಿಶೇಷ ರೈಲಿನ ಮೂಲಕ 2022-13ನೇ ಸಾಲಿನಿಂದ ಈ ಯೋಜನೆ ಕೈಗೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


