nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿ ವೇತನ, ಹಾಸ್ಟೆಲ್ ಗಳ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ
    ಜಿಲ್ಲಾ ಸುದ್ದಿ July 24, 2025

    ವಿದ್ಯಾರ್ಥಿ ವೇತನ, ಹಾಸ್ಟೆಲ್ ಗಳ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

    By adminJuly 24, 2025No Comments2 Mins Read
    abvp

    ಔರಾದ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ಪ್ರತಿಭಟನೆ ನಡೆಸಿತು.

    ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1.258 ಹಾಸ್ಟೆಲ್ ಗಳಿದ್ದು 1,68,833 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ 3 ವರ್ಷಗಳ ಸರಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿತು.


    Provided by
    Provided by

    ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್ ಗಳು ತಲುಪುತ್ತಿಲ್ಲ, 40 — 50 ವಿದ್ಯಾರ್ಥಿಗಳಿಗೆ ಸೇರಿ 2–3 ಶೌಚಾಲಯಗಳು ಇವೆ, 100 ವಿದ್ಯಾರ್ಥಿಗಳು ಇರಬೇಕಾದ ವಸತಿ ನಿಲಯಗಳಲ್ಲಿ 140 — 150 ವಿದ್ಯಾರ್ಥಿಗಳನ್ನ ಇರಿಸುವಂತಾಗಿದೆ. ಪ್ರತಿ ತಿಂಗಳು ಊಟದ ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಗೆ 1. 850 ರೂ ಮಾತ್ರ ನೀಡಲಾಗುತ್ತಿದೆ ಈ ಹಣದಲ್ಲಿ ಡಯಟ್ ಚಾರ್ಟ್ ನಲ್ಲಿ ಇರುವಂತೆ ಸರಿಯಾಗಿ ಆಹಾರವನ್ನು ಕೊಡುವುದಕ್ಕೆ ಆಗುವುದಿಲ್ಲ ಹೀಗಾಗಿ ಸರಕಾರ ಈ ಹಣವನ್ನು ಹೆಚ್ಚಳ ಮಾಡಬೇಕು. ಈ ರೀತಿ ಹಲವಾರು ಸಮಸ್ಯೆಗಳು ರಾಜ್ಯದ ವಸತಿ ನಿಲಯಗಳಲ್ಲಿದ್ದು, ರಾಜ್ಯ ಸರ್ಕಾರ ತಕ್ಷಣವೇ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯಕ್ಕೆ ವಿಶೇಷ ಅನುದಾನವನ್ನ ನೀಡಿ ಸುವ್ಯವಸ್ಥಿತ ಹಾಸ್ಟೆಲಗಳನ್ನು ನಿರ್ಮಾಣ ಮಾಡಬೇಕೆಂದು ಎಬಿವಿಪಿ ಆಗ್ರಹಿಸಿತು.

    ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ:

    ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ. ತಮ್ಮ ಶಿಕ್ಷಣಕ್ಕೆ ಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೆ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾನಿಧಿಯನ್ನ ರದ್ದುಗೊಳಿಸಿರುವುದು. ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.

    ಹೋರಾಟದಲ್ಲಿ ಅಖಿಲ  ಭಾರತೀಯ ವಿದ್ಯಾರ್ಥಿ ಪರಿಷತ್ ಬೀದರ ವಿಶ್ವವಿದ್ಯಾಲಯದ ಅಧ್ಯಕ್ಷರಾದ ಶಿವಶರಣು ಚಾಂಬೋಳೆ, ರಾಜ್ಯಕಾರ್ಯಕಾರಣಿ  ಸದಸ್ಯ ಸಂಗಮೇಶ ದ್ಯಾಡೆ, ಶಶಿಕಾಂತ ರಾಕಲೇ, ಸುರೇಶ, ಹಿರಿಯ ಕಾರ್ಯಕರ್ತರಾದ ಅಶೋಕ ಶೆಂಬೆಳ್ಳಿ, ಹಾವಪ್ಪ ಡ್ಯಾಡೆ, ಸುನಿಲ್ ಮೇತ್ರೆ, ಮಲ್ಲಿಕಾರ್ಜುನ  ಟೆಕರಾಜ, ಅಂಬದಾಸ, ನೆಳಗೆ, ಕಾಲೇಜಿನ ವಿದ್ಯಾರ್ಥಿಗಳಾದ ಪೂಜಾ, ಗಂಗುಬಾಯಿ, ದೀಪ. ಭಾಗ್ಯಶ್ರೀ, ಸುಮಿತ್ರಾ, ಮಾರುತಿ, ಶಿವಪ್ರಸಾದ ಅನೇಕ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್ 


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ವಿಧಾನಸೌಧ ಮುಂಭಾಗ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ

    December 9, 2025

    ಸರಗೂರು:  ಶ್ರದ್ಧಾ–ಭಕ್ತಿ, ಸಡಗರದಿಂದ ಹನುಮ ಜಯಂತಿ ಆಚರಣೆ

    December 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಕೊರಟಗೆರೆ : ಎತ್ತಿನಹೊಳೆ ಯೋಜನೆ ಅನುಷ್ಠಾನ ವಿಳಂಬದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ 151 ಎಕರೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ…

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    December 10, 2025

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.