ಮಧುಗಿರಿ: ಕಸಬಾ ವ್ಯಾಪ್ತಿಯ ಲಿಂಗೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿರುವ ರಸ್ತೆಯಲ್ಲಿ ಹೆಚ್ಚು ಅಪಘಾತವಾಗುತ್ತಿದ್ದು, ಈ ನಿಟ್ಟಿನಲ್ಲಿ ಈ ಪ್ರದೇಶವನ್ನು ಅಪಘಾತ ವಲಯ ಎಂದು ಘೋಷಿಸಿ ಸೂಚನಾ ಫಲಕ ಅಳವಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿಪಿಟಿ ರಾಮು ಒತ್ತಾಯಿಸಿದರು.
ಮಂಗಳವಾರ ಸಂಜೆ ಶಾಲೆ ಮುಗಿಸಿ ವಾಪಸ್ ಬರುತ್ತಿದ್ದ ವಿದ್ಯಾರ್ಥಿ ಕುಶಾಲ್ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆಯ ಬೆನ್ನಲ್ಲೇ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಮು ಮಾತನಾಡಿ, ಈ ಸ್ಥಳದಲ್ಲಿ ಇತ್ತೀಚೆಗೆ ಹೆಚ್ಚು ಅಪಘಾತಗಳು ನಡೆಯುತ್ತಿದ್ದು, ಕಳೆದ ವಾರ ಶಿಕ್ಷಕರೊಬ್ಬರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಶಾಲಾ ವಿದ್ಯಾರ್ಥಿಯೊಬ್ಬಳು ಅಪಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿ ಯಾವಾಗಲೂ ಅಪಘಾತಗಳು ಸಂಭವಿಸುತ್ತಿರುವುದರಿಂದ ಸಂಬಂಧ ಪಟ್ಟ ಇಲಾಖೆಯವರು ಇದನ್ನು ಅಪಘಾತವಲಯ ಎಂದು ಘೋಷಿಸಿ ಸೂಚನಾ ಫಲಕಗಳನ್ನು ಅಳವಡಿಸ ಬೇಕು, ಜೊತೆಗೆ ಸಾರ್ವಜನಿಕರ ಸುರಕ್ಷತೆಗಾಗಿ ವೈಜ್ಞಾನಿಕವಾಗಿ ರಸ್ತೆ ಹುಬ್ಬುಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಣ್ಣ, ಮೂರ್ತಣ್ಣ, ಮಂಜುನಾಥ್, ಸುವರ್ಣಮ್ಮ ಹಾಗೂ ಊರಿನ ಮುಖ್ಯ ಗ್ರಾಮಸ್ಥರ ಹಾಜರಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy