nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಚೆ ಕಚೇರಿ ಖಾತೆದಾರರ ನಕಲಿ ಸಹಿ ಬಳಸಿ ಕೋಟ್ಯಂತರ ಹಣ ಗುಳುಂ ಆರೋಪ: ಖಾತೆದಾರರಿಂದ ಪ್ರತಿಭಟನೆ
    ಜಿಲ್ಲಾ ಸುದ್ದಿ September 12, 2025

    ಅಂಚೆ ಕಚೇರಿ ಖಾತೆದಾರರ ನಕಲಿ ಸಹಿ ಬಳಸಿ ಕೋಟ್ಯಂತರ ಹಣ ಗುಳುಂ ಆರೋಪ: ಖಾತೆದಾರರಿಂದ ಪ್ರತಿಭಟನೆ

    By adminSeptember 12, 2025No Comments2 Mins Read
    post office

    ಸರಗೂರು: ಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಒಂದು ಕೋಟಿಗೂ ಹೆಚ್ಚು ರೂ.ಗಳ ಅಧಿಕ ಮೊತ್ತದ ಹಣ ಲಪಟಾಯಿಸಿರುವ ಸಂಬಂಧ ಖಾತೆದಾರರು ದೂರು ನೀಡಿ ನಾಲ್ಕು ತಿಂಗಳುಗಳೇ ಕಳೆದರೂ ಠೇವಣಿ ಹಣ ಕೊಡಿಸಿಲ್ಲ ಎಂದು ಆರೋಪಿಸಿ ಖಾತೆದಾರರು ಪ್ರತಿಭಟನೆ ನಡೆಸಿದರು.

    ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್ ಕಚೇರಿ ಪಕ್ಕದಲ್ಲಿರುವ ಅಂಚೆ ಕಚೇರಿಗೆ ಮುತ್ತಿಗೆ ಹಾಕಿದ ಖಾತೆದಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಕಚೇರಿಗೆ ಬೀಗ ಜಡಿದು, ಸಿಬ್ಬಂದಿಯನ್ನು ಹೊರಹಾಕಿ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು. ಅಂಚೆ ಕಚೇರಿಯಲ್ಲಿನ ಅಂಚೆ ಶಾಖಾ ಪಾಲಕ(ಪೋಸ್ಟಲ್ ಅಸಿಸ್ಟೆಂಟ್) ದೀಪಕ್ ಎಂಬುವವರು ಅಂಚೆ ಕಚೇರಿಯ ವಿವಿಧ ಖಾತೆಗಳಿಂದ ನಕಲಿ ಸಹಿ ಬಳಸಿ, ಲಕ್ಷಾಂತರ ರೂ. ಲೂಟಿ ಮಾಡಿದ್ದಾನೆ ಎಂದು ಹಣ ಕಳೆದುಕೊಂಡ ಖಾತೆದಾರರುಗಳು ದೂರಿದ್ದಾರೆ. ಪ್ರಕರಣ ಬೆಳಕಿಗೆ ಬಂದು ಹಲವು ತಿಂಗಳುಗಳೇ ಕಳೆದಿವೆ. ಹಣ ಲಪಟಾಯಿಸಿರುವವರ ವಿರುದ್ಧ ದೂರು ನೀಡಿದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.


    Provided by
    Provided by

    ಅಂಚೆ ಕಚೇರಿಯ ಉಳಿತಾಯ ಖಾತೆಯಿಂದ ಹಣ ಹಿಂಪಾವತಿಯ ಮೇಲೆ ಖಾತೆದಾರರ ನಕಲಿ ಸಹಿ ಮಾಡಿ ಹಣ ಪಡೆದಿದ್ದಾರೆ ಅದಲ್ಲದೆ ಗ್ಯಾರಂಟಿ ಯೋಜನೆ ಹಣವನ್ನು ಖಾತೆದಾರರಿಂದ ಹಣ ಜಮಾ ಮಾಡಲು ತೆಗೆದುಕೊಂಡು ಅದನ್ನು ಸಹ ಬಳಸಿಕೊಂಡು ಖಾತೆದಾರರ ಪುಸ್ತಕದಲ್ಲಿ ಮುದ್ರೆ ಹಾಕಿ ಸಹಿ ಮಾಡಿ ಕೊಟ್ಟಿದ್ದಾರೆ. ಆದರೆ ಈ ಕುರಿತು ಕಚೇರಿಯ ಪುಸ್ತಕದಲ್ಲಿ ಯಾವುದೇ ವಿವರ ನಮೂದು ಮಾಡಿಲ್ಲ. ಇದನ್ನು ಪ್ರಶ್ನಿಸಿದರೆ ಅಂಚೆ ಕಚೇರಿಯ ಅಧಿಕಾರಿಗಳು ಕೆಲವೊಂದು ಫಾರಂಗೆ ಸಹಿ ಮಾಡಿಸಿಕೊಂಡು ವಾರ ಬಿಟ್ಟು ಬನ್ನಿ ಎಂದು ಸಬೂಬು ಹೇಳುತ್ತಿದ್ದಾರೆ. ಸರ್ವರ್ ಬಿಸಿ ನಾಳೆ ಬನ್ನಿ ಎಂದು ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನು ಯಾರು ಮಾಡಿದ್ದಾರೆ ಅವರನ್ನು ತಕ್ಷಣ ಪತ್ತೆ ಹಚ್ಚಿ ಕೂಡಲೇ ಖಾತೆದಾರರಿಗೆ ಅವರ ಠೇವಣಿ ಹಣವನ್ನು ಬಡ್ಡಿ ಸಮೇತ ಕೊಡಿಸಬೇಕು. ನಕಲಿ ಸಹಿ ಮಾಡಿ ಕೋಟ್ಯಾಂತರ ರೂಗಳನ್ನು ದೋಚಿರುವ ವ್ಯಕ್ತಿಗಳು ಸೇರಿದಂತೆ ಪ್ರಕರಣದಲ್ಲಿ ಶಾಮೀಲಾಗಿರುವ ಉನ್ನತ ಅಧಿಕಾರಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಸಾರ್ವಜನಿಕರು ಒಬ್ಬ ವ್ಯಕ್ತಿಯನ್ನು ನೋಡಿ ಹಣ ಕಟ್ಟಿರುವುದಿಲ್ಲ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಪೋಸ್ಟ್ ಆಫೀಸ್ ಅನ್ನು ನಂಬಿ ಹಣ ಕಟ್ಟಿರುತ್ತಾರೆ. ಈ ಸಂಬಂಧ ಮದುವೆ ಮುಂಜಿಗಳಿಗೆ ಹಣ ಇಟ್ಟಿದ್ದು ಈಗ ಅದು ಇಲ್ಲವಾಗಿದೆ. ಈ ಹಣ ನಮಗೆ ಬರದೇ ಇದ್ದರೆ ನಾವುಗಳು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೆಲ ಗ್ರಾಹಕರುಗಳು  ಎಚ್ಚರಿಕೆ ನೀಡಿದರು. ಹಾಗೂ ಈ ಸಂಬಂಧ ಸರಗೂರು ಅಂಚೆ ಕಚೇರಿಯಲ್ಲಿ ಕೆಲ ಅಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟಿದ್ದಾರೆ. ಈ ಸಂಬಂಧ ಮೈಸೂರು ಜಿಲ್ಲೆಯ ಅಂಚೆ ಕಚೇರಿಯ ಹಲವಾರು ಸಿಬ್ಬಂದಿಗಳು ಸರಗೂರಿನ ಅಂಚೆ ಕಚೇರಿಗೆ ಬಂದು ಪರಿಶೀಲಿಸಿ ಇಲ್ಲಿನ  ಮನೆ ಮನೆಗೆ ಹೋಗಿ ನಿಮ್ಮ ಖಾತೆಗಳನ್ನು ದೃಢಪಡಿಸಿಕೊಳ್ಳಿ ಎಂದು ಒತ್ತಾಯಿಸಿದರು. ಸರಗೂರು ತಾಲೂಕಿನ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಸುಮಾರು ನಾಲ್ಕು ತಿಂಗಳು ಕಳೆದರೂ ಸಹ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

    ಪ್ರತಿಭಟನೆಯಲ್ಲಿ ಖಾತೆದಾರರಾದ ಮುಳ್ಳೂರು ಲೋಕೇಶ್, ಮೆಡಿಕಲ್ ನೀತಿನ್ ಕುಮಾರ್, ಸರಗೂರು ಲೋಕೇಶ್, ಸುಂದರಮ್ಮ, ರಾಜೇಶ್, ನಾಗರಾಜ್, ಚೌಡಶೆಟ್ಟಿ, ಮಹೇಶ್, ವೆಂಕಟೇಶ್, ಅನಂತ ಶಯನ, ಜಯಮ್ಮ, ಸರೋಜಮ್ಮ, ಜಿ.ಬಿ.ಶಶಿಕಲಾ, ಜಗದೀಶ್ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಹಣ ಕಳೆದು ಕೊಂಡ ನೊಂದ ಗ್ರಾಹಕರುಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.