ತಿಪಟೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಅದರಂತೆ ತಿಪಟೂರಿನ ಕಲ್ಪತರು ಕ್ರೀಡಾಂಗಣದಲ್ಲಿ ವಿವಿಧ ಶಾಲಾ-ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಇತರೆ ಚಟುವಟಿಕೆಗಳು ನಡೆದವು.
ಈ ಬಾರಿಯ 75ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಠಾಗೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಮತ್ತು ಠಾಗೂರ್ ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
“75ನೇ ಗಣರಾಜ್ಯೋತ್ಸವ ದಿನವನ್ನು ಅತ್ಯಂತ ಉತ್ಸಾಹ ಮತ್ತು ದೇಶಭಕ್ತಿಯ ಭಾವನೆಗಳಿಂದ ಆಚರಿಸಲಾಗುತ್ತದೆ. ಈ ಬಾರಿಯ ಪರೇಡ್ ನಲ್ಲಿ ನಮ್ಮ ಶಾಲೆಯ ಮಕ್ಕಳು ಭಾಗವಹಿಸಿ ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುವುದು ಇಡೀ ಶಾಲೆಗೆ ಹೆಮ್ಮೆ ಪಡುವ ವಿಷಯ. ಎಂದು ಠಾಗೂರ್ ವಿದ್ಯಾ ಸಂಸ್ಥೆಯ ಆಡಳಿತ ಕಾರ್ಯದರ್ಶಿಯಾದ ಶಶಿಕಲಾ ಆರ್ ಅನಿಲ್ ರವರು ತಿಳಿಸಿದರು.”
“ನಮ್ಮ ಶಾಲೆಯ ಮಕ್ಕಳು ಪರೇಡ್ ಗೆ ಒಂದು ವಾರದ ಮುಂಚೆ ಅಭ್ಯಾಸದ ತಾಲಿಮು ನಡೆಸುತ್ತಿದ್ದರು. ಶಿಸ್ತಿನಿಂದ ಅಭ್ಯಾಸ ಮಾಡಿ ಇಂದು ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಠಾಗೂರ್ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಕರಾದ ಶ್ರೀ ಸೋಮಶೇಖರ್ ಮತ್ತು ಭಾನು ಪ್ರಕಾಶ್ ರವರು ಸಂತಸ ಪಟ್ಟರು.”
ವೀಕ್ಷಣೆಗೆ ಬಂದಿದ್ದವರಲ್ಲಿ ಅನೇಕರು ವಿದ್ಯಾರ್ಥಿಗಳ ಶಿಸ್ತಿನ ನಡೆಗೆ ತಮ್ಮ ಶ್ಲಾಘನೆಯನ್ನು ನೀಡಿದರು
ವರದಿ: ಆನಂದ್ ತಿಪಟೂರು