ಸರಗೂರು: ಗ್ರಾಮದಲ್ಲಿ ‘ಗ್ರಾಮ ಅರಣ್ಯ ಹಕ್ಕು ಸಮಿತಿ’ ರಚಿಸಿ ಅಲ್ಲಿನ ಜನರನ್ನು ಅರಣ್ಯವಾಸಿಗಳೆಂದು ಪರಿಗಣಿಸಿ ಸರಕಾರದಿಂದ ಸಿಗುವ ಅರಣ್ಯವಾಸಿಗಳ ಹಕ್ಕು ರಕ್ಷಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ್ ಸೂಚನೆ ನೀಡಿದರು.
ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಸ್ಕೂರು ಹಾಡಿಯಲ್ಲಿ ಶುಕ್ರವಾರದಂದು ಅರಣ್ಯ ಹಕ್ಕುಗಳ ಹಾಗೂ ಮಹಿಳಾ ಗ್ರಾಮ ಸಭೆ ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಘನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನವೆಂಬರ್ ತಿಂಗಳ ಕೆರೆ ಹಾಡಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆರ್ಜಿಗಳನ್ನ ಅರಣ್ಯವಾಸಿಗಳ ಆದಿವಾಸಿಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಾಡಿಕೊಂಡು ಬರುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ 700 ಕುಟುಂಬಗಳಿಗೆ ವೈಯಕ್ತಿಕವಾಗಿ ಅರಣ್ಯ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ. 234 ಕುಟುಂಬಗಳಿಗೆ ಉಪವಿಭಾಗಾಧಿಕಾರಿಗಳಿಂದ ಅನುಮೋದನೆಗೊಂಡು ಜಿಲ್ಲಾಧಿಕಾರಿ ಕಚೇರಿಗೆ ಅನುಮೋದನೆಗೆ ಹೋಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಇನ್ನೂ ಉಳಿದ 430 ಅರ್ಜಿಗಳು ಇದೆ ತಿಂಗಳು 700 ಕುಟುಂಬಗಳಿಗೆ ವೈಯಕ್ತಿಕ ಅರಣ್ಯ ಹಕ್ಕು ಪತ್ರಗಳು ಸಿಕ್ಕುತ್ತದೆ. ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖೆ ಯಾವಾಗಲೂ ನಿಮ್ಮ ಜೊತೆ ಇರುತ್ತದೆ ಎಂದರು.
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಚಿಕ್ಕಣ್ಣ ಮಾತನಾಡಿ, ಗಿರಿಜನರು ತಮ್ಮ ಮೂಲಭೂತ ಹಕ್ಕುಗಳನ್ನು ಪಡೆಯಲು ಸಂಘಟಿತ ಹೋರಾಟ ನಡೆಸಬೇಕು. ಗಿರಿಜನರಾದ ನಾವು ಅರಣ್ಯ ನಂಬಿ ಬದುಕುತ್ತಿದ್ದೇವೆ. ಇಲ್ಲಿನ ಕಿರು ಉತ್ಪನ್ನಗಳು ನಮ್ಮ ಬದುಕಿಗೆ ಆಸರೆಯಾಗಿವೆ. ಆದರೆ ಇಲಾಖೆಯ ಅಧಿಕಾರಿಗಳಿಗೆ ಗೊತ್ತಿಲ್ಲ. ಕಾಡಿನಲ್ಲಿರುವ ವಸ್ತುಗಳು ನಮ್ಮದು, ಮರ ಕಡಿದು ಸಾಗಿಸುವವರನ್ನು ಬಿಡುವ ಅರಣ್ಯ ಅಧಿಕಾರಿಗಳು, ಕಾಡಿನಲ್ಲಿ ಜೇನು, ನಲ್ಲಿ, ಸೀಗೆ ನಮ್ಮ ಆದಿವಾಸಿಗಳ ಜನರಿಗೆ ಅನುಕೂಲ ಮಾಡಿಕೊಡಬೇಕು. ಪಂಚಾಯಿತಿವತಿಯಿಂದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚನ್ನಪ್ಪ ಮಾತನಾಡಿ, ಹಕ್ಕುಪತ್ರ ಪಡೆದ ಕುಟುಂಬಗಳು ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜೊತೆಗೆ ಜಾತಿ, ಆಧಾರ್ ಕಾರ್ಡ್ ಹೊಂದಿಲ್ಲದ ಕುಟುಂಬಗಳನ್ನು ಗುರುತಿಸಿ ವಿಶೇಷ ಕ್ಯಾಂಪ್ ನಡೆಸಿ ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಮಿತಿ ರಚನೆ ಮಾಡಲು ಯಾರೂ ಅರ್ಜಿ ಸಲ್ಲಿಸಬಹುದು ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ನಟರಾಜು. ಸದಸ್ಯರು ಚಂದ್ರಶೇಖರ, ಜಯರಾಜ್, ಕರಿಗೌಡ, ಪುಟ್ಟಯ್ಯ, ಶಿವರಾಜು, ವಲಯ ಅರಣ್ಯಾಧಿಕಾರಿ ಅಮೃತ , ಸಮಾಜ ಕಲ್ಯಾಣ ಪರಿಶಿಷ್ಟ ಪಂಗಡ ನಾಗರಾಜು, ಎಸ್ಡಿಎಂಸಿ ಅಧ್ಯಕ್ಷ ರವಿ, ಮುಖಂಡರು ಬಸವಣ್ಣ, ಚಲುವಪ್ಪ, ನೂರಳಾಯ್ಯ, ಗೊವಿಂದಯ್ಯ, ಪಾಪಯ್ಯ, ಸಣ್ಣಯ್ಯ,ಕಂದಾಯ ಇಲಾಖೆ ನಿರೀಕ್ಷಕ ಮುಜೀಬ್, ಸಂಜಯ್, ಎಸ್ ಬಿಐ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಕುಮಾರ್, ಮೋನಿಕ ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW