ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಜನತೆ ರಾಜ್ಯ ಸರ್ಕಾರದ ಭಾರತ ಚುನಾವಣಾ ಆಯೋಗದ ಆದೇಶದಂತೆ ಮತದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಸೌಲಭ್ಯವನ್ನು ಪಡೆಯುವ ನಿಟ್ಟಿನಲ್ಲಿ ಭಾರತದಾದ್ಯಂತ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕಿದೆ ಎಂದು ತಹಶೀಲ್ದಾರ್ ನಹೀದಾ ಜಂ ಜಂ ತಿಳಿಸಿದರು.
ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಬೇಕು. ನಮ್ಮ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಬಿ ಎಲ್ ಒ ಅಧಿಕಾರಿಗಳು ತಮ್ಮ ಮನೆಯ ಬಾಗಿಲಿಗೆ ಬಂದು ಮತದಾರರ ಚೀಟಿಗೆ ಆಧಾರ್ ಸಂಖ್ಯೆಯನ್ನು ನೋಂದಣಿ ಮಾಡಿಕೊಳ್ಳುತ್ತಾರೆ ಅವರಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಆಧಾರ್ ಸಂಖ್ಯೆಯನ್ನು ತಪ್ಪದೇ ನೋಂದಣಿ ಮಾಡುವಂತೆ ಸಾರ್ಚಜನಿಕರಲ್ಲಿ ಮನವಿ ಮಾಡಿದರು.
ಯಾವುದೇ ಲೋಪದೋಷಗಳಿಗೆ ಎಡೆ ಮಾಡಿಕೊಡದೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾವಣೆ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಕೊರಟಗೆರೆಯ ತಹಶೀಲ್ದಾರ್ ನಹೀದಾ ಜಂ ಜಂ ಮನವಿ ಮಾಡಿದರು.
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz