ಗುಬ್ಬಿ: ತಾಲ್ಲೂಕಿನ ಹಾಗಲವಾಡಿ ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜ್ಯೋತಿಲಕ್ಷ್ಮೀ ,ಮಹೇಶ್ ಉಪಾಧ್ಯಕ್ಷರಾಗಿ ನಿರ್ಮಲ ಅವಿರೋಧವಾಗಿ ಆಯ್ಕೆಯಾದರು.
ಹಾಗಲವಾಡಿ ಪಂಚಾಯಿತಿ ಕಚೇರಿಯಲ್ಲಿ ಶಿರಸ್ತೇದಾರ್ ರವೀಶ್ ಹಾಗೂ ಕಂದಾಯ ನಿರೀಕ್ಷಕ ಗುರುಪ್ರಸಾದ್ ಎಲ್ಲಾ ಪ್ರಕ್ರಿಯೆ ನಡೆಸಿಕೊಟ್ಟರು. ನಡೆದ ಹಿಂದುಳಿದ ವರ್ಗ(ಅ) ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ಗಂಗಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ವನಿತಾ ರಾಜೀನಾಮೆ ಸಲ್ಲಿಸಿದ ಹಿನ್ನಲೆ ತೆರವಾಗಿದ್ದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಗಲವಾಡಿ ಕ್ಷೇತ್ರದ ಜ್ಯೋತಿಲಕ್ಷ್ಮೀ ಮಹೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಾಗಲವಾಡಿ ಕ್ಷೇತ್ರದ ನಿರ್ಮಲ ನಾಮಪತ್ರ ಸಲ್ಲಿಸಿದ್ದರು. ಏಕೈಕ ನಾಮಪತ್ರ ಹಿನ್ನಲೆ ಎರಡೂ ಸ್ಥಾನವನ್ನು ಅವಿರೋಧ ಆಯ್ಕೆ ಎಂದು ಬುಧವಾರ ಘೋಷಿಸಲಾಯಿತು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷೆ ಜ್ಯೋತಿಲಕ್ಷ್ಮೀ, ತಾಲ್ಲೂಕಿನ ಗಡಿಭಾಗದ ಹಾಗಲವಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸರ್ವ ಸದಸ್ಯರ ಸಹಕಾರ ಪಡೆಯಲಾಗುವುದು. ಈ ಜತೆಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮೂಲಕ ಸರ್ಕಾರದಿಂದ ವಿಶೇಷ ಅನುದಾನ ತಂದು ಮೂಲ ಸವಲತ್ತು ಒದಗಿಸಲು ಬದ್ಧನಾಗಿರುತ್ತೇನೆ. ಜಿಲ್ಲೆಯಲ್ಲೇ ಮಾದರಿ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ವಸತಿ ಯೋಜನೆ, ಕುಡಿಯುವ ನೀರು, ರಸ್ತೆ ಹೀಗೆ ಅನೇಕ ಸೌಲಭ್ಯ ಒದಗಿಸಿ ಪಂಚಾಯಿತಿ ಆದಾಯ ಮೂಲ ವೃದ್ಧಿಗೊಳಿಸುವುದಾಗಿ ತಿಳಿಸಿದರು.
ಉಪಾಧ್ಯಕ್ಷೆ ನಿರ್ಮಲ ಮಾತನಾಡಿ, ಸರ್ಕಾರದಿಂದ ಬರುವ ಎಲ್ಲಾ ಅನುದಾನವನ್ನು ಸದ್ಬಳಕೆ ಮಾಡಿ ಗುಡಿಸಲು ಮುಕ್ತ ಗ್ರಾಮಗಳ ರಚನೆ ಜೊತೆಗೆ ಕುಡಿಯುವ ನೀರು ಸೌಲಭ್ಯ, ಸ್ವಚ್ಛತೆಗೆ ಆದ್ಯತೆ ಹಾಗೂ ಇಲ್ಲಿನ ಕೃಷಿಕ ವರ್ಗಕ್ಕೆ ಅನುಕೂಲ ಮಾಡುವ ಯೋಜನೆ ಹಾಗೂ ಹಿಂದುಳಿದ ಈ ಪಂಚಾಯಿತಿಗೆ ಅಗತ್ಯ ಸವಲತ್ತು ಸರ್ಕಾರದಿಂದ ತರಲಾಗುವುದು. ನೀರಾವರಿ ಯೋಜನೆ ಸಾಕಾರಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮುಖಂಡರಾದ ಇತರರು ಇದ್ದರು. ಮುಖಂಡರಾದ ಗುರುರೇಣುಕಾರಾಧ್ಯ, ನೀಲಕಂಠಪ್ಪ, ರಮೇಶ್, ಮರಿಲಿಂಗಯ್ಯ, ಅನಿಲ್ ಕುಮಾರ್, ಕರಿಬಸವಯ್ಯ, ರವಿ, ವೇಣುಗೋಪಾಲ್, ರಾಮಚಂದ್ರಯ್ಯ, ಕರಿಬಸವಯ್ಯ ಇತರರು ಇದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB