ಮಧುಗಿರಿ: ಕವಣದಾಲ ಆದಿ ಜಂಬವ ಬಾಯ್ಸ್ ಜನಾಂಗದ ವತಿಯಿಂದ ಗಣಪತಿ ವಿಗ್ರಹ ಮೆರವಣಿಗೆ ತಾಲೂಕಿನ ದೊಡ್ಡೇರಿ ಹೋಬಳಿಯ ಕಾವಣ ದಾಲ ಗ್ರಾಮದಲ್ಲಿ ನಡೆಯಿತು.
ಆದಿ ಜಾಂಬವ ಬಾಯ್ಸ್ ವತಿಯಿಂದ ಹಲವು ದಿನಗಳ ಕಾಲ ಆಯೋಜಿಸಲಾಗಿದ್ದ ಗಣೇಶೋತ್ಸವದಲ್ಲಿ ಪ್ರತಿ ದಿನವೂ ಒಂದೊಂದು ವಿಶಿಷ್ಟ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯಲಾಯಿತು.
ಉತ್ಸವದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಗಿತ್ತು. ಗ್ರಾಮದ ನಿವಾಸಿಗಳು ಮೆರವಣಿಗೆಯ ಮೂಲಕ ಸಾಗಿ ಕವಣದಾಲ ಕೆರೆಗೆ ಗಣೇಶನ ಮೂರ್ತಿಯನ್ನು ವಿಸರ್ಜಿಸಲಾಯಿತು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz