nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ

    November 7, 2025

    ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!

    November 7, 2025

    ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !

    November 7, 2025
    Facebook Twitter Instagram
    ಟ್ರೆಂಡಿಂಗ್
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    • ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್
    • ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿ
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್
    ತಿಪಟೂರು December 26, 2021

    ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್

    By adminDecember 26, 2021No Comments2 Mins Read
    adi jambhava

    namma tumakuru

    ತಿಪಟೂರು: ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದು ಡಾ.ಶ್ರೀಧರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.


    Provided by
    Provided by

    ನಗರದ ಶಿಕ್ಷಕರ ಭವನದಲ್ಲಿ ಶ್ರೀ ಆದಿಜಾಂಬವ ಪರಿಶಿಷ್ಟ ಜಾತಿ ವಿವಿಧೋದ್ದೇಶ ಸಹಕಾರಿ ಸಂಘ ಹಮ್ಮಿಕೊಂಡಿದ್ದ 7 ನೇ ವರ್ಷದ ಸರ್ವ ಸದಸ್ಯರುಗಳ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಸಿ ದೀಪಬೆಳಗುವ ಮೂಲಕ ಕಾರ್ಯಕ್ರಮವನ್ನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೂಲ ಆಶಯದಂತೆ ಸಹಕಾರಿ ಕ್ಷೇತ್ರದಲ್ಲಿ “ಎಲ್ಲರಿಗಾಗಿ ಒಬ್ಬರು, ಒಬ್ಬರಿಗಾಗಿ ಎಲ್ಲರೂ” ಎಂಬ ಸಹಕಾರಿ ಮಂತ್ರದಂತೆ ನಾವು ನಡೆಯಬೇಕು. ನಿತ್ಯ ದುಡಿದು ಬದುಕುವ ವರ್ಗಕ್ಕೆ ನಮ್ಮದೆ  ಆದಂತಹ ಸಹಕಾರಿ ಬ್ಯಾಂಕ್ ಇದ್ದಾಗ ನಮಗೆ ಸಹಕಾರಿಯಾಗುತ್ತದೆ ಎಂದರು.

    ಈ ದೇಶಕ್ಕೆ ಒಂದು ಸಂವಿಧಾನವಿಲ್ಲದೆ ಇದ್ದಾಗ ಆಶಾಕಿರಣವಾಗಿ ಬಂದವರು ಡಾ.ಬಿ.ಆರ್. ಅಂಬೇಡ್ಕರ್, ಅವರು ತಳ ಸಮುದಾಯಗಳ ಅಭಿವೃದ್ದಿಗಾಗಿ ಅಂದೇ  ಸಂವಿಧಾನದಲ್ಲಿ ಮೀಸಲಾತಿಯನ್ನು ಅಳವಡಿಸಿದ್ದರು, ಅದನ್ನು ಪ್ರತಿಯೊಬ್ಬರು ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಲಹೆ ನೀಡಿದರು.

    ಜನರು ಆರ್ಥಿಕವಾಗಿ ಸಬಲರಾಗದಿದ್ದರೆ ಮಾತ್ರ ಸಮಾಜ ಅವರನ್ನ ಬೇರೆಯದೆ ರೀತಿಯಾಗಿ ನೋಡುತ್ತದೆ. ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದರು. ಉದ್ಯಮಿಯಾಗಲು ಯಾವುದೇ ಶಿಕ್ಷಣ ಬೇಕಾಗಿಲ್ಲ, ವ್ಯವಹಾರ ಜ್ಞಾನ, ದೃಢ ಸಂಕಲ್ಪವೊಂದಿದ್ದರೆ ಸಾಕು ಯಾರು ಬೇಕಾದ್ರೂ ಉದ್ಯಮಿಯಾಗಬಹುದು ಎಂದರು.

    ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ ಮಹದೇವಯ್ಯ ಮಾತನಾಡಿ, ಸಹಕಾರ ಸಂಘದ ಬೆಳವಣಿಗೆಗೆ ಸದಸ್ಯರ ಹಾಗೂ ಶೇರುದಾರರ ಸಹಕಾರ ಅತಿ ಮುಖ್ಯವಾಗಿದೆ. ನಮ್ಮ ಸಂಘ ಸಮುದಾಯದ ಅಭಿವೃದ್ದಿ  ಉದ್ದೇಶದಿಂದ ಸ್ಥಾಪನೆಯಾಗಿದ್ದು, ಸಮಾಜದ ಬಂಧುಗಳು ಸಂಘದಲ್ಲಿ ಹೆಚ್ಚನ ಪ್ರಮಾಣದಲ್ಲಿ ಶೇರು ಹಾಗೂ ಠೇವಣಿ ಇಡಬೇಕು.  ಮೂಲಕ ತಾವು ಲಾಭಾಂಶ ಪಡೆಯುವ ಜೊತೆಗೆ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು

    ಬಳಿಕ ಎಸ್ ಎಸ್ ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನ‌ ನೀಡಿ ಗೌರವಿಸಿದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿರುವ ಸಮಾಜದ ಹಲವರಿಗೆ ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಆರಂಭದಲ್ಲಿ ಕೋವಿಡ್ ಹಾಗೂ ಇತರೆ ಕಾರಣಗಳಿಂದ ಅಕಾಲಿಕವಾಗಿ ನಿಧನರಾದ ಆದಿಜಾಂಬವ ಸಮಾಜದ ಮುಖಂಡರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಕಾರ್ಯಕ್ರಮದಲ್ಲಿ ನರಸಿಂಹಮೂರ್ತಿ ಕೆಇಬಿ, ಮಹಾದೇವಯ್ಯ, ಕೆ.ರಾಮಯ್ಯ, ಪಟ್ಟಾಭಿರಾಮು, ಮೈಲಾರಪ್ಪ, ರಾಜಶೇಖರ್, ಸಂತೋಷ್, ಪತ್ರಕರ್ತ ಕೃಷ್ಣ ಹಾಗೂ ಹರ್ಷ, ರೋಹಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್

    October 30, 2025

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ

    November 7, 2025

    ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ–ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಬಂದ್ ಮಾಡಿ, ಹುಲಿ ಸೆರೆ…

    ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!

    November 7, 2025

    ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !

    November 7, 2025

    ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.