nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್
    ತಿಪಟೂರು December 26, 2021

    ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್

    By adminDecember 26, 2021No Comments2 Mins Read
    adi jambhava

    namma tumakuru

    ತಿಪಟೂರು: ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದು ಡಾ.ಶ್ರೀಧರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.


    Provided by

    ನಗರದ ಶಿಕ್ಷಕರ ಭವನದಲ್ಲಿ ಶ್ರೀ ಆದಿಜಾಂಬವ ಪರಿಶಿಷ್ಟ ಜಾತಿ ವಿವಿಧೋದ್ದೇಶ ಸಹಕಾರಿ ಸಂಘ ಹಮ್ಮಿಕೊಂಡಿದ್ದ 7 ನೇ ವರ್ಷದ ಸರ್ವ ಸದಸ್ಯರುಗಳ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಸಿ ದೀಪಬೆಳಗುವ ಮೂಲಕ ಕಾರ್ಯಕ್ರಮವನ್ನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೂಲ ಆಶಯದಂತೆ ಸಹಕಾರಿ ಕ್ಷೇತ್ರದಲ್ಲಿ “ಎಲ್ಲರಿಗಾಗಿ ಒಬ್ಬರು, ಒಬ್ಬರಿಗಾಗಿ ಎಲ್ಲರೂ” ಎಂಬ ಸಹಕಾರಿ ಮಂತ್ರದಂತೆ ನಾವು ನಡೆಯಬೇಕು. ನಿತ್ಯ ದುಡಿದು ಬದುಕುವ ವರ್ಗಕ್ಕೆ ನಮ್ಮದೆ  ಆದಂತಹ ಸಹಕಾರಿ ಬ್ಯಾಂಕ್ ಇದ್ದಾಗ ನಮಗೆ ಸಹಕಾರಿಯಾಗುತ್ತದೆ ಎಂದರು.

    ಈ ದೇಶಕ್ಕೆ ಒಂದು ಸಂವಿಧಾನವಿಲ್ಲದೆ ಇದ್ದಾಗ ಆಶಾಕಿರಣವಾಗಿ ಬಂದವರು ಡಾ.ಬಿ.ಆರ್. ಅಂಬೇಡ್ಕರ್, ಅವರು ತಳ ಸಮುದಾಯಗಳ ಅಭಿವೃದ್ದಿಗಾಗಿ ಅಂದೇ  ಸಂವಿಧಾನದಲ್ಲಿ ಮೀಸಲಾತಿಯನ್ನು ಅಳವಡಿಸಿದ್ದರು, ಅದನ್ನು ಪ್ರತಿಯೊಬ್ಬರು ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಲಹೆ ನೀಡಿದರು.

    ಜನರು ಆರ್ಥಿಕವಾಗಿ ಸಬಲರಾಗದಿದ್ದರೆ ಮಾತ್ರ ಸಮಾಜ ಅವರನ್ನ ಬೇರೆಯದೆ ರೀತಿಯಾಗಿ ನೋಡುತ್ತದೆ. ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದರು. ಉದ್ಯಮಿಯಾಗಲು ಯಾವುದೇ ಶಿಕ್ಷಣ ಬೇಕಾಗಿಲ್ಲ, ವ್ಯವಹಾರ ಜ್ಞಾನ, ದೃಢ ಸಂಕಲ್ಪವೊಂದಿದ್ದರೆ ಸಾಕು ಯಾರು ಬೇಕಾದ್ರೂ ಉದ್ಯಮಿಯಾಗಬಹುದು ಎಂದರು.

    ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ ಮಹದೇವಯ್ಯ ಮಾತನಾಡಿ, ಸಹಕಾರ ಸಂಘದ ಬೆಳವಣಿಗೆಗೆ ಸದಸ್ಯರ ಹಾಗೂ ಶೇರುದಾರರ ಸಹಕಾರ ಅತಿ ಮುಖ್ಯವಾಗಿದೆ. ನಮ್ಮ ಸಂಘ ಸಮುದಾಯದ ಅಭಿವೃದ್ದಿ  ಉದ್ದೇಶದಿಂದ ಸ್ಥಾಪನೆಯಾಗಿದ್ದು, ಸಮಾಜದ ಬಂಧುಗಳು ಸಂಘದಲ್ಲಿ ಹೆಚ್ಚನ ಪ್ರಮಾಣದಲ್ಲಿ ಶೇರು ಹಾಗೂ ಠೇವಣಿ ಇಡಬೇಕು.  ಮೂಲಕ ತಾವು ಲಾಭಾಂಶ ಪಡೆಯುವ ಜೊತೆಗೆ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು

    ಬಳಿಕ ಎಸ್ ಎಸ್ ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನ‌ ನೀಡಿ ಗೌರವಿಸಿದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿರುವ ಸಮಾಜದ ಹಲವರಿಗೆ ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಆರಂಭದಲ್ಲಿ ಕೋವಿಡ್ ಹಾಗೂ ಇತರೆ ಕಾರಣಗಳಿಂದ ಅಕಾಲಿಕವಾಗಿ ನಿಧನರಾದ ಆದಿಜಾಂಬವ ಸಮಾಜದ ಮುಖಂಡರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಕಾರ್ಯಕ್ರಮದಲ್ಲಿ ನರಸಿಂಹಮೂರ್ತಿ ಕೆಇಬಿ, ಮಹಾದೇವಯ್ಯ, ಕೆ.ರಾಮಯ್ಯ, ಪಟ್ಟಾಭಿರಾಮು, ಮೈಲಾರಪ್ಪ, ರಾಜಶೇಖರ್, ಸಂತೋಷ್, ಪತ್ರಕರ್ತ ಕೃಷ್ಣ ಹಾಗೂ ಹರ್ಷ, ರೋಹಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರು: ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬ: ದಯಾಮರಣಕ್ಕೆ ಆಗ್ರಹ

    June 17, 2025

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ:  ರೈತರಿಗೆ ಫಸಲ್ ಭೀಮಾ ನೋಂದಾವಣೆಗೆ ಚಾಲನೆ

    June 14, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ ಎನ್ ಬಿಎ ಮಾನ್ಯತೆ

    June 13, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.