ಗುಬ್ಬಿ: ಫೆಬ್ರವರಿ ತಿಂಗಳಲ್ಲಿ ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಕೂಡ ಶೀಘ್ರದಲ್ಲೇ ಆಡಳಿತ ಅಧಿಕಾರಿಗಳನ್ನು ನೇಮಿಸಲಾಗುತ್ತದೆ, ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ತಾಲೂಕಿನ ಮಂಚಲದೊರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನೂತನ ಹಾಲಿನ ಡೈರಿ ಕಟ್ಟಡಕ್ಕೆ ಗುದ್ದಲಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಎಸ್.ಆರ್.ಶ್ರೀನಿವಾಸ್, ಸರ್ಕಾರ ಆದೇಶ ಹೊರಡಿಸಿದ ಮೇಲೆ ಯಾವುದೇ ಕಾರಣಕ್ಕೂ ಇರುವ ಆಡಳಿತ ಸಿಬ್ಬಂದಿಗಳನ್ನು ಮುಂದುವರೆಸಲಾಗುವುದಿಲ್ಲ, ಸರ್ಕಾರದ ಆದೇಶ ಮಾಡಿರುವುದರಿಂದ ಬಹುತೇಕ ಮುಂದಿನ ತಿಂಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಅಧಿಕಾರಿಗಳ ನೇಮಿಸಲಾಗುತ್ತದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವವರೆಗೂ ಮಾತ್ರ ಆಡಳಿತ ಅಧಿಕಾರಿಗಳು ಇರುತ್ತಾರೆ. ಈಗಾಗಲೇ ಎಲ್ಲಾ ಸ್ಥಳೀಯ ಚುನಾವಣೆಗಳನ್ನ ಮಾಡಬೇಕೆಂದು ಚುನಾವಣಾ ಆಯೋಗ ಕೂಡ ಸರ್ಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾ ಇದೆ, ಇನ್ನು ಮೂರು ನಾಲ್ಕು ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.
ಮಂಚಲದೊರೆ ಹಾಗೂ ಹುಯಿಲ್ ದೊರೆ ರಸ್ತೆ ಅಭಿವೃದ್ದಿಗೆ, 6 ಕೋಟಿ ಅನುದಾನ ಹಾಕಿದ್ದು ಶ್ರೀಘ್ರದಲ್ಲಿ ಕಾಮಗಾರಿ ಪ್ರಾರಂಭಗೊಳುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುರಾಜು, ಮಾಜಿ ತಾಲ್ಲೂಕ್ ಪಂಚಾಯಿತಿ ಸದಸ್ಯೆ ಕರಿಯಮ್ಮ ರಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿಶಿಕಲಾ ನಿಂಗರಾಜು, ಸದಸ್ಯರಾದ ಬಸವರಾಜು, ಶಂಕುತಲಾ, ಮಂಜುಳಾ ಡೈರಿ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ರಮೇಶ್, ಬಸವರಾಜು, ಕರಿಬಸವಯ್ಯ, ಬಾಬು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


