nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ತುಮಕೂರು November 21, 2024

    14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ

    By adminNovember 21, 2024No Comments2 Mins Read
    Atrocities Case

    ತುಮಕೂರು: ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ತೀರ್ಪು ಹೊರ ಬಿದ್ದಿದೆ. ತುಮಕೂರು ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.

    ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನರ‍್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.
    ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ ಮೀಸೆ ಹನುಮಂತಯ್ಯ ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ– ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ, ರಂಗಯ್ಯ (ರಾಮಯ್ಯ, ಉಮೇಶ್, ಚನ್ನಮ ಮಂಜಣ್ಣ ಮಂಜು,) ಗುರುತಿಸಲಾಗಿದೆ.

    ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು.

    ಪ್ರಕರಣ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ಮಾಹಿತಿ ನೀಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.