nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಭಿಮಾನಿಯ ಅಭಿಮಾನಕ್ಕೆ ಕಣ್ಣೀರು ಹಾಕಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್
    ಕೊರಟಗೆರೆ February 12, 2023

    ಅಭಿಮಾನಿಯ ಅಭಿಮಾನಕ್ಕೆ ಕಣ್ಣೀರು ಹಾಕಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್

    By adminFebruary 12, 2023No Comments2 Mins Read
    g parameshwar
    • ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.

    ಕೊರಟಗೆರೆ:  ಕರ್ನಾಟಕದ ಡಿಸಿಎಂ ಮತ್ತು ಕೊರಟಗೆರೆಯ ಶಾಸಕನಾಗಿ 5ವರ್ಷವು ಜನರ ಒಡನಾಡಿಯಾಗಿ ಪ್ರತಿ ಹಳ್ಳಿಯಲ್ಲೂ ಅಭಿವೃದ್ದಿಯ ಕೆಲಸ ಮಾಡಿದ್ದೇನೆ. ಆದರೇ ನಾನು ಜನರ ಕೈಗೆ ಸಿಗೋದೇ ಇಲ್ಲವೆಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ಆರೋಪ ಮಾಡ್ತಾರೇ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.

    ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಯಾದವ ಸಮುದಾಯದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಕೊರಟಗೆರೆ ಕ್ಷೇತ್ರದ ಜನತೆಯ ಆಶೀರ್ವಾದದಿಂದ ನನಗೆ ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ, ಡಿಸಿಎಂ ಹುದ್ದೆ ದೊರೆತಿದೆ. ಭಾರತದ ಯಾವುದೇ ರಾಜ್ಯಕ್ಕೆ ಹೋದ್ರು ಅಲ್ಲಿ ಕೊರಟಗೆರೆ ಅಂದ್ರೇ ಡಾ.ಜಿ.ಪರಮೇಶ್ವರ್ ಅಂತಾರೇ. ಕೊರಟಗೆರೆ ಕ್ಷೇತ್ರಕ್ಕೆ ಕಳೆದ 5 ವರ್ಷದಲ್ಲಿ 2,500 ಕೋಟಿ ಅನುದಾನ ತಂದು ಮತದಾರರ ಋಣ ತೀರಿಸುವ ಕೆಲಸ ಮಾಡಿದ್ದೇನೆ. ಅಂಕಿಅಂಶದ ದಾಖಲೆಯ ಪುಸ್ತಕ ನೀಡಿ 2023ರ ಚುನಾವಣೆಗೆ ಹೋಗ್ತಿದ್ದೇನೆ ಎಂದು ತಿಳಿಸಿದರು.

    ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಸಣ್ಣಮುದ್ದಯ್ಯ ಮಾತನಾಡಿ, 2023ಕ್ಕೆ ಕೊರಟಗೆರೆ ಕ್ಷೇತ್ರದಿಂದ ಡಾ.ಜಿ.ಪರಮೇಶ್ವರ್ ಮತ್ತೇ ಶಾಸಕರಾದ್ರೇ ಕರ್ನಾಟಕ ರಾಜ್ಯದ ಸಿಎಂ ಆಗ್ತಾರೇ. ಗೊಲ್ಲ ನುಡಿದ ಮಾತು ಎಂದಿಗೂ ಸುಳ್ಳಾಗಲ್ಲ. ಬ್ರೋಕರ್ ಮತ್ತು ದಳ್ಳಾಳಿಗಳ ಮಾತಿಗೆ ಯಾರು ಬೆಲೆ ಕೋಡಬೇಡಿ. ತುಮಕೂರು ಜಿಲ್ಲೆಯ ಗೊಲ್ಲ ಸಮುದಾಯದ ಪ್ರತಿನಿಧಿ ಒಬ್ಬರೇ ಅವರೇ ಪರಮೇಶ್ವರ್. ಪರಮೇಶ್ವರ್ ಸಿಎಂ ಆಗ್ಬೇಕು ಗೊಲ್ಲರು ಎಂಎಲ್‌ ಸಿ ಆಗ್ಬೇಕು ಅದೇ ನಮ್ಮೆಲ್ಲರ ಪ್ರತಿಜ್ಞೆ ಎಂದು ತಿಳಿಸಿದರು.

    ತುಮಕೂರು ಡಿಸಿಸಿ ಬ್ಯಾಂಕು ಉಪಾಧ್ಯಕ್ಷ ಜಿ.ಜೆ.ರಾಜಣ್ಣ ಮಾತನಾಡಿ, ಡಾ.ಜಿ.ಪರಮೇಶ್ವರ್ ಜೊತೆ ಗೊಲ್ಲ ಸಮುದಾಯ 30 ವರ್ಷದಿಂದ ಇದ್ದೀವಿ. 2023ಕ್ಕೆ ಪರಮೇಶ್ವರ್ ಕಡೆಯ ಚುನಾವಣೆ ಆಗಲಿದೆ.  ಜೇಬುಗಳ್ಳರ ಬಗ್ಗೆ ಎಚ್ಚರ ಅಗತ್ಯ. ಯಾರು ಒತ್ತಡಕ್ಕೆ ಒಳಗಾಗದೇ ಒಂದಾಗಿ. ಶ್ರೀಕೃಷ್ಣ ಪರಮಾತ್ಮನ ಹೆಸರಲ್ಲಿ ನಾವು ಘೋಷಣೆ ಮಾಡ್ತೀವಿ. ನಾವೆಲ್ಲರೂ ಮತ್ತೆ ಪರಮೇಶ್ವರ್‌ ಗೆ ಆಶೀರ್ವಾದ ಮಾಡಬೇಕಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಓಬಿಸಿ ಜಿಲ್ಲಾಧ್ಯಕ್ಷ ಪುಟ್ಟರಾಜು, ಕೊರಟಗೆರೆ ಅಧ್ಯಕ್ಷ ಆನಂದ್,  ಮಾಜಿ ತಾಪಂ ಅಧ್ಯಕ್ಷ ಟಿ.ಸಿ.ರಾಮಯ್ಯ, ಸದಸ್ಯ ವೀರಣ್ಣ, ಗ್ರಾಪಂ ಅಧ್ಯಕ್ಷರಾದ ರಾಮಕೃಷ್ಣಯ್ಯ, ಪಾವರ್ತಮ್ಮ, ಶಿವರಾಮಯ್ಯ, ಯಾದವ ಮುಖಂಡರಾದ ರಂಗನಾಥ, ಪುಟ್ಟಣ್ಣ, ವೆಂಕಟೇಶ್, ಕೃಷ್ಣಯ್ಯ, ಚಂದ್ರು, ಲಕ್ಷ್ಮೀನರಸಪ್ಪ ನರೇಂದ್ರ, ಮುತ್ತುರಾಜು, ಶಿವರಾಮು, ಬಸವರಾಜು, ಕಾಂತರಾಜು, ನರಸಿಂಹರಾಜು, ನಾಗರಾಜು ಸೇರಿದಂತೆ ಇತರರು ಇದ್ದರು.

    ಅಭಿಮಾನಕ್ಕೆ ಕಣ್ಣೀರಿಟ್ಟ ಮಾಜಿ ಡಿಸಿಎಂ…

    ಡಾ.ಜಿ.ಪರಮೇಶ್ವರ್ ಸಿಎಂ ಆಗಲೆಂದು ಮಧುಗಿರಿ ತಾಲೂಕು ಹುಣಸೇಮರದಟ್ಟಿಯ ಗೌಡಮುದ್ದಯ್ಯ ಕಳೆದ 25ವರ್ಷದಿಂದ ಗಡ್ಡ ಬಿಟ್ಟಿದ್ದಾರೆ. ನಾನು ಆತನಿಗೇ ಏನು ಸಹಾಯ ಮಾಡಿಲ್ಲ. ಅವನ ಅಭಿಮಾನಕ್ಕೆ ನಾನು ಏನು ಕೊಡಲು ಸಾಧ್ಯವಿಲ್ಲ. ಯಾದವ ಸಮಾಜದ ಗೌಡಮುದ್ದಯ್ಯನ ಅಭಿಮಾನಕ್ಕೆ ನಾನೆಂದು ಚಿರಾಋಣಿ ಆಗಿದ್ದೇನೆ. ನಾನು ಸಿಎಂ ಆಗೇ ಆಗ್ತೀನಿ ಅನ್ನುವ ವಿಶ್ವಾಸ ನನಗಿಂತ ಹೆಚ್ಚು ಆತನಿಗಿದೆ. ಯಾದವ ಸಮುದಾಯ ನನ್ನನ್ನು ಸಾಕಿ ಬೆಳೆಸಿದೆ ಎಂಬುದಕ್ಕೆ ಈತನೇ ಪ್ರಮುಖ ಸಾಕ್ಷಿ ಎಂದು ಯಾದವ ಸಮುದಾಯದ ವೇದಿಕೆಯಲ್ಲೇ ಕಣ್ಣೀರಿಟ್ಟರು.

    “ಕೊರಟಗೆರೆ ಕ್ಷೇತ್ರ ಸೇರಿ ರಾಜ್ಯದ 160ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ, ಡಿಸಿಎಂ ಆಗಿದ್ದಾರೆ. ಸಿಎಂ ಸೀಟಿಗೆ ಇನ್ನೊಂದೇ ಮೆಟ್ಟಿಲು ಬಾಕಿಯಿದೆ.  ಕೊರಟಗೆರೆಯಲ್ಲಿ ಮಾಜಿ ಶಾಸಕ ಮತ್ತೇ ಮಾಜಿನೇ ಆಗ್ತಾರೇ. ಬಿಜೆಪಿ ಪಕ್ಷದ ಅಭ್ಯರ್ಥಿ ಪರಮೇಶ್ವರ್‌ಗೆ ಯಾವತ್ತು ಸಮವಿಲ್ಲ. ಪರಮೇಶ್ವರ್ ಅವರೇ ನಮ್ಮ ಮುಂದಿನ ಸಿಎಂ”

    –ಚಂದ್ರಶೇಖರಗೌಡ. ಜಿಲ್ಲಾಧ್ಯಕ್ಷ. ತುಮಕೂರು.

     

    “ಮಧುಗಿರಿ ನನ್ನ ತವರು ಕ್ಷೇತ್ರ. ಗೊಲ್ಲ ಸಮುದಾಯ ನನ್ನ ಕೈಹಿಡಿದಿದೆ. ಕೊರಟಗೆರೆ ಕ್ಷೇತ್ರವು ನನಗೆ ಕರ್ನಾಟಕದ ಎರಡನೇ ಪ್ರಮುಖ ಸ್ಥಾನ ನೀಡಿದೆ. ದೆಹಲಿಗೆ ಹೋಗಿ ಕೊರಟಗೆರೆ ಅಂದ್ರೇ ಪರಮೇಶ್ವರ್ ಅಂತಾರೇ. ನಾನು ನಿಮ್ಮ ಶಾಸಕ ಆಗೋದಕ್ಕೆ ನನಗೇ ಅರ್ಹತೆ ಇದೇ ಅಲ್ವಾ. ಮತದಾರರ ಆಶೀರ್ವಾದಕ್ಕೆ ಪ್ರತಿಯಾಗಿ ನಾನು ಅಭಿವೃದ್ದಿಯ ಋಣ ತೀರಿಸಿದ್ದೇನೆ”

    — ಡಾ.ಜಿ.ಪರಮೇಶ್ವರ್. ಮಾಜಿ ಡಿಸಿಎಂ. ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.