nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ June 22, 2022

    ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ: ಡಿ.ಕೆ.ಶಿವಕುಮಾರ್

    By adminJune 22, 2022No Comments3 Mins Read
    dk shivakumar

    ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಕಾಂಗ್ರೆಸ್ ಪಕ್ಷದ ಧ್ವನಿ ಅಡಗಿಸಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದ್ದು, ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

    ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ಪೂರ್ವಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಚೇರಿ ಮೇಲೆ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸುತ್ತಿದೆ. ಪಕ್ಷದ ಕಚೇರಿ ನಮಗೆ ದೇವಾಲಯವಿದ್ದಂತೆ. ಆದರೆ ಕೇಂದ್ರ ಸರ್ಕಾರ ಪೊಲೀಸರನ್ನು ಬಳಸಿಕೊಂಡು, ಅಲ್ಲಿಗೆ ಯಾರೂ ಬರಬಾರದು, ಅಲ್ಲಿ ಯಾರೂ ಸೇರುವಂತಿಲ್ಲ ಎಂದು ದಬ್ಬಾಳಿಕೆ ನಡೆಸುತ್ತಿದೆ. ಅದನ್ನು ಖಂಡಿಸಿ ಪ್ರತಿಭಟನೆ ವ್ಯಕ್ತಪಡಿಸಲು ಇಲ್ಲಿಗೆ ಬಂದಿದ್ದೇವೆ. ಇಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಅದರ ಬಗ್ಗೆಯೂ ಅರಿವಿದೆ. ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ಅದೇ ರೀತಿ ಎಲ್ಲರಿಗೂ ರಾಜಕೀಯದಲ್ಲಿ ದಿನಗಳು ಬದಲಾಗುತ್ತವೆ. ಬಿಜೆಪಿಯವರು ಇದನ್ನು ಅರ್ಥ ಮಾಡಿಕೊಂಡಂತೆ ಕಾಣುತ್ತಿಲ್ಲ. ಏನೇ ಆದರೂ ನಾವು ನಮ್ಮ ನಾಯಕರ ಜತೆ ಇರುತ್ತೇವೆ, ಕಷ್ಟಕಾಲದಲ್ಲಿ ಅವರ ಜತೆ ನಿಂತು, ಅವರಿಗೆ ಧೈರ್ಯ ತುಂಬುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ ಎಂದಿದ್ದಾರೆ.


    Provided by
    Provided by

    ಇನ್ನು ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರು, ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಶಾಸಕರನ್ನು ದೆಹಲಿಗೆ ಬರುವಂತೆ ಕರೆ ನೀಡಲಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಸಂಸದರು ಈಗಾಗಲೇ ಬಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅವರನ್ನು ಬಂಧಿಸಿ ಮೂರು ದಿನ ದೆಹಲಿಯ ಹೊರಗಿರುವ ಠಾಣೆಯಲ್ಲಿ ಇಟ್ಟಿದ್ದರು. ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಏಕೈಕ ಸಂಸದರನ್ನು ಪೊಲೀಸರು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂದು ನೋಡಿದ್ದೇವೆ. ನಮ್ಮ ನಾಯಕರು, ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಯುವ ಕಾಂಗ್ರೆಸ್ ಅಧ್ಯಕ್ಷರು ಹೋರಾಟ ಮಾಡದೇ ಇನ್ಯಾರು ಮಾಡಲು ಸಾಧ್ಯ? ಅವರು ದೇಶದ ಯುವಕರ ಪ್ರತಿನಿಧಿ. ಸರ್ಕಾರ ಇವರೆಲ್ಲರಿಗೂ ಯಾವ ರೀತಿ ಕಿರುಕುಳ ನೀಡುತ್ತಿದೆ ಎಂದು ನಾವು ನೋಡಿದ್ದೇವೆ. ರಾಹುಲ್ ಗಾಂಧಿ ಅವರನ್ನು 40 ತಾಸು ವಿಚಾರಣೆ ಮಾಡುವುದೇನಿತ್ತು? ಇದರಲ್ಲಿ ಷಡ್ಯಂತ್ರವಿದೆ. ಇದರಿಂದ ಒಳ್ಳೆಯದಾಗುವುದಿಲ್ಲ. ನಮ್ಮ ನಾಯಕರು ಎಲ್ಲವನ್ನು ಎದುರಿಸಲು ಸಿದ್ಧರಾಗಿದ್ದಾರೆ. ಇನ್ನು ಸೋನಿಯಾ ಗಾಂಧಿ ಅವರು ನಿನ್ನೆ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಅವರನ್ನು 23 ರಂದು ವಿಚಾರಣೆಗೆ ಕರೆದಿದ್ದಾರೆ. ವಿಚಾರಣೆಗೆ ನಾವು ಹೆದರುವುದಿಲ್ಲ. ನಾವು ಅದನ್ನು ಗೌರವಿಸುತ್ತೇವೆ. ಆದರೆ ವಿಚಾರಣೆ ಮಾಡುತ್ತಿರುವ ಸಮಯ, ವಿಧಾನ ನೋಡಿದರೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತರುತ್ತಿದ್ದಾರೆ ಎಂದು ಹೇಳಿದ್ದಾರೆ.

    ವಿಚಾರಣೆಯನ್ನು ಸಾಮಾನ್ಯ ಪ್ರಕ್ರಿಯೆ ಎಂದು ಎದುರಿಸಬಹುದಲ್ಲವೇ? ಪ್ರತಿಭಟನೆ ಯಾಕೆ ಎಂಬ ಪ್ರಕ್ರಿಯೆಗೆ, ಎಷ್ಟು ದಿನ ವಿಚಾರಣೆ ಮಾಡುತ್ತಾರೆ. ನಾವು ಈ ಪ್ರಕರಣ ಅಧ್ಯಯನ ಮಾಡಿದ್ದು, ಕಾಂಗ್ರೆಸ್ ಪಕ್ಷದ ವಿಚಾರ ಹಾಗೂ ಸ್ವಾತಂತ್ರ್ಯ ಹೋರಾಟದ ವಿಚಾರ ಪ್ರಚಾರ ಮಾಡುತ್ತಿದ್ದ ಪತ್ರಿಕೆ ಅದಾಗಿದ್ದು, ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಇದರಲ್ಲಿ ಒಂದು ರೂಪಾಯಿಯೂ ದುರ್ಬಳಕೆಯಾಗಿಲ್ಲ. ಅವರ ಆಸ್ತಿಯಲ್ಲೂ ಘೋಷಣೆ ಮಾಡಿಕೊಂಡಿಲ್ಲ. ಅವರು ಪಕ್ಷದ ಹುದ್ದೆಯಲ್ಲಿರುವ ಕಾರಣ ಅವರು ಷೇರು ಹೊಂದಿದ್ದು, ಅದರಲ್ಲಿ ಯಾವ ಹಣವನ್ನು ಉಪಯೋಗಿಸಿಕೊಂಡಿಲ್ಲ. ಬದಲಿಗೆ ಸಾರ್ವಜನಿಕ ಬದುಕಿನಲ್ಲಿ ಸೇವೆ ಮಾಡುತ್ತಿದ್ದಾರೆ. ಈ ಪ್ರಕರಣ ಮುಗಿದ ಅಧ್ಯಾಯ. ಹೀಗಾಗಿ ಈಗ ವಿಚಾರಣೆಗೆ ಕರೆದಿರುವುದೇ ತಪ್ಪು. ಕೇವಲ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣದ ವಿಚಾರಣೆ ಮಾತ್ರ ಯಾಕೆ? ಬೇರೆ ಪ್ರಕರಣಗಳ ವಿಚಾರಣೆ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ.

    ಗಾಂಧಿ ಕುಟುಂಬದವರು ಕಾನೂನಿಗೆ ಅತೀತರೇ ಎಂಬ ಬಿಜೆಪಿ ವಾದದ ಕುರಿತು ಕೇಳಿದ ಪ್ರಶ್ನೆಗೆ, ಇದು ಆದಾಯ ತೆರಿಗೆ ಇಲಾಖೆ ವಿಚಾರವೇ ಹೊರತು, ಇದರಲ್ಲಿ ಹಣಕಾಸು ಅವ್ಯವಹಾರ ಏನಿದೆ? ಹಣ ಸಿಕ್ಕಿದೆಯೇ? ಎಂದು ಕೇಳಿದ್ದಾರೆ.

    ರಾಹುಲ್ ಗಾಂಧಿ ಅವರ ಘನತೆ ಹೆಚ್ಚಿಸಲು ಈ ಹೋರಾಟ ಮಾಡುತ್ತಿದೆಯೇ ಎಂಬ ಪ್ರಶ್ನೆಗೆ, ರಾಹುಲ್ ಗಾಂಧಿ ಅವರು ಈ ದೇಶ ಒಂದು ಮಾಡಲು ಭಾರತ್ ಜೋಡೋ ಯಾತ್ರೆ ಮಾಡಲು ಹೊರಟಿದ್ದಾರೆ. ಅದು ನಡೆದರೆ ಪಕ್ಷಕ್ಕೆ ಶಕ್ತಿ ಬರಲಿದೆ. ಹೀಗಾಗಿ ಇದನ್ನು ತಡೆಯಲು ಈ ರೀತಿ ಮಾಡುತ್ತಿದ್ದಾರೆ. ಉದಯಪುರ ಸಭೆಯಲ್ಲಿ ನಾವು ಈ ಘೋಷಣೆ ಮಾಡುತ್ತಿದ್ದಂತೆ, ಅವರ ಘನತೆಗೆ ಮಸಿ ಬಳಿಯಲು, ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲು ಸರ್ಕಾರ ಈ ಪ್ರಯತ್ನ ಮಾಡುತ್ತಿದೆ ಎಂದು ಉತ್ತರಿಸಿದ್ದಾರೆ.

    ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, 10 ಶಾಸಕರು ಸೂರತ್ ನಲ್ಲಿ ಇದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದ್ದಾರೆ. ಆದರೆ ನನಗೆ ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾನು ಮಹಾರಾಷ್ಟ್ರದ ಉಸ್ತುವಾರಿಯೂ ಅಲ್ಲ. ನಾನು ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿಚಾರ ಇದ್ದರೆ ಆ ಬಗ್ಗೆ ಮಾತ್ರ ಮಾತನಾಡುತ್ತೇನೆ ಎಂದು ಉತ್ತರಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.