ತುಮಕೂರು: NEET UG ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿದ್ದು, ಈ ಕುರಿತು ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವವರಿಗೆ ನಿದರ್ಶನೀಯ ಶಿಕ್ಷೆ ವಿಧಿಸಿ ಹಾಗೂ NTAಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಎಐಡಿಎಸ್ ಓ ವತಿಯಿಂದ ನಗರದ ಕೋತಿತೋಪು ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಅವರು ಮಾತನಾಡಿ, ಇಂದು ಎಲ್ಲಾ ಸರ್ಕಾರಗಳು ಶಿಕ್ಷಣವನ್ನ ವ್ಯಾಪಾರದ ವಸ್ತುವನ್ನಾಗಿಸುತ್ತಿವೆ. ಅದರಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗಗನ ಕುಸುಮವೇ ಆಗುತ್ತಿದೆ. ತಂದೆ ತಾಯಿಗಳು ಕೂಡ ಮಕ್ಕಳ ಕನಸನ್ನು ಈಡೇರಿಸಲು ಸಾಲ-ಸೂಲಾ ಮಾಡಿ ಓದಿಸುತ್ತಾರೆ. ತಮ್ಮ – ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಹಗಲಿರುಳೆನ್ನದೇ ಪರಿಶ್ರಮ ಹಾಕಿ ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಅನ್ಯವಾಗಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವ NTA ಯನ್ನು ರದ್ದುಗೊಳಿಸಬೇಕು ಹಾಗೂ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ ಓ ನ ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರಾದ ಭರತ್ , ಸೈಯದ್, ಸಂಘಟನಾಕಾರರಾದ ಸಂದೀಪ್, ಭೂತೇಶ್, ಮಲ್ಲಿಕಾರ್ಜುನ್, ನಿತಿನ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


