ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋವಳಿಯ ನೀಲಮ್ಮನಹಳ್ಳಿ ಗ್ರಾಮದ ಆಕರ್ಷಣೆ ವಿದ್ಯಾ ಸಂಸ್ಥೆ ಬಲ್ಲೇನಹಳ್ಳಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಎಸ್. ತಮ್ಮಪ್ಪನವರು ನಿವೃತ್ತರಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಸಿಬ್ಬಂದಿ ಬೀಳ್ಕೊಡುಗೆ ಸಮಾರಂಭ ಆಯೋಜಿಸುವ ಮೂಲಕ ಎಸ್. ತಮ್ಮಪ್ಪನವರ ಸೇವೆಗೆ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ತಮ್ಮಪ್ಪನವರು, ಆಕರ್ಷಣೆ ಸಂಸ್ಥೆಯ ಕುರಿತು ಮಾತನಾಡಿ, ಸುಮಾರು 30ವರ್ಷಗಳಿಂದ ಶಾಲೆ ಮೇಲ್ಛಾವಣಿ ಇಲ್ಲದೇ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಕಷ್ಟಪಡುವಂತಾಗಿತ್ತು. ಈ ಸಮಸ್ಯೆಗಳನ್ನು ಕಂಡ ನೀಲಮ್ಮನಹಳ್ಳಿ ಆಧಿಶೇಷ ಮತ್ತು ಛಲಪತಿ ಹಾಗೂ ಭೂಶಪ್ಪ ಇವರು ಹೆಂಚಿನ ಮನೆ ಕೊಟ್ಟು ಮಕ್ಕಳಿಗೆ ಶಿಕ್ಷಣ ನೀಡಲು ವ್ಯವಸ್ಥೆ ಮಾಡಿಕೊಟ್ಟರು. ಈ ಸಂಸ್ಥೆಯ ಕಾರ್ಯದರ್ಶಿಗಳಾದ ಬಲರಾಮಯ್ಯ ಇವರು ಶಾಲೆಗೆ 3 ಎಕರೆ ಜಮೀನು ನೀಡಿದರು. ಈ ಶಾಲೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾನ್ಯತೆ ನೀಡಿದರು ಎಂದು ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯಾದವ ಸಂಘದ ಅಧ್ಯಕ್ಷ ನರಸಿಂಹಪ್ಪ, ಕೆಪಿಸಿಸಿ ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ಮೈಲಾರರೆಡ್ಡಿ, ರಾಮಯ್ಯ ನಿವೃತ್ತ ಪೊಲೀಸ್ ಅಧಿಕಾರಿ, ಕೋಳಿ ಬಾಲಾಜಿ, ಬೆಸ್ಕಾಂ ಯರ್ರಪ್ಪ, ಕೆ.ಟಿ.ಹಳ್ಳಿ ಚಿಕ್ಕಣ್ಣಹಾಗೂ ಕಾರ್ಯದರ್ಶಿ, ಸಿಬ್ಬಂದಿ, ಆಕರ್ಷಣೆ ಪ್ರೌಢಶಾಲೆ ನೀಲಮ್ಮನಹಳ್ಳಿಯ ವಿದ್ಯಾರ್ಥಿಗಳು ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ: ದೇವರಹಟ್ಟಿ ನಾಗರಾಜ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5