nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    • ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
    • ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಕ್ಕು ಬಾಧ್ಯತೆ ಅಡಿಯಲ್ಲಿ ಅಕ್ಕಿರಾಂಪುರ ಗ್ರಾ.ಪಂ. ಬಿಲ್ ಕಲೆಕ್ಟರ್ ಮತ್ತು ನರೇಗಾ ಕಂಪ್ಯೂಟರ್ ಆಪರೇಟರ್ ನೌಕರರ ಅಮಾನತು
    ಜಿಲ್ಲಾ ಸುದ್ದಿ December 15, 2023

    ಹಕ್ಕು ಬಾಧ್ಯತೆ ಅಡಿಯಲ್ಲಿ ಅಕ್ಕಿರಾಂಪುರ ಗ್ರಾ.ಪಂ. ಬಿಲ್ ಕಲೆಕ್ಟರ್ ಮತ್ತು ನರೇಗಾ ಕಂಪ್ಯೂಟರ್ ಆಪರೇಟರ್ ನೌಕರರ ಅಮಾನತು

    By adminDecember 15, 2023No Comments2 Mins Read
    korategere

    ಕೊರಟಗೆರೆ: ಗ್ರಾಮ ಪಂಚಾಯಿತಿಯೊಂದರ ಕರವಸೂಲಿ ಮಾಡುವ ಬಿಲ್ ಕಲೆಕ್ಟರ್ 1.5ಲಕ್ಷ ಹಣ ದುರುಪಯೋಗ ಹಾಗೂ ನರೇಗಾ (ಎನ್ ಆರ್ ಇ ಜಿ ಎ) ಕಂಪ್ಯೂಟರ್ ಆಪರೇಟರ್ ಕರ್ತವ್ಯ ಲೋಪವೆಸಿಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿರುವ ಘಟನೆಯೊಂದು ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.

    ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿಯಲ್ಲಿ ಡಿಸೆಂಬರ್ 11ರ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಂಜುನಮ್ಮ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಪಂಚಾಯತಿಯ ಕಂದಾಯ ವಸೂಲಿಗಾರ ಅಂಜನಪ್ಪ ಹಾಗೂ ನರೇಗಾ ಕಂಪ್ಯೂಟರ್ ಆಪರೇಟರ್ ಮಂಜುನಾಥ್ ಹೆಚ್.ಎಂ ಎಂಬುವರನ್ನು ಕರ್ತವ್ಯ ಲೋಪ ಹಾಗೂ ಹಣ ದುರುಪಯೋಗ ಕಾರಣಗೊಂಡಿ, ಇಬ್ಬರು ನೌಕರರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


    Provided by
    Provided by

    ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿಷಯ ಸೂಚನೆ ಸಂಖ್ಯೆ ಏಳರ ಅಡಿಯಲ್ಲಿ ಗ್ರಾಮ ಪಂಚಾಯಿತಿ ಕಂದಾಯ ವಸೂಲಿದಾರ ಅಂಜಿನಪ್ಪ ಎಂಬುವರನ್ನು ಸಾಮಾನ್ಯ ಸಭೆಯಲ್ಲಿ ಲೆಕ್ಕಪತ್ರ ವಿಚಾರಿಸಿದ ಸಂದರ್ಭದಲ್ಲಿ ಸಮರ್ಪಕವಾಗಿ ಉತ್ತರ ಕೊಡದೆ ನುಸುಳಿಕೊಂಡು ಹೋಗುತ್ತಿದ್ದಂತಹ ಸಂದರ್ಭದಲ್ಲಿ, ಮೇಲ್ನೋಟಕ್ಕೆ ಲೋಪ ಕಂಡುಬಂದ ಕಾರಣ ಕುಲಂಕುಶವಾಗಿ ಲೆಕ್ಕಪತ್ರ ವಿಚಾರಿಸಿದಾಗ 1.5 ಲಕ್ಷ ಹಣ ದುರುಪಯೋಗವಾಗಿರುವುದರ ಬಗ್ಗೆ ಕಂಡುಬಂದ ತಕ್ಷಣ ಸಭೆಯಲ್ಲಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

    ಕರ ವಸೂಲಿಗಾರ ಅಂಜಿನಪ್ಪ ಮೊದಲಿನಿಂದಲೂ ಗ್ರಾಮ ಪಂಚಾಯಿತಿಯಲ್ಲಿ ಸಮರ್ಪಕವಾಗಿ ಕರವಸೂಲಾತಿಯ ಹಣವನ್ನ ಗ್ರಾಮ ಪಂಚಾಯಿತಿಯ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತಿಲ್ಲ ಎಂಬ ಆರೋಪದ ಮೇಲೆ ಸಾಮಾನ್ಯ ಸಭೆಯಲ್ಲಿ ಸದಸ್ಯರುಗಳು ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಂಗಡಿ ಮಳಿಗೆಗಳ ಮತ್ತು ಸಂತೆ ಮತ್ತು ವಾಹನಗಳ ಸುಂಕ ಮತ್ತು ಕಂದಾಯ ವಸೂಲಾತಿ ಹಣ ಕಳೆದ ಮೂರು ತಿಂಗಳಿನಿಂದ 1.5 ಲಕ್ಷ ಹಣವನ್ನು ಬ್ಯಾಂಕಿಗೆ ಜಮಗೊಳಿಸದೆ ತಾನೇ ಬಳಸಿಕೊಂಡಿರುವುದು ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಂಜನಪ್ಪನವರನ್ನು ತತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಅಂಜನಪ್ಪನವರ ಮೂರು ತಿಂಗಳ ಸುಂಕ ವಸೂಲಿ ಹಾಗೂ ಕರ ವಸೂಲತಿಯಲ್ಲಿ ಕೇವಲ 3 ತಿಂಗಳಲ್ಲಿಯೇ 3 ಲಕ್ಷ ಹಣ ದುರುಪಯೋಗ ಕಂಡು ಬಂದರೆ ಸುಮಾರು ವರ್ಷಗಳಿಂದ ಕೆಲಸ ಮಾಡಿರುವ ಇವರು ಗ್ರಾಮ ಪಂಚಾಯಿತಿಗೆ ಇನ್ನೆಷ್ಟು ಹಣ ದುರುಪಯೋಗ ಪಡಿಸಿಕೊಂಡಿರಬಹುದು ಎಂದು ಸದಸ್ಯರ ವಾದವಾಗಿದ್ದು ಸಮಗ್ರ ತನಿಖೆ ನಡೆಸಬೇಕು ಎಂದು ಸಹ ತಾಲೂಕು ಪಂಚಾಯತ ಜಿಲ್ಲಾ ಪಂಚಾಯಿತಿಯನ್ನ ಒತ್ತಾಯಿಸಿದ್ದಾರೆ.

    ಉಳಿದಂತೆ ನರೇಗಾ (ಎನ್ ಆರ್ ಇ ಜಿ ಎ) ಕಂಪ್ಯೂಟರ್ ಆಪರೇಟರ್ ಮಂಜುನಾಥ್ ಎಚ್ ಎಂ ಎಂಬುವರನ್ನು ಸಹ ವಿಷಯ ಸೂಚಿ ಸಂಖ್ಯೆ 7ಅನ್ವಯ ಗ್ರಾಮ ಪಂಚಾಯಿತಿಯ ಕಚೇರಿ ಕರ್ತವ್ಯ ನಿರ್ಲಕ್ಷತೆ ಆದರಿಸಿ ಗ್ರಾಮ ಪಂಚಾಯಿತಿ ಸದಸ್ಯಗಳ ಸರ್ವಾನುಮತದ ಅಭಿಪ್ರಾಯದ ಮೇಲೆ ತತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    ನರೇಗಾ ಕಂಪ್ಯೂಟರ್ ಆಪರೇಟರ್ ಮಂಜುನಾಥ್ ಹೆಚ್.ಎಂ ಗ್ರಾಮ ಪಂಚಾಯಿತಿಗೆ ಅನಾದಿಕೃತವಾಗಿ ಗೈರು ಹಾಜರಿ, ಸಾರ್ವಜನಿಕರಿಗೆ ಸ್ಪಂದನೆ ಮಾಡದಿರುವುದು, ನರೇಗಾ ಯೋಜನೆ ಎಂ ಜಿ ಎನ್ ಆರ್ ಇ ಜಿ ಎ ಯೋಜನೆ ಅಡಿ ವೈಯಕ್ತಿಕ ಫಲಾನುಭವಿಗಳಿಗೆ ಎನ್.ಎಂ.ಆರ್ ಸೃಜನ ಮಾಡದಿರುವುದು, ವಸತಿ ಯೋಜನೆಗಳ ಜಿಪಿಎಸ್ ಗಳನ್ನು ಸರಿಯಾಗಿ ಕ್ರಮವಹಿಸಿ ಮಾಡದೆ ತಪ್ಪಾಗಿ ಜಿಪಿಎಸ್ ಮಾಡಿ ಸುಮಾರು ಐದು ಮನೆಗಳ ತಾಂತ್ರಿಕ ತೊಂದರೆಯನ್ನಾಗಿ ಅನುಮೋದನೆ ಗೊಳಿಸದಿರುವುದು, ಕಚೇರಿ ಕರ್ತವ್ಯಕ್ಕೆ ಹಾಜರಾಗಿ ತದನಂತರ ಅಧ್ಯಕ್ಷರ ಮತ್ತು ಮೇಲಧಿಕಾರಿಗಳ ಗಮನಕ್ಕೆ ಬಾರದೆ ಕಚೇರಿ ಬಿಟ್ಟು ಹೋಗುವುದು ಕರೆ ಸ್ವೀಕರಿಸದೆ ಸ್ವಿಚ್ ಆಫ್ ಮಾಡುವುದು, ಇವರ ಕರ್ತವ್ಯ ಲೋಕದಿಂದ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕರಿಗೆ ಸಮರ್ಪಕ ಕೆಲಸವಾಗದಿರುವ ಕಾರಣ ಬೇಸತ್ತು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಒಟ್ಟಾರೆ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ತಡವಾಗಿಯಾದರೂ ಎಚ್ಚೆತ್ತುಕೊಂಡಿದ್ದು, ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕರ ಕರ್ತವ್ಯ ನಿರ್ಲಕ್ಷ ವಹಿಸುತ್ತಿರುವ ನೌಕರರ ವಿರುದ್ಧ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಹಾಗೂ ಸದಸ್ಯರ ಹಕ್ಕು ಬಾಧ್ಯತೆ ಅಡಿಯಲ್ಲಿ ನೌಕರರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿರುವುದು ಇತರ ಗ್ರಾಮ ಪಂಚಾಯಿತಿ ನೌಕರರಿಗೆ ಎಚ್ಚರಿಕೆಯ ಗಂಟೆಯಾದಂತ್ತಾಗಿದೆ…

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.

    admin
    • Website

    Related Posts

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ:  ಮಧುಗಿರಿ ಪಟ್ಟಣದಲ್ಲಿ ಸೊಳ್ಳೆಯ ಕಾಟಕ್ಕೆ ಜನ ಬೇಸತ್ತಿದ್ದಾರೆ. ಪಟ್ಟಣದ ಎಲ್ಲೆಡೆಗಳಲ್ಲಿ  ಸೊಳ್ಳೆಗಳ ವಿಪರೀತ ಕಾಟಕ್ಕೆ ಜನ ಬಳಲಿ ಬೆಂಡಾಗಿದ್ದಾರೆ.…

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.