nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಕಿರಾಂಪುರ ಗ್ರಾ.ಪಂ. ಸದಸ್ಯರಿಂದ ರಾಜಿನಾಮೆ ಪರ್ವ: ಕಂದಾಯ ವಸೂಲಾತಿ ಪುಸ್ತಕಗಳೇ ಇಲ್ವಂತೆ
    ಕೊರಟಗೆರೆ February 5, 2025

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯರಿಂದ ರಾಜಿನಾಮೆ ಪರ್ವ: ಕಂದಾಯ ವಸೂಲಾತಿ ಪುಸ್ತಕಗಳೇ ಇಲ್ವಂತೆ

    By adminFebruary 5, 2025No Comments2 Mins Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿಗೆ 15 ದಿನಕ್ಕೊಮ್ಮೆ ಮಾತ್ರ ಪಿಡಿಓ ಬರ್ತಾರೇ. ಸಾಮಾನ್ಯ ಸಭೆಯೇ ಮಾಡದೇ ಪಿಡಿಓ ಮನೆಯ ಬಳಿ ಹೋಗಿ ಸದಸ್ಯರ ಸಹಿ ಪಡಿತಾರೇ. ಅನುದಾನದ ಲೆಕ್ಕಾ ಕೇಳಿದ್ರೇ ಗ್ರಾ.ಪಂ.ಯ ಪಿಡಿಓ ಮತ್ತು ಅಧ್ಯಕ್ಷೆ ಉಡಾಫೆ ಉತ್ತರ ನೀಡ್ತಾರೇ ಎಂದು ಆರೋಪಿಸಿ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.


    Provided by
    Provided by

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ.ಯ ಮಧುಸೂಧನ್ ಮತ್ತು ಲೋಕೇಶ್ ಎಂಬ ಸದಸ್ಯರು ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ವಿರುದ್ದ ತಕ್ಷಣ ಶಿಸ್ತುಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಕಚೇರಿ ಮುಂಭಾಗ ಸ್ಥಳೀಯರ ಜೊತೆಗೂಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯ ಮಧುಸೂಧನ್ ಮಾತನಾಡಿ, ಗ್ರಾಪಂ ಸಾಮಾನ್ಯ ಸಭೆ ಮಾಡಿ 6 ತಿಂಗಳಾಗಿದೆ. ಅಭಿವೃದ್ದಿಯ ಬಗ್ಗೆ ಪ್ರಶ್ನಿಸಿದ್ರೇ ಗ್ರಾ.ಪಂ. ಪಿಡಿಓ ಉಡಾಫೆ ಉತ್ತರ ನೀಡ್ತಾರೇ. ಜನರಿಗೆ ಉತ್ತರ ಕೊಡಲು ಆಗದೇ ರಾಜಿನಾಮೇ ಕೊಡುವಂತಹ ದುಸ್ಥಿತಿ ಬಂದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಮತ್ತು ಸರಕಾರದ ಕಾರ್ಯದರ್ಶಿ ಅತೀಕ್ ಅಹಮ್ಮದ್ ಅವರ ಗಮನಕ್ಕೆ ತರುವಂತ ಕೆಲಸ ಮಾಡುತ್ತೇವೆ ಎಂದರು.

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯ ಲೊಕೇಶ್ ಮಾತನಾಡಿ, ಪಿಡಿಓ 15 ದಿನಕ್ಕೊಮ್ಮೆ ಮಾತ್ರ ಗ್ರಾಪಂಗೆ ಬರ್ತಾರೇ. ಜನರಿಗೆ ಸಮಸ್ಯೆ ಆದ್ರೇ ಕ್ಯಾಮೇನಹಳ್ಳಿಗೆ  ಹೋಗ್ಬೇಕು. ಅಧ್ಯಕ್ಷೆಯ ಪತಿ ಮಾತು ಕೇಳಿ ಪಿಡಿಓ ನರೇಗಾ ಕ್ರಿಯಾಯೋಜನೆ ಮಾಡ್ತಾರೇ. ಪಿಡಿಓ ಮತ್ತು ಅಧ್ಯಕ್ಷರ ಬಗ್ಗೆ ಜಿಪಂ ಮತ್ತು ತಾಪಂಗೆ ದೂರು ನೀಡಿದ್ರು ಪ್ರಯೋಜನಾ ಆಗಿಲ್ಲ. ಅದಕ್ಕಾಗಿಯೇ ನಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇವೆ ಎಂದರು.

    ತನಿಖೆಗೆ ತಾಲ್ಲೂಕು ಪಂಚಾಯತಿ ಇಓ ಆದೇಶ:

    ಪಿಡಿಓ ಮತ್ತು ಅಧ್ಯಕ್ಷರ ಬಗ್ಗೆ ಏನೇ ಸಮಸ್ಯೆ ಇದ್ರು ಲೀಖಿತ ರೂಪದಲ್ಲಿ ದೂರು ನೀಡಿದ್ರೇ ತ್ವರಿತವಾಗಿ ತನಿಖೆ ಮಾಡಿಸುತ್ತೇನೆ. ಯಾರೇ ತಪ್ಪು ಮಾಡಿದ್ರು ಅವರ ವಿರುದ್ದ ಕ್ರಮಕ್ಕೆ ಜಿಪಂ ಸಿಇಓಗೆ ಬರೆಯುತ್ತೇನೆ. ಪ್ರತಿಭಟನೆ ಮಾಡುವುದರಿಂದ ಸಮಸ್ಯೆ ಬಗೆಹರಿಯೋದಿಲ್ಲ. ಪ್ರತಿಭಟನೆ ಕೈಬಿಟ್ಟು ಕಚೇರಿಯ ಒಳಗೆ ಬನ್ನಿ ನಿಮ್ಮ ಸಮಸ್ಯೆ ಹೇಳಿ ಎಂದು ಗ್ರಾಪಂ ಸದಸ್ಯರ ಮನವೋಲಿಸುವ ಪ್ರಯತ್ನ ಮಾಡಿದರು.

    ವಸೂಲಾತಿ ರಸಿದಿ ಪುಸ್ತಕಗಳೇ ಇಲ್ವಂತೆ:

    2020 ರಿಂದ 2024ರ ವರೇಗಿನ ಕಂದಾಯ ವಸೂಲಾತಿ ಮಾಡಿರುವ 90 ಪುಸ್ತಕಗಳೇ ಗ್ರಾಪಂಯಲ್ಲಿ ಇಲ್ವಂತೆ. 10ಲಕ್ಷಕ್ಕೂ ಅಧಿಕ ತೆರಿಗೆ ಹಣ ದುರುಪಯೋಗ ಮತ್ತು ಅಂಗಡಿ ಮಳಿಗೆಯ ಜೊತೆ ಸಂತೆ ಹರಾಜಿನ ಠೇವಣಿ ಹಣವು ಕಾಣೆಯಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ದಾಖಲೆ ಬಗ್ಗೆ ಪ್ರಶ್ನಿಸಿದ್ರೇ ಮಾಹಿತಿ ಹಕ್ಕಿನಲ್ಲಿ ಪಡೆದುಕೊಳ್ಳಿ ಅಂತಾರೇ. ಜಿಪಂ ಮತ್ತು ತಾಪಂಗೆ ದೂರು ನೀಡಿದ್ರು ಪ್ರಯೋಜನಾ ಆಗಿಲ್ಲ ಅಂತಾರೇ ಅಲ್ಲಿನ ಗ್ರಾಪಂ ಸದಸ್ಯರು.

    ಅಕ್ಕಿರಾಂಪುರ ಮತ್ತು ಕ್ಯಾಮೇನಹಳ್ಳಿ ಗ್ರಾ.ಪಂ.ಯಲ್ಲಿ ಒತ್ತಡದ ನಡುವೆಯು ಜನರ ಕೆಲಸ ಮಾಡ್ತಿದ್ದೀನಿ. ಕಂದಾಯ ವಸೂಲಾತಿಯ ಹಳೆಯ ದಾಖಲಾತಿಯ ಬಗ್ಗೆ ನನಗೇನು ಗೊತ್ತಿಲ್ಲ. ಅಂಗಡಿ ಮಳಿಗೆ ಮತ್ತು ಸಂತೆ ಹರಾಜು ಪ್ರಕ್ರಿಯೆ ತ್ವರಿತವಾಗಿ ಆಗುತ್ತೇ. ನನ್ನ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ.

    —  ರವಿಕುಮಾರ್, ಪಿಡಿಓ, ಅಕ್ಕಿರಾಂಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಟೆನಿಸ್, ಶೂಟಿಂಗ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ: ಕಾರ್ಯಕ್ರಮ ಮುಂದೂಡಿ ಅಪಘಾತ ಸ್ಥಳಕ್ಕೆ ತೆರಳಿದ ಗೃಹಸಚಿವರು

    March 16, 2026

    ತುಮಕೂರು: ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು ಹಾಗೂ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕ್ಯಾನೋಯಿಂಗ್…

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.