nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026
    Facebook Twitter Instagram
    ಟ್ರೆಂಡಿಂಗ್
    • ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ
    • ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ
    • ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್
    • ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ
    • ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು
    • ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್
    • ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ
    • ತುಮಕೂರಿನಲ್ಲಿ ‘ಸಂವಿಧಾನ ರಕ್ಷಣಾ ನೀಲಿ ಸೇನೆ’ ರಾಜ್ಯ ಮಟ್ಟದ ಸಂಘಟನೆ ಅದ್ದೂರಿ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಕಿರಾಂಪುರ ಗ್ರಾ.ಪಂ. ಸದಸ್ಯರಿಂದ ರಾಜಿನಾಮೆ ಪರ್ವ: ಕಂದಾಯ ವಸೂಲಾತಿ ಪುಸ್ತಕಗಳೇ ಇಲ್ವಂತೆ
    ಕೊರಟಗೆರೆ February 5, 2025

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯರಿಂದ ರಾಜಿನಾಮೆ ಪರ್ವ: ಕಂದಾಯ ವಸೂಲಾತಿ ಪುಸ್ತಕಗಳೇ ಇಲ್ವಂತೆ

    By adminFebruary 5, 2025No Comments2 Mins Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿಗೆ 15 ದಿನಕ್ಕೊಮ್ಮೆ ಮಾತ್ರ ಪಿಡಿಓ ಬರ್ತಾರೇ. ಸಾಮಾನ್ಯ ಸಭೆಯೇ ಮಾಡದೇ ಪಿಡಿಓ ಮನೆಯ ಬಳಿ ಹೋಗಿ ಸದಸ್ಯರ ಸಹಿ ಪಡಿತಾರೇ. ಅನುದಾನದ ಲೆಕ್ಕಾ ಕೇಳಿದ್ರೇ ಗ್ರಾ.ಪಂ.ಯ ಪಿಡಿಓ ಮತ್ತು ಅಧ್ಯಕ್ಷೆ ಉಡಾಫೆ ಉತ್ತರ ನೀಡ್ತಾರೇ ಎಂದು ಆರೋಪಿಸಿ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.


    Provided by
    Provided by

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ.ಯ ಮಧುಸೂಧನ್ ಮತ್ತು ಲೋಕೇಶ್ ಎಂಬ ಸದಸ್ಯರು ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ವಿರುದ್ದ ತಕ್ಷಣ ಶಿಸ್ತುಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಕಚೇರಿ ಮುಂಭಾಗ ಸ್ಥಳೀಯರ ಜೊತೆಗೂಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯ ಮಧುಸೂಧನ್ ಮಾತನಾಡಿ, ಗ್ರಾಪಂ ಸಾಮಾನ್ಯ ಸಭೆ ಮಾಡಿ 6 ತಿಂಗಳಾಗಿದೆ. ಅಭಿವೃದ್ದಿಯ ಬಗ್ಗೆ ಪ್ರಶ್ನಿಸಿದ್ರೇ ಗ್ರಾ.ಪಂ. ಪಿಡಿಓ ಉಡಾಫೆ ಉತ್ತರ ನೀಡ್ತಾರೇ. ಜನರಿಗೆ ಉತ್ತರ ಕೊಡಲು ಆಗದೇ ರಾಜಿನಾಮೇ ಕೊಡುವಂತಹ ದುಸ್ಥಿತಿ ಬಂದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಮತ್ತು ಸರಕಾರದ ಕಾರ್ಯದರ್ಶಿ ಅತೀಕ್ ಅಹಮ್ಮದ್ ಅವರ ಗಮನಕ್ಕೆ ತರುವಂತ ಕೆಲಸ ಮಾಡುತ್ತೇವೆ ಎಂದರು.

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯ ಲೊಕೇಶ್ ಮಾತನಾಡಿ, ಪಿಡಿಓ 15 ದಿನಕ್ಕೊಮ್ಮೆ ಮಾತ್ರ ಗ್ರಾಪಂಗೆ ಬರ್ತಾರೇ. ಜನರಿಗೆ ಸಮಸ್ಯೆ ಆದ್ರೇ ಕ್ಯಾಮೇನಹಳ್ಳಿಗೆ  ಹೋಗ್ಬೇಕು. ಅಧ್ಯಕ್ಷೆಯ ಪತಿ ಮಾತು ಕೇಳಿ ಪಿಡಿಓ ನರೇಗಾ ಕ್ರಿಯಾಯೋಜನೆ ಮಾಡ್ತಾರೇ. ಪಿಡಿಓ ಮತ್ತು ಅಧ್ಯಕ್ಷರ ಬಗ್ಗೆ ಜಿಪಂ ಮತ್ತು ತಾಪಂಗೆ ದೂರು ನೀಡಿದ್ರು ಪ್ರಯೋಜನಾ ಆಗಿಲ್ಲ. ಅದಕ್ಕಾಗಿಯೇ ನಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇವೆ ಎಂದರು.

    ತನಿಖೆಗೆ ತಾಲ್ಲೂಕು ಪಂಚಾಯತಿ ಇಓ ಆದೇಶ:

    ಪಿಡಿಓ ಮತ್ತು ಅಧ್ಯಕ್ಷರ ಬಗ್ಗೆ ಏನೇ ಸಮಸ್ಯೆ ಇದ್ರು ಲೀಖಿತ ರೂಪದಲ್ಲಿ ದೂರು ನೀಡಿದ್ರೇ ತ್ವರಿತವಾಗಿ ತನಿಖೆ ಮಾಡಿಸುತ್ತೇನೆ. ಯಾರೇ ತಪ್ಪು ಮಾಡಿದ್ರು ಅವರ ವಿರುದ್ದ ಕ್ರಮಕ್ಕೆ ಜಿಪಂ ಸಿಇಓಗೆ ಬರೆಯುತ್ತೇನೆ. ಪ್ರತಿಭಟನೆ ಮಾಡುವುದರಿಂದ ಸಮಸ್ಯೆ ಬಗೆಹರಿಯೋದಿಲ್ಲ. ಪ್ರತಿಭಟನೆ ಕೈಬಿಟ್ಟು ಕಚೇರಿಯ ಒಳಗೆ ಬನ್ನಿ ನಿಮ್ಮ ಸಮಸ್ಯೆ ಹೇಳಿ ಎಂದು ಗ್ರಾಪಂ ಸದಸ್ಯರ ಮನವೋಲಿಸುವ ಪ್ರಯತ್ನ ಮಾಡಿದರು.

    ವಸೂಲಾತಿ ರಸಿದಿ ಪುಸ್ತಕಗಳೇ ಇಲ್ವಂತೆ:

    2020 ರಿಂದ 2024ರ ವರೇಗಿನ ಕಂದಾಯ ವಸೂಲಾತಿ ಮಾಡಿರುವ 90 ಪುಸ್ತಕಗಳೇ ಗ್ರಾಪಂಯಲ್ಲಿ ಇಲ್ವಂತೆ. 10ಲಕ್ಷಕ್ಕೂ ಅಧಿಕ ತೆರಿಗೆ ಹಣ ದುರುಪಯೋಗ ಮತ್ತು ಅಂಗಡಿ ಮಳಿಗೆಯ ಜೊತೆ ಸಂತೆ ಹರಾಜಿನ ಠೇವಣಿ ಹಣವು ಕಾಣೆಯಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ದಾಖಲೆ ಬಗ್ಗೆ ಪ್ರಶ್ನಿಸಿದ್ರೇ ಮಾಹಿತಿ ಹಕ್ಕಿನಲ್ಲಿ ಪಡೆದುಕೊಳ್ಳಿ ಅಂತಾರೇ. ಜಿಪಂ ಮತ್ತು ತಾಪಂಗೆ ದೂರು ನೀಡಿದ್ರು ಪ್ರಯೋಜನಾ ಆಗಿಲ್ಲ ಅಂತಾರೇ ಅಲ್ಲಿನ ಗ್ರಾಪಂ ಸದಸ್ಯರು.

    ಅಕ್ಕಿರಾಂಪುರ ಮತ್ತು ಕ್ಯಾಮೇನಹಳ್ಳಿ ಗ್ರಾ.ಪಂ.ಯಲ್ಲಿ ಒತ್ತಡದ ನಡುವೆಯು ಜನರ ಕೆಲಸ ಮಾಡ್ತಿದ್ದೀನಿ. ಕಂದಾಯ ವಸೂಲಾತಿಯ ಹಳೆಯ ದಾಖಲಾತಿಯ ಬಗ್ಗೆ ನನಗೇನು ಗೊತ್ತಿಲ್ಲ. ಅಂಗಡಿ ಮಳಿಗೆ ಮತ್ತು ಸಂತೆ ಹರಾಜು ಪ್ರಕ್ರಿಯೆ ತ್ವರಿತವಾಗಿ ಆಗುತ್ತೇ. ನನ್ನ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ.

    —  ರವಿಕುಮಾರ್, ಪಿಡಿಓ, ಅಕ್ಕಿರಾಂಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ದೊಡ್ಡಆಲದಮರ(ಹನುಮಂತನಗರ), ಜೋಡಿದೇವರಹಳ್ಳಿ, ನಾಗೇನಹಳ್ಳಿ, ಜೋಗಿಹಳ್ಳಿ, ಸೀಬಿಅಗ್ರಹಾರ, ಕುಂಟೇಗೌಡನಹಳ್ಳಿ, ನೆಲದಿಮ್ಮನಹಳ್ಳಿ, ಬಾಳಬಸವನಹಳ್ಳಿ, ಕಾಳೆನಳ್ಳಿ, ಅಮಲಗುಂದಿ, ಎಲ್. ಎಚ್. ಪಾಳ್ಯ, ಅಜ್ಜಯನಪಾಳ್ಯ, ಕಾಗೆನಿಂಗನಹಳ್ಳಿ,…

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ

    January 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.