nammatumakuru

    Subscribe to Updates

    Get the latest creative news from FooBar about art, design and business.

    What's Hot

    ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್

    March 25, 2026

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026
    Facebook Twitter Instagram
    ಟ್ರೆಂಡಿಂಗ್
    • ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್
    • ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ
    • ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ
    • ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
    • ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ
    • ಬೀದರ್: ಆನ್‌ ಲೈನ್ ಗೇಮ್ ಚಟಕ್ಕೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ
    • 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ: ಸಚಿವ ಮಧು ಬಂಗಾರಪ್ಪ
    • ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಅಹ್ಮದ್ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಕಿರಾಂಪುರ ಗ್ರಾ.ಪಂ. ಸದಸ್ಯರಿಂದ ರಾಜಿನಾಮೆ ಪರ್ವ: ಕಂದಾಯ ವಸೂಲಾತಿ ಪುಸ್ತಕಗಳೇ ಇಲ್ವಂತೆ
    ಕೊರಟಗೆರೆ February 5, 2025

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯರಿಂದ ರಾಜಿನಾಮೆ ಪರ್ವ: ಕಂದಾಯ ವಸೂಲಾತಿ ಪುಸ್ತಕಗಳೇ ಇಲ್ವಂತೆ

    By adminFebruary 5, 2025No Comments2 Mins Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿಗೆ 15 ದಿನಕ್ಕೊಮ್ಮೆ ಮಾತ್ರ ಪಿಡಿಓ ಬರ್ತಾರೇ. ಸಾಮಾನ್ಯ ಸಭೆಯೇ ಮಾಡದೇ ಪಿಡಿಓ ಮನೆಯ ಬಳಿ ಹೋಗಿ ಸದಸ್ಯರ ಸಹಿ ಪಡಿತಾರೇ. ಅನುದಾನದ ಲೆಕ್ಕಾ ಕೇಳಿದ್ರೇ ಗ್ರಾ.ಪಂ.ಯ ಪಿಡಿಓ ಮತ್ತು ಅಧ್ಯಕ್ಷೆ ಉಡಾಫೆ ಉತ್ತರ ನೀಡ್ತಾರೇ ಎಂದು ಆರೋಪಿಸಿ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.


    Provided by
    Provided by

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ.ಯ ಮಧುಸೂಧನ್ ಮತ್ತು ಲೋಕೇಶ್ ಎಂಬ ಸದಸ್ಯರು ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ವಿರುದ್ದ ತಕ್ಷಣ ಶಿಸ್ತುಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಕಚೇರಿ ಮುಂಭಾಗ ಸ್ಥಳೀಯರ ಜೊತೆಗೂಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯ ಮಧುಸೂಧನ್ ಮಾತನಾಡಿ, ಗ್ರಾಪಂ ಸಾಮಾನ್ಯ ಸಭೆ ಮಾಡಿ 6 ತಿಂಗಳಾಗಿದೆ. ಅಭಿವೃದ್ದಿಯ ಬಗ್ಗೆ ಪ್ರಶ್ನಿಸಿದ್ರೇ ಗ್ರಾ.ಪಂ. ಪಿಡಿಓ ಉಡಾಫೆ ಉತ್ತರ ನೀಡ್ತಾರೇ. ಜನರಿಗೆ ಉತ್ತರ ಕೊಡಲು ಆಗದೇ ರಾಜಿನಾಮೇ ಕೊಡುವಂತಹ ದುಸ್ಥಿತಿ ಬಂದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಮತ್ತು ಸರಕಾರದ ಕಾರ್ಯದರ್ಶಿ ಅತೀಕ್ ಅಹಮ್ಮದ್ ಅವರ ಗಮನಕ್ಕೆ ತರುವಂತ ಕೆಲಸ ಮಾಡುತ್ತೇವೆ ಎಂದರು.

    ಅಕ್ಕಿರಾಂಪುರ ಗ್ರಾ.ಪಂ. ಸದಸ್ಯ ಲೊಕೇಶ್ ಮಾತನಾಡಿ, ಪಿಡಿಓ 15 ದಿನಕ್ಕೊಮ್ಮೆ ಮಾತ್ರ ಗ್ರಾಪಂಗೆ ಬರ್ತಾರೇ. ಜನರಿಗೆ ಸಮಸ್ಯೆ ಆದ್ರೇ ಕ್ಯಾಮೇನಹಳ್ಳಿಗೆ  ಹೋಗ್ಬೇಕು. ಅಧ್ಯಕ್ಷೆಯ ಪತಿ ಮಾತು ಕೇಳಿ ಪಿಡಿಓ ನರೇಗಾ ಕ್ರಿಯಾಯೋಜನೆ ಮಾಡ್ತಾರೇ. ಪಿಡಿಓ ಮತ್ತು ಅಧ್ಯಕ್ಷರ ಬಗ್ಗೆ ಜಿಪಂ ಮತ್ತು ತಾಪಂಗೆ ದೂರು ನೀಡಿದ್ರು ಪ್ರಯೋಜನಾ ಆಗಿಲ್ಲ. ಅದಕ್ಕಾಗಿಯೇ ನಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇವೆ ಎಂದರು.

    ತನಿಖೆಗೆ ತಾಲ್ಲೂಕು ಪಂಚಾಯತಿ ಇಓ ಆದೇಶ:

    ಪಿಡಿಓ ಮತ್ತು ಅಧ್ಯಕ್ಷರ ಬಗ್ಗೆ ಏನೇ ಸಮಸ್ಯೆ ಇದ್ರು ಲೀಖಿತ ರೂಪದಲ್ಲಿ ದೂರು ನೀಡಿದ್ರೇ ತ್ವರಿತವಾಗಿ ತನಿಖೆ ಮಾಡಿಸುತ್ತೇನೆ. ಯಾರೇ ತಪ್ಪು ಮಾಡಿದ್ರು ಅವರ ವಿರುದ್ದ ಕ್ರಮಕ್ಕೆ ಜಿಪಂ ಸಿಇಓಗೆ ಬರೆಯುತ್ತೇನೆ. ಪ್ರತಿಭಟನೆ ಮಾಡುವುದರಿಂದ ಸಮಸ್ಯೆ ಬಗೆಹರಿಯೋದಿಲ್ಲ. ಪ್ರತಿಭಟನೆ ಕೈಬಿಟ್ಟು ಕಚೇರಿಯ ಒಳಗೆ ಬನ್ನಿ ನಿಮ್ಮ ಸಮಸ್ಯೆ ಹೇಳಿ ಎಂದು ಗ್ರಾಪಂ ಸದಸ್ಯರ ಮನವೋಲಿಸುವ ಪ್ರಯತ್ನ ಮಾಡಿದರು.

    ವಸೂಲಾತಿ ರಸಿದಿ ಪುಸ್ತಕಗಳೇ ಇಲ್ವಂತೆ:

    2020 ರಿಂದ 2024ರ ವರೇಗಿನ ಕಂದಾಯ ವಸೂಲಾತಿ ಮಾಡಿರುವ 90 ಪುಸ್ತಕಗಳೇ ಗ್ರಾಪಂಯಲ್ಲಿ ಇಲ್ವಂತೆ. 10ಲಕ್ಷಕ್ಕೂ ಅಧಿಕ ತೆರಿಗೆ ಹಣ ದುರುಪಯೋಗ ಮತ್ತು ಅಂಗಡಿ ಮಳಿಗೆಯ ಜೊತೆ ಸಂತೆ ಹರಾಜಿನ ಠೇವಣಿ ಹಣವು ಕಾಣೆಯಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ದಾಖಲೆ ಬಗ್ಗೆ ಪ್ರಶ್ನಿಸಿದ್ರೇ ಮಾಹಿತಿ ಹಕ್ಕಿನಲ್ಲಿ ಪಡೆದುಕೊಳ್ಳಿ ಅಂತಾರೇ. ಜಿಪಂ ಮತ್ತು ತಾಪಂಗೆ ದೂರು ನೀಡಿದ್ರು ಪ್ರಯೋಜನಾ ಆಗಿಲ್ಲ ಅಂತಾರೇ ಅಲ್ಲಿನ ಗ್ರಾಪಂ ಸದಸ್ಯರು.

    ಅಕ್ಕಿರಾಂಪುರ ಮತ್ತು ಕ್ಯಾಮೇನಹಳ್ಳಿ ಗ್ರಾ.ಪಂ.ಯಲ್ಲಿ ಒತ್ತಡದ ನಡುವೆಯು ಜನರ ಕೆಲಸ ಮಾಡ್ತಿದ್ದೀನಿ. ಕಂದಾಯ ವಸೂಲಾತಿಯ ಹಳೆಯ ದಾಖಲಾತಿಯ ಬಗ್ಗೆ ನನಗೇನು ಗೊತ್ತಿಲ್ಲ. ಅಂಗಡಿ ಮಳಿಗೆ ಮತ್ತು ಸಂತೆ ಹರಾಜು ಪ್ರಕ್ರಿಯೆ ತ್ವರಿತವಾಗಿ ಆಗುತ್ತೇ. ನನ್ನ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ.

    —  ರವಿಕುಮಾರ್, ಪಿಡಿಓ, ಅಕ್ಕಿರಾಂಪುರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?

    March 23, 2026

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಓದುವ ಹವ್ಯಾಸ ಜೊತೆಯಲ್ಲಿ ಕ್ರೀಡೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ: ಎಂ.ಪಿ.ಸೂರ್ಯ ಕುಮಾರ್

    March 25, 2026

    ಸರಗೂರು:   ಹಬ್ಬ ಹರಿದಿನಗಳಲ್ಲಿ ಗ್ರಾಮದಲ್ಲಿ ಪಂದ್ಯಾವಳಿಯನ್ನು ನಡೆಸಿಕೊಂಡು ಬಂದರೆ ಇವತ್ತಿನ ಮಕ್ಕಳಿಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಯುತ್ತದೆ ಎಂದು ಬಲಗೈ ಸಮಾಜದ…

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.