ಗುಬ್ಬಿ: ತಾಲ್ಲೂಕಿನಲ್ಲಿ ಮಿತಿ ಮೀರಿದ ಅಕ್ರಮ ಮಧ್ಯ ಮಾರಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದರೂ, ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ನಮಗೆ ತಿಳಿದಿಲ್ಲವೆಂಬತೆ ವರ್ತಿಸುತ್ತಿದ್ದಾರೆ ಎಂದು ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯ ತಾಳೇಕೊಪ್ಪ ಗ್ರಾಮಸ್ಥರು ಅಬಕಾರಿ ಇಲಾಖೆ ಅಧಿಕಾರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಈಕುರಿತು ಪ್ರತಿಕ್ರಿಯೆ ನೀಡಿದ ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್, ನಮ್ಮ ಗ್ರಾಮದಲ್ಲಿ ಸುಮಾರು 15 ಕಡೆಗಳಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದಾರೆ .ನಾವು ಹಲವು ಬಾರಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿದರು ಸಹ ಯಾವುದೇ ಪ್ರಯೋಜನವಿಲ್ಲ. ನೆಪ ಮಾತ್ರಕ್ಕೆ ಗ್ರಾಮಕ್ಕೆ ಬೇಟಿ ನೀಡುವ ಅಬಕಾರಿ ಅಧಿಕಾರಿಗಳು ಮಧ್ಯ ಮಾರಾಟ ಮಾಡುವವರನ್ನು ಹಿಡಿಯುವಂತೆ ನಾಟಕ ವಾಡಿ ನಂತರ ಗ್ರಾಮದ ಹೊರ ಭಾಗದಲ್ಲಿ ಮಾರಾಟ ಗಾರರಿಂದ ಹಣ ಪಡೆದು ಬಿಟ್ಟು ಹೋಗುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.
ತಾಳೇಕೊಪ್ಪ ನಿವಾಸಿ ಮಹಿಳೆಯರು ಮಾತನಾಡಿ, ನಮ್ಮ ಗಂಡದಿರು ನಿತ್ಯ ವು ಕುಡಿದು ಬರುತ್ತಿದ್ದು ಮದ್ಯ ಕುಡಿಯುವ ಆಸೆಯಿಂದ ಮನೆಯಲ್ಲಿ ಇರುವ ದಿನಸಿ ಸಾಮಾಗ್ರಿ ಯನ್ನು ಸಹ ಮಾರಾಟ ಮಾಡುತ್ತಿದ್ದಾರೆ. ನಿತ್ಯವೂ ಸಹ ಕುಡಿತಕ್ಕೆ ತುತ್ತಾಗುತ್ತಿದ್ದಾರೆ. ನಮ್ಮ ಗ್ರಾಮದಲ್ಲಿ ಅಕ್ರಮ ಮದ್ಯ ನಿಲ್ಲಿಸುವಂತೆ ನಾವು ತುಮಕೂರು ಜಿಲ್ಲಾಧಿಕಾರಿ ಗಳಿಗೆ.ಅಬಕಾರಿ ಅಧಿಕಾರಿಗಳಿಗೆ ಮನವಿ ಮಾಡಿದರು ಸಹ ಪ್ರಯೋಜನವಿಲ್ಲ. ಅಬಕಾರಿ ಅಧಿಕಾರಿಗಳು ಹಣ ಪಡೆದು ಇವರೆ ಮದ್ಯ ಮಾರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯ ಗುರುಲಿಂಗಯ್ಯ ಮಾತನಾಡಿ, ನಮ್ಮ ಗ್ರಾಮದಲ್ಲಿ ಅತಿಹೆಚ್ಚು ಮದ್ಯ ಮಾರಾಟ ದ ಅಡ್ಡೆಗಳು ಹೆಚ್ಚಾಗಿದೆ. ಗ್ರಾಮದ ಯುವಕರು ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಕುಡಿದ ಅಮಲಿನಲ್ಲಿ ಇರುವ ಯುವಕರು ನಮ್ಮ ಗ್ರಾಮದಿಂದ ಶಾಲೆಗೆ ಹೋಗುವ ವಿಧ್ಯಾರ್ಥಿ ನಿಯರಿಗೆ ಅವಾಚ್ಯ ವಾಗಿ ನಿಂದಿಸುವುದು. ಗಲಾಟೆ ಮಾಡುವುದು ಮಾಡುತ್ತಾರೆ ಶಾಲೆಗಳಿಗೆ ತೆರಳುವ ವಿಧ್ಯಾರ್ಥಿ ಗಳು ನಿತ್ಯವೂ ಸಹ ಭಯದಿಂದ ಹೋಗಿಬರುವ ಸ್ಥಿತಿ ನಿರ್ಮಾಣವಾಗಿದೆ ಅಬಕಾರಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಾಹಿಸದೇ ಕರ್ತವ್ಯ ಲೋಪ ವೆಸಗುತ್ತಿದ್ದಾರೆ ಎಂದು ಆರೋಪಿಸಿದರು.
ವರದಿ: ಮಂಜುನಾಥ್ ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB