ಸರಗೂರು: ತಾಲ್ಲೂಕಿನ ಕೆ ಬೆಳ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಹುಂಡಿ ಗ್ರಾಮದಲ್ಲಿ ಸಾಲುಂಡಿ ಗ್ರಾಮದ ಚಿಕ್ಕಣ್ಣ ಎಂಬುವರು ಸರ್ಕಾರಿ ಜಾಗ ಗೋಮಾಳ ವನ್ನು ಒತ್ತುವರಿ ಮಾಡಿಕೊಂಡು ಅಲ್ಲಿಂದ ಮಣ್ಣು ಸಾಗಣಿಗೆ ಮಾಡಿರುವ ಆರೋಪ ಕೇಳಿ ಬಂದಿದೆ.
ಚಿಕ್ಕಣ್ಣ ಅವರು ತನ್ನ ಜಮೀನು ಪಕ್ಕದಲ್ಲಿರುವ ಸರ್ಕಾರಿ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡು, ಅಲ್ಲಿದ ಗೋಮಾಳ ಜಾಗದ ಬೆಟ್ಟದಿಂದ ಅಕ್ರಮ ವಾಗಿ ಮಣ್ಣು ತೆಗೆದು ತಮ್ಮ ಜಮೀನಿಗೆ ತೆಗೆದುಕೊಂಡು ಬಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ವಿಚಾರವನ್ನು ಗ್ರಾಮಸ್ಥರು ಪ್ರಶ್ನಿಸಿದರೆ, ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ..
ಚಿಕ್ಕಣ್ಣ ಪೋಲಿಸ್ ಇಲಾಖೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಪ್ರಭಾವ ಬಳಸಿ ಅವರು ಈ ಕೆಲಸ ಮಾಡುತ್ತಿದ್ದಾರೆ. ಸರಗೂರು ತಾಲ್ಲೂಕಿನ ತಹಶೀಲ್ದಾರ್ ಹಾಗೂ ಅರಣ್ಯ ಇಲಾಖೆಯವರು ಮತ್ತು ಚಿಕ್ಕಣ್ಣನ ಈ ವಿಚಾರಕ್ಕೆ ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಮಣ್ಣು ಅಕ್ರಮ ಗಣಿಗಾರಿಕೆ ನಡೆಸಿದರೂ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಅಧಿಕಾರಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ನೀರಾವರಿ ಇಲಾಖೆ ಯ ಕಬಿನಿ ಬಲದಂಡೆಯಲ್ಲಿ ಜಾಗದಲ್ಲಿ ಇರುವ ಮಣ್ಣನ್ನು ಕೂಡ ಸಾಗಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗಳ ಇದೀಗ ಕೇಳಿ ಬಂದಿವೆ.
ಚಿಕ್ಕಣ್ಣ ಅವರ ವಿರುದ್ಧ ತಕ್ಷಣವೇ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಇದರ ಜೊತೆಗೆ ಅಕ್ರಮ ಮಣ್ಣು ಸಾಗಾಟಕ್ಕೆ ಅವಕಾಶ ನೀಡುತ್ತಿರುವ ಅಧಿಕಾರಿಗಳ ವಿರುದ್ಧವೂ ಸೂಕ್ತ ಕ್ರಮಕೈಗೊಳ್ಳಬೇಕು ಎನ್ನುವ ಕೂಗು ಕೇಳಿ ಬಂದಿದೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5