ಪ್ರಾಣಿಗಳ ಜೀವವನ್ನು ಮಾನವರು ವೀರೋಚಿತವಾಗಿ ಉಳಿಸಿದ ಹಲವು ಸಂದರ್ಭಗಳಿವೆ. ಅಂಥದ್ದೇ ಒಂದು ಘಟನೆ ಮತ್ತೆ ಬೆಳಕಿಗೆ ಬಂದಿದ್ದು, ಈ ಬಾರಿ ಆಳವಾದ ಕಂದರದಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಕುರಿತಾದ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ (Elephant Saving Viral Video) ಆಗುತ್ತಿದೆ. ಈ ಇಡೀ ಘಟನೆಯ ವಿಶೇಷವೆಂದರೆ ಆರ್ಕಿಮಿಡಿಸ್ ತತ್ವವನ್ನು (Archimedes Principle Saved Elephant Life) ಅನ್ವಯಿಸಿ ಆನೆಯನ್ನು ಉಳಿಸಲಾಗಿದೆ. ಪ್ರಕರಣ ಏನು ತಿಳಿದುಕೊಳ್ಳೋಣ ಬನ್ನಿ,
ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಆನೆಯೊಂದು ನಾಲೆಗೆ ಬಿದ್ದ ಘಟನೆ ಸಂಭವಿಸಿದೆ. ಹೊಂಡ ತುಂಬಾ ಆಳವಾಗಿದ್ದರಿಂದ ಆನೆ ನಾಲೆಯಲ್ಲಿಯೇ ಸಿಕ್ಕಿಬಿದ್ದಿದೆ ಆನೆಯನ್ನು ರಕ್ಷಿಸುವ ಸಲುವಾಗಿ ಅರಣ್ಯ ರಕ್ಷಕರ ತಂಡ ಕುತೂಹಲಕಾರಿಯಾಗಿ ಹೊಂಡಕ್ಕೆ ನೀರನ್ನು ತುಂಬಿಸಿದ್ದಾರೆ. ಹಳ್ಳಕ್ಕೆ ನೀರು ತುಂಬಿಸಿದ್ದರಿಂದ ಆನೆ ಮೇಲಕ್ಕೆ ಈಜಲು ಸಹಾಯ ಮಾಡಿತು ಮತ್ತು ನಂತರ ಹಗ್ಗಗಳ ಸಹಾಯದಿಂದ ತಂಡವು ಆನೆಯನ್ನು ನಾಲೆಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.ಘಟನೆಯ ಸಂಪೂರ್ಣ ವೀಡಿಯೊವನ್ನು IFS ಅಧಿಕಾರಿ ಪರ್ವೀನ್ ಕಸ್ವಾನ್ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊವನ್ನು ಹಂಚಿಕೊಳ್ಳುವಾಗ, “ಮಿಡ್ನಾಪುರ್ ನಲ್ಲಿ ಆನೆಯೊಂದು ಕಂದಕಕ್ಕೆ ಬಿದ್ದಿತು. ಈಗ ಅದನ್ನು ಆರ್ಕಿಮಿಡಿಸ್ ತತ್ವವನ್ನು ಅನ್ವಯಿಸುವ ಮೂಲಕ ಉಳಿಸಲಾಗಿದೆ. ವಿಶ್ವಾಸವಿಡಲು ಈ ವಿಡಿಯೋ ನೋಡಿ..” ಎಂದು ಬರೆದುಕೊಂಡಿದ್ದಾರೆ.
ಬೆಳಗ್ಗೆ 1 ಗಂಟೆ ಸುಮಾರಿಗೆ ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದ ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು 4 ಗಂಟೆಯ ಹೊತ್ತಿಗೆ ಅದನ್ನು ಪೂರ್ಣಗೊಳಿಸಲಾಯಿತು ಎಂದು ಅಧಿಕಾರಿ ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ. DFO ಸಂದೀಪ್ ಬೆರ್ವಾಲ್ ಮತ್ತು ADFO ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಮುಂಜಾನೆ 4 ಗಂಟೆಗೆ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿತು ಎಂದು ಅವರು ಹೇಳಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy