nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025
    Facebook Twitter Instagram
    ಟ್ರೆಂಡಿಂಗ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಲೆಮಾರಿಗಳನ್ನು ಅಲೆದಾಡಿಸುತ್ತಿರುವ ಅಧಿಕಾರಿಗಳು: ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸಿಗುತಿಲ್ಲ, ಪಡಿತರ ಚೀಟಿ, ಅಗತ್ಯ ದಾಖಲೆ ಸಿಗದೇ ಪರದಾಟ!
    ತುಮಕೂರು May 16, 2023

    ಅಲೆಮಾರಿಗಳನ್ನು ಅಲೆದಾಡಿಸುತ್ತಿರುವ ಅಧಿಕಾರಿಗಳು: ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಸಿಗುತಿಲ್ಲ, ಪಡಿತರ ಚೀಟಿ, ಅಗತ್ಯ ದಾಖಲೆ ಸಿಗದೇ ಪರದಾಟ!

    By adminMay 16, 2023No Comments2 Mins Read
    alemari

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲೀಕುಂಟೆ ಗ್ರಾಮದ ಅಲೆಮಾರಿಗಳು ಸರ್ಕಾರಿ ಸವಲತ್ತುಗಳಿಂದ ವಂಚಿತವಾಗಿದ್ದು, ಈ ಬಗ್ಗೆ ತಾಲೂಕು ಆಡಳಿತ ಸಮಾಜ ಇಲಾಖೆ ಕಂಡೂ ಕಾಣದಂತೆ ಕಣ್ಣು ಮುಚ್ಚಿಕುಳಿತಿದೆ.

    ಇಲ್ಲಿ ವಾಸಿಸುತ್ತಿರುವ 25 ಕುಟುಂಬಗಳ ಪೈಕಿ  12ರಿಂದ 15 ಜನಕ್ಕೆ ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಬರುತ್ತಿಲ್ಲ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಮೊದಲಾದ ಅಗತ್ಯ ದಾಖಲೆಗಳನ್ನು ಕೂಡ ನೀಡಲಾಗಿಲ್ಲ. ಕೊರಟಗೆರೆ ತಾಲೂಕು ಆಡಳಿತವು ಅಲೆಮಾರಿ ಸಮುದಾಯಗಳನ್ನು ನಿರ್ಲಕ್ಷ್ಯಿಸಿದ್ದು,  ಅಲೆಮಾರಿ ಸಮುದಾಯಗಳ ಹಿತ ಕಾಯಬೇಕಾಗಿದ್ದ ಸಮಾಜ ಕಲ್ಯಾಣ ಇಲಾಖೆ ನಿದ್ದೆಗೆ ಜಾರಿದೆ.


    Provided by
    Provided by

    ಗ್ರಾಮದಲ್ಲಿ ಅಲೆಮಾರಿಗಳಿಗೆ ಇದುವರೆವಿಗೂ ವೃದ್ದಾಪ್ಯ ವೇತನ, ಅಂಗವಿಕಲ ವೇತನ ಸೌಲಭ್ಯ ಮನೆಗೆ ತಲುಪಿಸಲು ಸಂಬಂಧಪಟ್ಟವರು ಸಂಪೂರ್ಣ ವಿಫಲವಾಗಿದ್ದಾರೆ. ಈ ಹಿಂದಿನ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂ ಜಂರವರು ಈ ಜನರಿರುವ ಸ್ಥಳಕ್ಕೆ ಸಂಬಂಧಿಸಿದ ನೌಕರರನ್ನು ಕಳುಹಿಸಿ ಸ್ಥಳದಲ್ಲೇ ಬಹುತೇಕ ಮೂಲ ದಾಖಲೆಗಳಾದ ಆಧಾರ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಮಾಡಿಸಿ ಕೊಟ್ಟಿದ್ದು, ಈ ಮಧ್ಯೆ ತಹಶೀಲ್ದಾರ್ ರವರು ವರ್ಗಾವಣೆಯಾದ ಕಾರಣ ಈ ಸೌಲಭ್ಯಗಳಿಗೆ ತಡೆಯಾಗಿವೆ ಎಂದು ತುಮಕೂರಿನ ಭೂಮಿ ವಸತಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ತಿಳಿಸಿದೆ.

    ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ತಹಶೀಲ್ದಾರ್ ರವರು ಪದೇ ಪದೇ ಹೇಳಿಸಿಕೊಳ್ಳದೆ, ತುರ್ತಾಗಿ ಈ ಜಾಗಕ್ಕೆ ಸಂಬಂಧಿಸಿದ ನೌಕರರನ್ನು ಕಳುಹಿಸಿ, ತುರ್ತಾಗಿ ದಾಖಲೆಗಳನ್ನು ಸಿದ್ಧಪಡಿಸಿ ಪಿಂಚಣಿ ಸೌಲಭ್ಯ ಕಲ್ಪಿಸಿ ಕೊಡಬೇಕಾಗಿದೆ ಎಂದು ಸಮಿತಿ ಹೇಳಿದೆ.

    ತುರ್ತಾಗಿ ಸ್ಥಳಕ್ಕೆ ಕೊರಗೆರೆ ತಹಶೀಲ್ದಾರ್ ಅವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಿಸಿದ ನೌಕರರೊಂದಿಗೆ ಸ್ಥಳಕ್ಕೆ ತೆರಳಿ, ಪಿಂಚಣಿ ಸೇರಿದಂತೆ ಪಡಿತರ ಹಾಗೂ ಚುನಾವಣಾ ಗುರುತಿನ ಚೀಟಿ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕಾಗಿ  ಭೂಮಿ ವಸತಿ ಹಾಗೂ ಸಾಮಾಜಿಕ ಹೋರಾಟ ಸಮಿತಿ, ತುಮಕೂರು ಆಗ್ರಹಿಸಿದೆ.

    ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕನ್ನು ನಮ್ಮತುಮಕೂರು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ವೇಳೆ ಪ್ರತಿಕ್ರಿಯಿಸಿದ ಅವರು, ಇದು ರೆವಿನ್ಯೂ ಡಿಪಾರ್ಟ್ ಮೆಂಟ್ ನಿಂದ ಬರೋದು, ನಮ್ಮದು ಸೋಷಿಯಲ್ ವೆಲ್ಫೇರ್ ಡಿಪಾರ್ಟ್ ಮೆಂಟ್ ಎಂದರು. ಅಲೆಮಾರಿಗಳ ಸಮಸ್ಯೆಗಳು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುತ್ತವೆ ಅಲ್ಲವೇ ಎಂದು ಪ್ರಶ್ನಿಸಿದಾಗ, ಇಡೀ ದೇಶಕ್ಕೆ ರಾಜ್ಯಕ್ಕೆ ವೃದ್ಧಾಪ್ಯ ವೇತನ ನೀಡೋದು ರೆವಿನ್ಯು ಡಿಪಾರ್ಟ್ ಮೆಂಟ್, ಅವರು ಸಕಾಲದಲ್ಲಿ ಅರ್ಜಿ ಕೊಟ್ಟು ಡಾಕ್ಯುಮೆಂಟ್ ಕೊಟ್ರೆ, ವಯಸ್ಸಿನ ಆಧಾರದಲ್ಲಿ ವೃದ್ಧಾಪ್ಯ ವೇತನ ಕೊಡ್ತಾರೆ ಎಂದರು.

    ಒಟ್ಟಿನಲ್ಲಿ ಸಾಮಾಜಿಕ ನ್ಯಾಯದಿಂದ ವಂಚಿತವಾಗಿರುವ ಅಲೆಮಾರಿಗಳ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟವರು ಇಚ್ಛಾಶಕ್ತಿ ಪ್ರದರ್ಶಿಸಬೇಕಿದೆ. ಹಿಂದಿನ ತಹಶೀಲ್ದಾರ್ ನಹೀದಾ ಜಂ ಜಂ ಅವರು ತೋರಿದ ದಿಟ್ಟತನ ಮತ್ತು ಗಟ್ಟಿತನ ಈಗಿನ ತಹಶೀಲ್ದಾರ್ ತೋರುವರೇ? ಎನ್ನುವುದನ್ನು ಕಾದುನೋಡಬೇಕಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ತುಮಕೂರು: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 325 ಬಾಲಕಿಯರು ಗರ್ಭ ಧರಿಸಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ…

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.