nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026
    Facebook Twitter Instagram
    ಟ್ರೆಂಡಿಂಗ್
    • ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
    • ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
    • ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
    • ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    • ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
    ಕೊರಟಗೆರೆ December 26, 2025

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    By adminDecember 26, 2025No Comments2 Mins Read
    manjunath k

    ಕೊರಟಗೆರೆ : ಉತ್ತಮ ಮತ್ತು ದಕ್ಷ ಆಡಳಿತದಿಂದ ತಾಲ್ಲೂಕು ಸರ್ವತೋಮುಖ ಪ್ರಗತಿ ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟರು.

    ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರ ಗರುಗದೊಡ್ಡಿ ಸಂಯುಕ್ತಾಶ್ರಯದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಉತ್ತಮ ಆಡಳಿತ ವಾರ’ ತಾಲ್ಲೂಕು ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆಡಳಿತ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಧ್ಯೇಯವಾಗಿದೆ ಎಂದರು.


    Provided by
    Provided by

    ಉತ್ತಮ ಆಡಳಿತದಿಂದ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಸಾಮಾಜಿಕ ಹಕ್ಕುಗಳೆಂದರೆ ಕೇವಲ ವಸತಿ, ಆಹಾರ ಮತ್ತು ಶಿಕ್ಷಣ ನೀಡುವುದಷ್ಟೇ ಅಲ್ಲ, ವೈಯಕ್ತಿಕ ಭದ್ರತೆ ನೀಡಿ, ಹಕ್ಕುಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ. ತಳಮಟ್ಟದಿಂದ ಆಡಳಿತವನ್ನು ಬಲಪಡಿಸುವ ಮತ್ತು ಸಾಮಾನ್ಯ ಜನರಿಗೆ ಸರ್ಕಾರಿ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ‘ಸುಶಾಸನ ಸಪ್ತಾಹ ಅಭಿಯಾನ’ದ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.

    ಪೌತಿ ಖಾತೆ ಮಾಡುವಲ್ಲಿ ಕೊರಟಗೆರೆ ತಾಲ್ಲೂಕು ರಾಜ್ಯದಲ್ಲಿಯೇ ೬ನೇ ಸ್ಥಾನದಲ್ಲಿದೆ. ಕಂದಾಯ ಇಲಾಖೆಯ ಸಿಬ್ಬಂದಿಗಳೂ ಸಹ ಪ್ರತಿದಿನ ಅಂದಿನ ಕೆಲಸ ಅಂದೇ ಮುಗಿಸುತ್ತಾರೆ ಸಾರ್ವಜನಿಕರಿಗೆ ಯಾವುದೇ ತೊಂದರೆ ನೀಡದಂತೆ ಕೆಲಸ ಮಾಡಿಕೊಡಬೇಕೆಂದು ತಾಲ್ಲೂಕು ಮಟ್ಟದ ಅಧಿಕಾರಿ ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

    ಗರುಗದೊಡ್ಡಿ ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರದ ಅಧ್ಯಕ್ಷ ಜಿ.ವಿ.ವೀರೇಂದ್ರ ಪ್ರಸಾದ್ ಮಾತನಾಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಸುಶಾಸನ ಸಪ್ತಾಹ ಪ್ರಶಾಸನ ಗ್ರಾಮಗಳ ಕಡೆಗೆ ಎಂಬ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.

    ಉತ್ತಮ ಆಡಳಿತ ನೀಡುವ  ನಿಟ್ಟಿನಲ್ಲಿ ಈ ಸಪ್ತಾಹದ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅರಿವು ಮೂಡಿಸಲು ಏರ್ಪಡಿಸಿರುವ ಕಾರ್ಯಾಗಾರವು ಆಡಳಿತವನ್ನು ಪರಿಣಾಮಕಾರಿಯಾಗಿ ತಲುಪಿಸಲು ತುಂಬಾ ಸಹಕಾರಿಯಾಗಿದೆ ಎಂದರು.

    ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಧರ್ ಮಾತನಾಡಿ, ಅಧಿಕಾರಿಗಳು ಸಮಯ ಪ್ರಜ್ಞೆಯನ್ನು ಪಾಲಿಸಬೇಕು ಹಾಗೂ ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ನೀಡದಿದ್ದರೆ ಈ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ. ವರ್ಷವಿಡೀ ಉತ್ತಮ ಆಡಳಿತ ವರ್ಷವೆಂದೇ ಅಧಿಕಾರಿಗಳು ತಿಳಿಯಬೇಕು ಎಂದರು.

    ಗ್ರೇಡ್–2 ತಹಶೀಲ್ದಾರ್ ರಾಮದಾಸಪ್ಪ ಮಾತನಾಡಿ, ನಮ್ಮ ಇಲಾಖೆಯಲ್ಲಿ ಕೆಲವೊಮ್ಮೆ ಕಂಪ್ಯೂಟರ್ ಕೆಲಸ ತಾಂತ್ರಿಕದೋಷ, ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡಚಣೆಯಾಗಬಹುದೇ ವಿನಃ ಉದ್ದೇಶ ಪೂರಕವಾಗಿ ಯಾರಿಗೂ ತೊಂದರೆ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ತಿಳಿಸಿದರು.

    ಮಾನವ ಹಕ್ಕುಗಳ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸತ್ಯಪ್ಪ ಮಾತನಾಡಿ, ಕೊರಟಗೆರೆಯಲ್ಲಿ ತಹಸೀಲ್ದಾರ್ ಅತ್ಯುತ್ತಮವಾಗಿ ಮತ್ತು ಪ್ರಾಮಾಣಿಕವಾಗಿ ದಕ್ಷತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಇದೇ ವೇಳೆ ತಹಶೀಲ್ದಾರ್ ಮಂಜುನಾಥ್ ಅವರನ್ನು ಗೌರವಿಸಲಾಯಿತು. ಕಾರ್ಯಾಗಾರದಲ್ಲಿ ಗರುಗದೊಡ್ಡಿ ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರದ ಕಾರ್ಯದರ್ಶಿ ಜಿ.ವಿ. ನಾಗೇಂದ್ರ ಕುಮಾರ್, ನಿವೃತ್ತ ಶಿಕ್ಷಕ ಓ. ರಾಮಕೃಷ್ಣ, ರಾಮಾಂಜಿನೇಯ ಮಾತನಾಡಿದರು.

    ಕಾರ್ಯಕ್ರಮದಲ್ಲಿ ರೈತ ಮುಖಂಡ ಕಲ್ಕೆರೆ ಮಂಜುನಾಥ್, ಆನಂದ್ ಗುಂಡ, ಪರಿವರ್ತನ ಸಂಸ್ಥೆಯ ಶಿವಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಸರಗೂರು:  ಹಾಲಿಗೆ ಕಲಬೆರಕೆ ಮಾಡದೆ ಗುಣಮಟ್ಟವನ್ನು ಕಾಯ್ದುಕೊಂಡು ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಶಾಸಕರು, ಅರಣ್ಯ ವಸತಿ…

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.