nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ
    ತುಮಕೂರು July 11, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    By adminJuly 11, 2025No Comments3 Mins Read
    krs

    ತುಮಕೂರು:  ಅಕ್ರಮ ಭೂ ಕಬಳಿಕೆಗೆ ಕಾರಣವಾಗಿದ್ದಾರೆ ಎಂಬ ಆರೋಪ ಹೊತ್ತಿರುವ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ನಾಗರಿಕ ಸನ್ಮಾನವನ್ನು ಶುಕ್ರವಾರ ಕೆಆರ್‌ ಎಸ್ ಪಕ್ಷದ ವತಿಯಿಂದ ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಅಕ್ರಮ ಭೂ ಕಬಳಿಕೆ ಮತ್ತು ಅಕ್ರಮ ಗಣಿಗಾರಿಕೆಗೆ ಪ್ರೋತ್ಸಾಹ ನೀಡಿ, ಜಿಲ್ಲೆಯಲ್ಲಿ  ಜಿಲ್ಲಾಧಿಕಾರಿಗಳು ಭ್ರಷ್ಟಾಚಾರ ಹೆಚ್ಚಾಗಲು ಶ್ರಮಿಸುತ್ತಿದ್ದಾರೆ ಎಂದು ಆರೋಪಿಸಿ ತುಮಕೂರು ಜಿಲ್ಲಾಧಿಕಾರಿಗೆ ಶಾಲು, ಪೇಟ, ರೇಷ್ಮೆ ಸೀರೆ ನೀಡಿ ಸನ್ಮಾನ ಮಾಡಲು ಟೌನ್‌ ಹಾಲ್ ನಿಂದ ಡಿಸಿ ಕಚೇರಿ ಕಡೆಗೆ ಹೊರಟಿದ್ದ ಕೆಆರ್‌ ಎಸ್ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

    ಸನ್ಮಾನ ಕಾರ್ಯಕ್ರಮಕ್ಕೂ ಮುನ್ನ ಟೌನ್‌ ಹಾಲ್ ನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಪೊಲೀಸರ ಸರ್ಪಗಾವಲಿನ ನಡುವೆಯೂ ಸಭೆ ಸೇರಿದ್ದರು.  ಈ ವೇಳೆ ಪೊಲೀಸರು ಮತ್ತು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಧಿಕಾರಿಗಳಿಗೆ ಸನ್ಮಾನ ಮಾಡಲು ಅವಕಾಶ ಕೊಡದ ಪೊಲೀಸರ ವರ್ತನೆ ಖಂಡಿಸಿ ಕೆಆರ್‌ ಎಸ್ ಪಕ್ಷದ ಕಾರ್ಯಕರ್ತರು  ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ವಿಡಂಬನಾತ್ಮಕ ಜೈಕಾರ ಹಾಕಿದರು.

    ಕೆಆರ್‌ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನ ಸಿಂಧು ಸ್ವಾಮಿ ಮಾತನಾಡಿ, ಅಕ್ರಮ ಭೂ ಮಂಜೂರಾತಿಯು ಡಿಸಿ ಅವರ ಅನುಮತಿ ಇಲ್ಲದೆ ಸಾಧ್ಯವೇ ಇಲ್ಲ. ಇದಕ್ಕೆ ನೇರ ಹೊಣೆಯನ್ನು ಜಿಲ್ಲಾಧಿಕಾರಿಯವರೇ ಹೊರಬೇಕು ಎಂದು ಆರೋಪಿದರು.

    ಮಧುಗಿರಿಯಲ್ಲಿನ 40 ಎಕ್ಕರೆ ಅಕ್ರಮ ಭೂ ಮಂಜೂರಾತಿಯಲ್ಲಿ‌ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದೆ. ಇದರ ವಿರುದ್ಧ ಕೆಆರ್‌ ಎಸ್ ಪಕ್ಷ ಹೋರಾಟ ಮಾಡುತ್ತಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಸಾಮಾನ್ಯರ ಕೆಲಸವಾಗುತ್ತಿಲ್ಲ. ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ರಿಯಲ್ ಎಸ್ಟೇಟ್ ಕೆಲಸಗಳು ಮಾತ್ರ ಸರಾಗವಾಗಿ ಆಗುತ್ತಿವೆ. ಅದರೊಂದಿಗೆ ಭೂ ಕಬಳಿಕೆಯೂ ನಡೆಯುತ್ತಿದೆ ಎಂದು ದೂರಿದರು.

    ಜಿಲ್ಲಾಧಿಕಾರಿಗಳು ಅಕ್ರಮ ಮಾಡುತ್ತಿದ್ದರೆ ನಾಗರಿಕರು ಅದನ್ನು ನೋಡಿಕೊಂಡು ಸುಮ್ಮನಿರಬೇಕಾ ಎಂದು ಪ್ರಶ್ನಿಸಿದರಲ್ಲದೆ, ಸರ್ಕಾರಿ ಭೂಮಿ ಜನರ ಸ್ವತ್ತು. ಅದನ್ನು ಅಕ್ರಮವಾಗಿ ಪರಬಾರೆ ಮಾಡುವುದು ತಪ್ಪು. ತಪ್ಪಿಗೆ ತಕ್ಕ ಶಿಕ್ಷೆಯಾಗಬೇಕು. ನಾವು ಬಸವಾದಿ ಶರಣರ ಮೊಮ್ಮಕ್ಕಳು‌. ಶ್ರೀ ಶಿವಕುಮಾರ ಸ್ವಾಮೀಜಿಯವರು ನಡೆದಾಡಿದ ಈ ನೆಲದಲ್ಲಿ ಅಕ್ರಮ ಎಸಗುವುದು ಮಹಾಪರಾಧ ಎಂದು ನುಡಿದರು.

    ಕೆಆರ್‌ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, ಸನ್ಮಾನ ಮಾಡುವುದು ನಮ್ಮ ಹಕ್ಕು. ಅದನ್ನು ಮಾಡಲು ಹೊರಟಿದ್ದೇವೆ. ಕಳ್ಳರು, ರೌಡಿ ಶೀಟರ್‌ ಗಳು ಪೊಲೀಸರಿಗೆ ಸನ್ಮಾನ ಮಾಡುವುದು ಸರಿಯಾದರೆ, ಈ ಜಿಲ್ಲೆಯ ಪ್ರಜ್ಞಾವಂತ ನಾಗರಿಕರಾದ ನಾವು ಸನ್ಮಾನ ಮಾಡುವುದರಲ್ಲಿ ತಪ್ಪೇನಿದೆ ಎಂದು ಡಿವೈಎಸ್ಪಿ ಚಂದ್ರಶೇಖರ್ ಅವರನ್ನು ಉದ್ದೇಶಿಸಿ ಕೇಳಿದರು.

    ಭ್ರಷ್ಟಾಚಾರಕ್ಕೆ ಕಾರಣವಾಗಿರುವ ಜಿಲ್ಲಾಧಿಕಾರಿಗಳ ರಕ್ಷಣೆಗಾಗಿ ಪೊಲೀಸರು ತಮ್ಮ ಸಮಯ‌ ಮತ್ತು ಸಂಪನ್ಮೂಲವನ್ನು ವ್ಯರ್ಥ ಮಾಡುತ್ತಿದ್ದಾರೆ. ಮೆರವಣಿಗೆಗೆಂದು ತಂದಿರುವ ಬ್ಯಾನರ್ ಹಾಗೂ ಶಾಲು, ಪೇಟ ಹಾರಗಳನ್ನು ಕಸಿದುಕೊಂಡಿರುವುದೂ ಅಲ್ಲದೆ, ವಾಕ್ ಸ್ವಾತಂತ್ರವನ್ನು ದಮನ ಮಾಡುವ ನಿಟ್ಟಿನಲ್ಲಿ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ಜಾಣಗೆರೆ ಆರೋಪಿಸಿದರಲ್ಲದೇ  ಡಿಸಿಯವರಿಗೆ ಒತ್ತಡ ಹಾಕಿ ಈ ಅಕ್ರಮವನ್ನು ಮಾಡಿಸಿರಬಹುದು ಅಥವಾ ಆಮಿಷಕ್ಕೆ ಒಳಗಾಗಿಯೂ ಈ ಭ್ರಷ್ಟ ಕೆಲಸಕ್ಕೆ ಕೈ ಹಾಕಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

    ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ‌ ಮಾತನಾಡಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸತ್ಯ ಮೇವ ಜಯತೆಯ ಅರ್ಥವನ್ನು ಮರು ವ್ಯಾಖ್ಯಾನಿಸಿದ್ದಾರೆ. ಸತ್ಯವನ್ನು ನಿತ್ಯ ಮೇಯುವುದೇ ಸತ್ಯ ಮೇವ ಜಯತೆ ಎಂಬುದು ಡಿಸಿಯವರ ಉದ್ಧರಣ. ಸಾರ್ವಜನಿಕ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಬಂದಿರದ ಈ ಅಧಿಕಾರಿ ಜನ ಸೇವೆ ಮಾಡಲು ಸಾಧ್ಯವಿದೆಯೇ? ಮಧುಗಿರಿಯಲ್ಲಿ 40 ಎಕರೆ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಎಂಎಲ್‌ ಎ ಮಗನಿಗೆ ಮಂಜೂರು ಮಾಡಿರುವುದರಲ್ಲಿ ಡಿಸಿಯವರ ನೇರ ಪಾತ್ರವಿರುವ ಶಂಕೆ ಇದೆ. ಇವರ ಇವರ ವಿರುದ್ಧ ಕ್ರಮವಾಗಬೇಕು. ಪ್ರಕರಣ ದಾಖಲಿಸಿ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

    ಪೊಲೀಸರ ದೌರ್ಜನ್ಯ ಖಂಡಿಸಿ ಸ್ಥಳದಲ್ಲಿಯೇ ಕುಳಿತಿದ್ದ ಪಕ್ಷದ ಕಾರ್ಯಕರ್ತರ ಬಳಿಯಿದ್ದ ಹಾರ ಶಾಲುಗಳನ್ನು ಪೊಲೀಸರು ದಬ್ಬಾಳಿಕೆಯಿಂದ ಕಸಿದುಕೊಳ್ಳುತ್ತಿದ್ದಂತೆಯೇ ರಾಜ್ಯ ಕಾರ್ಯದರ್ಶಿ  ಮಲ್ಲಿಕಾರ್ಜುನ ಭಟ್ಟರಹಳ್ಳಿಯವರು ಡಿವೈಎಸ್ಪಿ ಕಾಲಿಗೆ ಬೀಳುವ ಮೂಲಕ ವಿಶಿಷ್ಟ ರೀತಿಯ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಎಲ್ಲರನ್ನೂ ವಶಕ್ಕೆ ತೆಗೆದುಕೊಳ್ಳುವಂತೆ ಡಿವೈಎಸ್ಪಿ ಸೂಚಿಸಿದರು. ಪೊಲೀಸರು ಕೆಆರ್‌ ಎಸ್ ಕಾರ್ಯಕರ್ತರನ್ನು ಪೊಲೀಸ್ ವಾಹನಕ್ಕೆ ತುಂಬಿದರು.

    ನಂತರ ಬಳ್ಳಾವಿ ಠಾಣೆಗೆ ಕರೆದೊಯ್ದರು  ವಾಹನದಿಂದ ಕೆಳಗಿಳಿಯಲು ನಿರಾಕರಿಸಿದ ಕಾರ್ಯಕರ್ತರು ಡಿಸಿ ಕಚೇರಿಗೆ ಕರೆದೊಯ್ಯುವಂತೆ ಒತ್ತಾಯಿಸಿದರು.

    ರಾಜ್ಯ ಉಪಾಧ್ಯಕ್ಷರಾದ ಜ್ಞಾನ ಸಿಂಧು ಸ್ವಾಮಿ, ಸರಕಾರ ಕೂಡಲೇ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸದಿದ್ದರೆ  ಮುಂದಿನ ದಿನಗಳಲ್ಲಿ ಯಾವುದೇ ಸಾರ್ವಜನಿಕ ಅಥವಾ ಸಿಕ್ಕಸಿಕ್ಕ ಸ್ಥಳದಲ್ಲಿ ನಮ್ಮ ಕಾರ್ಯಕರ್ತರು ಡಿಸಿ ಅವರಿಗೆ ಸನ್ಮಾನ ಮಾಡುವುದಾಗಿ ಸವಾಲನ್ನು ಹಾಕಿದರು. ನ್ಯಾಯಾಂಗ ತೆನಿಖೆಗೆ ಒಪ್ಪಿಸಬೇಕೆಂದು ಸಹ ಆಗ್ರಹಿಸಿದರು.

    ಇದೇ ಸಂದರ್ಭದಲ್ಲಿ ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ.ಎಸ್. ಜಿಲ್ಲಾಧಿಕಾರಿ ಶುಭ ಕಲ್ಯಾಣ್  ವಿರುದ್ಧ ದೂರು ನೀಡಿದರು.

    ಸನ್ಮಾನ ಕಾರ್ಯಕ್ರಮದಲ್ಲಿ  ಕೆಆರ್‌ ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಎಲ್. ಜೀವನ್, ರಘು ನಂದನ, ಆರೋಗ್ಯ ಸ್ವಾಮಿ, ಜಿಲ್ಲಾಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ, ಪ್ರಧಾನ ಕಾರ್ಯದರ್ಶಿ ರಂಗನಾಥ್, ಉಪಾಧ್ಯಕ್ಷರಾದ ಪ್ರದೀಪ್ ಕುಮಾರ್, ರಾಜ್ಯ ಎಸ್. ಸಿ ಎಸ್ ಟಿ ಘಟಕದ ಕಾರ್ಯದರ್ಶಿಗಳಾದ ನರಸಿಂಹರಾಜು ಸಿ ಎನ್, ಚೆನ್ನಯ್ಯ, ಅನುಸ್ವಾಮಿ ಪಕ್ಷದ  ಮಹಿಳಾ ಘಟಕದ ಸದಸ್ಯರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.