ತೆಲಂಗಾಣದಲ್ಲಿ ಮಕ್ಕಳನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ತೃತೀಯಲಿಂಗಿಯೊಬ್ಬರನ್ನು ಸ್ಥಳೀಯರು ಹೊಡೆದು ಕೊಂದಿದ್ದಾರೆ. ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತೆಲಂಗಾಣದ ನಿಜಾಮಾಬಾದ್ ನಲ್ಲಿ ಈ ಘಟನೆ ನಡೆದಿದೆ. ರಾಜು (50) ಕೊಲೆಯಾದ ವ್ಯಕ್ತಿ. ಅಧಿಕೃತ ದಾಖಲೆಗಳ ಪ್ರಕಾರ, ಅವರು ಟ್ರಾನ್ಸ್ಜೆಂಡರ್ ವರ್ಗಕ್ಕೆ ಸೇರಿದವರು.
ಈ ಪ್ರದೇಶದಲ್ಲಿ ಮಕ್ಕಳ ಅಪಹರಣದ ವದಂತಿಗಳ ಮಧ್ಯೆ ಈ ಘಟನೆ ನಡೆದಿದೆ. ರೊಚ್ಚಿಗೆದ್ದ ಸ್ಥಳೀಯರು ಪೊಲೀಸರು ಮಧ್ಯಪ್ರವೇಶಿಸುವ ಮುನ್ನವೇ ಆಕೆಗೆ ಥಳಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ, ಕಾಮರೆಡ್ಡಿಯಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಸಮೀಕ್ಷೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಸುಳ್ಳು ಗುರುತಿನ ಕಾರಣದಿಂದ ಹಲ್ಲೆ ನಡೆಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


