nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026
    Facebook Twitter Instagram
    ಟ್ರೆಂಡಿಂಗ್
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಸ್ಆರ್ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಮೀಸಲಿಡಿ: ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ
    ರಾಜ್ಯ ಸುದ್ದಿ November 30, 2023

    ಸಿಎಸ್ಆರ್ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಮೀಸಲಿಡಿ: ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

    By adminNovember 30, 2023No Comments2 Mins Read
    dk shivakumar

    ಬೆಂಗಳೂರು: “ನಮ್ಮ ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದೇವೆ. ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಿಎಸ್ಆರ್ ನಿಧಿಯನ್ನು ಮೀಸಲಿಡಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಯಮಿಗಳಿಗೆ ಕರೆ ನೀಡಿದರು.

    ಬೆಂಗಳೂರು ಮುಖ್ಯ ಅರಮನೆಯಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,“ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಿದರೆ ಆ ಭಾಗದ ಮಕ್ಕಳು ಕೂಡ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನೆರವಾಗುತ್ತದೆ. ಈ  ಬಗ್ಗೆ ಪ್ರೇಮ್ ಜೀ ಸೇರಿದಂತೆ ಹಲವರ ಜತೆ ಚರ್ಚೆ ಮಾಡಿದ್ದು, ಈಗಾಗಲೇ 2 ಸಾವಿರ ಕೋಟಿ ಹಣವನ್ನು ಈ ಉದ್ದೇಶಕ್ಕೆ ನೀಡಲು ಅವರು ಮುಂದಾಗಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಡಿಕೆಶಿ ಕರೆ ನೀಡಿದರು.


    Provided by
    Provided by

    ರಾಜ್ಯದಲ್ಲಿ ನೂತನ ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗಿದೆ. ಆದರೂ ಉದ್ಯಮದಾರರಿಗೆ ರಾಜ್ಯ ಸರ್ಕಾರ ಯಾವ ಸವಲತ್ತು ಹಾಗೂ ಪ್ರೋತ್ಸಾಹ ಸಿಗುತ್ತದೆ ಎಂಬುದು ಮುಖ್ಯವಾಗುತ್ತದೆ.

    ಉದ್ಯಮಿಗಳು, ಬಂಡವಾಳ ಹೂಡಿಕೆದಾರರು ಬಲಿಷ್ಠವಾದರೆ, ಸರ್ಕಾರ ಬಲಿಷ್ಠವಾಗುತ್ತದೆ. ನೀವು ದುರ್ಬಲರಾದರೆ ನಾವು ದುರ್ಬಲವಾಗುತ್ತೇವೆ. ನೀವು ಆರ್ಥಿಕವಾಗಿ ಸಧೃಡವಾದರೆ ರಾಜ್ಯ ಕೂಡ ಆರ್ಥಿಕವಾಗಿ ಸಧೃಡವಾಗುತ್ತದೆ ಎಂದು ನಾವು ನಂಬಿದ್ದೇವೆ. ನಾನು ಬಹಳ ವರ್ಷಗಳಿಂದ ಸಚಿವನಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಮೊದಲ ಬಾರಿಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವದಲ್ಲಿ ಪಾಲ್ಗೊಂಡ ನಾರಾಯಣ ಮೂರ್ತಿ ಹಾಗೂ ಅಜೀಂ ಪ್ರೇಮ್ ಜಿ ಅವರು ಇದಕ್ಕೆ ದೇಶದಲ್ಲೇ ಒಂದು ಹೊಸ ರೂಪ ನೀಡಿದರು.

    ನಂತರ ವಿಶ್ವದ ಪ್ರಮುಖ ನಾಯಕರು ಬೆಂಗಳೂರಿಗೆ ಬರಲು ಆರಂಭಿಸಿದರು. ಬೆಂಗಳೂರಿಗೆ ಸಾವಿರಾರು ಬಹುರಾಷ್ಟ್ರೀಯ ಕಂಪನಿಗಳು ಕಾಲಿಟ್ಟವು. ಅವರು ಇಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಾನು ಅಜೀಂ ಪ್ರೇಮ್ ಜೀ ಅವರ ಜತೆ ಚರ್ಚೆ ಮಾಡುವಾಗ ಅವರು ಒಂದು ವಿಚಾರ ಹೇಳಿದರು. ನಮ್ಮಲ್ಲಿ 5 ಮಿಲಿಯನ್ (50 ಲಕ್ಷ) ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ 2 ಮಿಲಿಯನ್ ನಷ್ಟು ಐಟಿ ಉದ್ಯೋಗಸ್ಥರು ಬೆಂಗಳೂರಿನಲ್ಲಿದ್ದಾರೆ.

    ತಂತ್ರಜ್ಞಾನದ ಬೆಳವಣಿಗೆಯಲ್ಲಿ ಬೆಂಗಳೂರು ಜಾಗತಿಕ ಮಟ್ಟದಲ್ಲೇ ತನ್ನದೇ ಆದ ಹೆಸರು ಸಂಪಾದಿಸಿದೆ. ನಮ್ಮಲ್ಲಿ 300ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳು ಬೆಂಗಳೂರಿನಲ್ಲಿವೆ. ಇಡೀ ರಾಜ್ಯದಲ್ಲಿ 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಈ ದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾನವಸಂಪನ್ಮೂಲ ಉತ್ಪಾದನೆ ಬೇರೆ ಯಾವುದೇ ರಾಜ್ಯಗಳಲ್ಲಿ ಆಗುತ್ತಿಲ್ಲ. ಆ ಮೂಲಕ ಇಡೀ ವಿಶ್ವಕ್ಕೆ ಶಕ್ತಿ ನೀಡುತ್ತಿದ್ದೇವೆ ಎಂದರು.

    ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದಾರೆ. ನಾವು ನಿಮ್ಮೆಲ್ಲರಿಗೂ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುತ್ತೇವೆ. ನಮ್ಮ ರಾಜ್ಯದಲ್ಲಿ ತಾಂತ್ರಿಕ ವಿಚಾರವಾಗಿ ಕ್ಷಮತೆ ಹೊಂದಿರುವ ಮಾನವ ಸಂಪನ್ಮೂಲವಿದೆ ಎಂಬ ಭರವಸೆಯನ್ನು ನಾನು ನೀಡಬಲ್ಲೆ. ನಿಮ್ಮಲ್ಲಿ ಏನಾದರೂ ಸಮಸ್ಯೆ, ತೊಂದರೆ ಇದ್ದರೆ ಅವುಗಳನ್ನು ಹೇಳಿ. ನಾವು ನಿಮ್ಮ ಜತೆ ಕೈಜೋಡಿಸಿ ಕೆಲಸ ಮಾಡುತ್ತೇವೆ. ನೀವು ಉದ್ಯೋಗ ಸೃಷ್ಟಿಸಿ, ತೆರಿಗೆ ಪಾವತಿಸಿ ರಾಜ್ಯಕ್ಕೆ ಶಕ್ತಿ ತುಂಬುತ್ತಿದ್ದೀರಿ. ದೇಶದ ತೆರಿಗೆ ಪಾವತಿಯಲ್ಲಿ ಕರ್ನಾಟಕ ಶೇ.37ರಷ್ಟು ಪಾಲನ್ನು ಹೊಂದಿದ್ದು, ಈ ಶಕ್ತಿಯನ್ನು ನೀವು ತುಂಬಿದ್ದೀರಿ. ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಈ ಟೆಕ್ ಸಮಿಟ್ ನಡೆದಿದ್ದು, ಅವರು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರು ಬಹಳ ಉತ್ಸುಕತೆಯಿಂದ ಈ ಇಲಾಖೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಈ ಬೆಂಗಳೂರಿನ ಸಮ್ಮೇಳನದಲ್ಲಿ ನೀವು ನಿಮ್ಮ ಅಭಿಪ್ರಾಯ, ಆಲೋಚನೆ, ಸಮಸ್ಯೆ ಎಲ್ಲವನ್ನು ಹಂಚಿಕೊಳ್ಳಿ. ನಾವು ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ.ಮಾಹಿತಿ ತಂತ್ರಜ್ಞಾನ ನೀತಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಈಗ ನಾವು ಜೈವಿಕ ಇಂಧನ, ಅನ್ವೇಷಣಾ ನೀತಿಯನ್ನು ರೂಪಿಸಿದ್ದೇವೆ. ಈ ಸಮ್ಮೇಳನದಲ್ಲಿ ನಿಮ್ಮ ಸಲಹೆಗಳನ್ನು ನಾವು ನಿರೀಕ್ಷಿಸುತ್ತೇವೆ. ನಾವು ನಿಮ್ಮ ಜತೆ ಇರುತ್ತೇವೆ ಎಂಬ ವಾಗ್ದಾನ ನೀಡುತ್ತಾ ನಿಮ್ಮೆಲ್ಲರಿಗೂ ಶುಭ ಕೋರುತ್ತೇನೆ.”ಎಂದರು.

    admin
    • Website

    Related Posts

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ತುಮಕೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ ಸೆಟಿ ಸಂಸ್ಥೆಯು ಮೇ ಕೊನೆಯ ವಾರದಲ್ಲಿ 30…

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.