nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು
    ಜಿಲ್ಲಾ ಸುದ್ದಿ April 24, 2024

    ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು

    By adminApril 24, 2024No Comments2 Mins Read
    saragooru 6

    ಸರಗೂರು: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು, ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು, ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜುರವರ ಮಗನಾದ ಯೊಗಾಂಶು ಬಾಲರಾಜು ಮನವಿ ಮಾಡಿದರು.

    ತಾಲೂಕಿನ ಮುಳ್ಳೂರು ಮತ್ತು ಹಂಚೀಪುರ ಶಕ್ತಿ ಕೇಂದ್ರಗಳಲ್ಲಿ ಮಂಗಳವಾರದಂದು, ಭಾರತೀಯ ಜನತಾ ಹಾಗೂ ಜನತಾದಳ ಪಕ್ಷದ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮಾತನಾಡಿದರು.


    Provided by
    Provided by

    ಇವೆಲ್ಲವನ್ನು ಪ್ರಬುದ್ದ ಮತದಾರರು ಅರ್ಥೈಸಿಕೊಂಡಿದ್ದು, ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಮ್ಮ ತಂದೆ ಕೊಳ್ಳೇಗಾಲ ತಾಲ್ಲೂಕಿನ ಆಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ತಾತನ ಕಾಲದಿಂದಲೂ ಜನರು ಸೇವೆ ಮಾಡಿಕೊಂಡು ಇವಾಗಲೂ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.

    ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಸೇವೆ ಮಾಡಲು ಸಿದ್ಧರಿದ್ದಾರೆ. ಸದಾ ನಿಮ್ಮೊಂದಿಗೆ ಬೆರೆತು ಕ್ಷೇತ್ರದ ಅಭಿವೃದ್ದಿಗೆ ದುಡಿಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಪ್ರತಿ ಹಳ್ಳಿ ಹಳ್ಳಿಗೂ ತಲುಪಿಸಲು ಈ ಬಾರಿ ಬಿಜೆಪಿಗೆ ಅವಕಾಶ ನೀಡಿ. ನನ್ನನ್ನು ಅರ್ಶೀವದಿಸಬೇಕು ಎಂದು ಹೇಳಿದರು.

    ಜೆಡಿಎಸ್ ಮುಖಂಡ ಜಯಪ್ರಕಾಶ್ ಮಾತನಾಡಿ ಸಂವಿಧಾನ ಬದಲಾವಣೆ ಮಾಡುತ್ತವೆ ಹೇಳುತ್ತಿರುವ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಸಾಧ್ಯವಿಲ್ಲ ಎಂದರು.

    ಕಾಂಗ್ರೆಸ್ ಪಕ್ಷದವರಿಗೆ ಸೋಲಿನ ಹತಾಶೆಯಿಂದ ನಿವೃತ್ತಿ ಘೊಷಣೆ ಮಾಡಿರುವ ವಿ. ಶ್ರೀನಿವಾಸಪ್ರಸಾದ್ ಅವರ ಮನೆಗೆ ಹೋಗುತ್ತಿದ್ದಾರೆ. ಈಗಾಗಲೇ ಒಂದಲ್ಲ ನಾಲ್ಕು ಬಾರಿ ನನ್ನ ಬೆಂಬಲ ಪ್ರಧಾನಿ ಮೋದಿಗೆ. ನನ್ನ ಮತ ಬಿಜೆಪಿಗೆ ಎಂದು ಹೇಳಿದ್ದಾರೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೀಗಾಗಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

    ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಬಿಜೆಪಿ ಪಕ್ಷದ ಜಿಲ್ಲಾ ವಕ್ತಾರರು ಸಿ ಕೆ ಗಿರೀಶ ಮಾತನಾಡಿ, ಬಿಜೆಪಿ ಗೆಲ್ಲಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ. ಕ್ಷೇತ್ರದ ಅಭಿವೃದ್ದಿ ಶೂನ್ಯವಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮಲ್ಲೆ ಆಶೋತ್ತರಗಳನ್ನು ಈಡೇರಿಸಲು ಎಂಪಿ ಅಗತ್ಯವಾಗಿದೆ.ಈ ಸ್ಥಾನವನ್ನು ಬಾಲರಾಜು ಸಮರ್ಥವಾಗಿ ತುಂಬಲಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಅವರು ಕೈ ಬಲಪಡಿಸಲು ಹಾಗೂ ಕ್ಷೇತ್ರದ ಅಭಿವೃದ್ದಿಗಾಗಿ ಬಾಲರಾಜು ಅವರಿಗೆ ಮತ ನೀಡಿ, ಪ್ರತಿ ಮನೆ ಮನೆಗೆ ಭೇಟಿ ನೀಡಿ, ಬಿಜೆಪಿ ಸಾಧನೆ ತಿಳಿಸಿ. ನಿಮ್ಮ ಬೂತ್ ‍ನಲ್ಲಿ ಗೆದ್ದರೆ ಇಂಡಿಯಾ ಗೆದ್ದಂತೆ ಎಂದರು.

    ಈ ಸಂದರ್ಭದಲ್ಲಿ ಚಾಮರಾಜನಗರ ಚುನಾವಣೆ ಉಸ್ತುವಾರಿ ರಮೇಶ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಮಂಜೇಗೌಡ, ಗುರುಸ್ವಾಮಿ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರು ರಾಜೇಂದ್ರ, ಗೋಪಾಲಸ್ವಾಮಿ, ಮೊತ್ತ ಬಸವರಾಜಪ್ಪ, ಮನುಗನಹಳ್ಳಿ ಮಂಜುನಾಥ್, ನರಸಿಂಹ ಗೌಡ, ವಾಲ್ಮೀಕಿ ಸಿದ್ದರಾಜು, ಮಾಜಿ ಜಿಪಂ ಸದಸ್ಯ ಎಚ್.ಸಿ. ಶಿವಣ್ಣ, ರವಿಕುಮಾರ್, ಗಣಪತಿ, ಮಾಜಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ, ಲಂಕೆ ರಮೇಶ್, ದೊಡ್ಡಯ್ಯ, ಮಹೇಂದ್ರ, ಮಹದೇವಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.