ಮಧುಗಿರಿ: ಮಿಡಿಗೇಶಿ ಹೋಬಳಿಯ ಹೊಸಕೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕಾರೇನಹಳ್ಳಿ ಗ್ರಾಮದಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಲ್ಪಸಂಖ್ಯಾತರ ಮುರಾರ್ಜಿ ಶಾಲೆಯ ಸುಸಜ್ಜಿತವಾದ ಕಟ್ಟಡವನ್ನು ಶಾಸಕ ಎಂ.ವಿ.ವೀರಭದ್ರಯ್ಯ ಲೋಕಾರ್ಪಣೆ ಮಾಡಿದರು.
ಇದೇ ವೇಳೆ ಮಖ್ಯಮಂತ್ರಿಗಳ ಅಮೃತ ನಗೋರೋತ್ಥಾನ ಯೋಜನೆಯಡಿಯಲ್ಲಿ ಮಧುಗಿರಿ ಪುರಸಭೆ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಸುಮಾರು 6 ಕೋಟಿ ವೆಚ್ಚದ ರಸ್ತೆ ಚರಂಡಿ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy