nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಮ್‌ ಆದ್ಮಿ ಪಾರ್ಟಿಗೆ ಅಧಿಕೃತವಾಗಿ ಸೇರ್ಪಡೆಗೊಂಡ ಹಿರಿಯ ನಟ ಮುಖ್ಯಮಂತ್ರಿ ಚಂದ್ರು
    ರಾಜ್ಯ ಸುದ್ದಿ June 8, 2022

    ಆಮ್‌ ಆದ್ಮಿ ಪಾರ್ಟಿಗೆ ಅಧಿಕೃತವಾಗಿ ಸೇರ್ಪಡೆಗೊಂಡ ಹಿರಿಯ ನಟ ಮುಖ್ಯಮಂತ್ರಿ ಚಂದ್ರು

    By adminJune 8, 2022No Comments2 Mins Read
    chandru

    ಖ್ಯಾತ ನಟ, ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಮಂಗಳವಾರ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು.

    ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು. ಸತತ ನಲವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿ ನಾಟಕದ ಮೂಲಕ ರಾಜಕೀಯ ಕ್ಷೇತ್ರವನ್ನು ಶುದ್ಧೀಕರಣ ಮಾಡುವ ದಿಶೆಯಲ್ಲಿ ಚಂದ್ರುರವರು ಸಾಕಷ್ಟು ಶ್ರಮಿಸಿದ್ದಾರೆ ” ಎಂದು ಹೇಳಿದರು.


    Provided by
    Provided by

    “ಮುಖ್ಯಮಂತ್ರಿ ಚಂದ್ರುರವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದವರು. ಗೌರಿಬಿದನೂರು ಕ್ಷೇತ್ರದ ಶಾಸಕರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಗೂ ಜನರ ಭಾವನೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕಿರುವುದರಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ ಹಲವು ಸರ್ಕಾರಿ ತಾಣಗಳಲ್ಲಿ ಕನ್ನಡದಲ್ಲಿಯೂ ಸೂಚನಾ ಫಲಕಗಳು ಇರುವುದರ ಹಿಂದೆ ಚಂದ್ರುರವರ ಶ್ರಮವಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.

    ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಭಾಸ್ಕರ್‌ ರಾವ್‌ ಮಾತನಾಡಿ, “ಕನ್ನಡಕ್ಕಾಗಿ ಜೀವನವನ್ನು ಮುಡಿಪಾಗಿಟ್ಟಿರುವ ಮುಖ್ಯಮಂತ್ರಿ ಚಂದ್ರುರವರು ಕನ್ನಡ ನಾಡಿನಾದ್ಯಂತ ಆಮ್‌ ಆದ್ಮಿ ಪಾರ್ಟಿಯ ಸಾಧನೆಗಳನ್ನು ಪ್ರಚಾರ ಮಾಡಲು ಸಮ್ಮತಿ ಸೂಚಿಸಿರುವುದು ಪಕ್ಷದ ಸೌಭಾಗ್ಯ. ಎಎಪಿಯ ʻಪ್ರಚಾರ ರಾಯಭಾರಿʼ ಆಗಿ ಚಂದ್ರುರವರು ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮುಂತಾದ ಕ್ಷೇತ್ರಗಳಲ್ಲಿ ದೆಹಲಿಯ ಕೇಜ್ರಿವಾಲ್‌ ಸರ್ಕಾರ ಮಾಡಿರುವ ಸಾಧನೆಯನ್ನು ಜನರಿಗೆ ತಲುಪಿಸಲಿದ್ದಾರೆ. ಚಂದ್ರುರವರ ಅನುಭವಿ ವ್ಯಕ್ತಿತ್ವವು ಪಕ್ಷದ ಸ್ವಚ್ಛ, ಪಾರದರ್ಶಕ, ಪ್ರಾಮಾಣಿಕ ಸಿದ್ಧಾಂತಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನೆರವಾಗಲಿದೆ” ಎಂದು ಹೇಳಿದರು.

    ಮುಖ್ಯಮಂತ್ರಿ ಚಂದ್ರುರವರು ಮಾತನಾಡಿ, “ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಲ್ಲಿ ಪ್ರಾಮಾಣಿಕರು ಅಸ್ಪೃಶ್ಯರಾಗಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ. ಮುಂದೆಯೂ ದ್ರೋಹ ಮಾಡಲು ಹವಣಿಕೆ ಮಾಡುತ್ತಿವೆ. ಎಲ್ಲ 224 ಸ್ಥಾನಗಳನ್ನು ಗೆಲ್ಲುವುದು ಆಮ್‌ ಆದ್ಮಿ ಪಾರ್ಟಿಯ ಗುರಿ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ಕೇವಲ ವಿಸರ್ಜನೆ ಮಾಡಿದರೆ ಸಾಲದು. ಈಗಿ ಪರಿಷ್ಕರಣೆಯನ್ನು ಹಿಂಪಡೆದು, ಚುನಾವಣೆವರೆಗೂ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಬೇಕು. ಬೇರೆ ಪಕ್ಷಗಳಲ್ಲಿ ಮೂಲೆಗುಂಪಾಗಿರುವ ಸಹೃದಯದಿ ಹಾಗೂ ಪ್ರಾಮಾಣಿಕರು ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಸೇರಬೇಕು” ಎಂದು ಕರೆ ನೀಡಿದರು.

    “ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ – ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಮೂಲಕ ಸಮಾಜದ ಭವಿಷ್ಯವನ್ನು ಬಲಪಡಿಸುತ್ತಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

    ಸೇರ್ಪಡೆ ಸಮಾರಂಭದಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕೆ.ಮಥಾಯಿ, ವಿಜಯ್ ಶರ್ಮಾ, ಶಾಂತಲಾ ದಾಮ್ಲೆ, ಮೋಹನ್ ದಾಸರಿ, ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಬಿ. ಟಿ. ನಾಗಣ್ಣ, ಜಗದೀಶ್ ಚಂದ್ರ ಸೇರಿದಂತೆ ಅನೇಕ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.