ಕೊರಟಗೆರೆ: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರಿಗೆ ಅಗೌರವ ತೋರಿಸಿರುವುದರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ವಕೀಲರು ಕಾರ್ಯ ಕಲಾಪಗಳಿಗೆ ಹಾಜರಾಗದೆ ಕಾರ್ಯ ಕಲಾಪವನ್ನು ಬಹಿಷ್ಕರಿಸಿದರು.
ಈ ವೇಳೆ ವಕೀಲರ ಸಂಘದ ಉಪಾದ್ಯಕ್ಷ ಟಿ.ಕೃಷ್ಣಮೂರ್ತಿ ಮಾತನಾಡಿ, ಜನವರಿ 26 ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರು ಬಾಬಾ ಸಾಹೇಬರ ಭಾವಚಿತ್ರ ತೆಗೆಸಿ ಒಂದು ಗಂಟೆ ತಡವಾಗಿ ಧ್ವಜಾರೋಹಣ ಮಾಡಿದ್ದಾರೆ. ಇದು ಸಂವಿಧಾನಕ್ಕೆ ಅಗೌರವ ತೋರಿಸಿದಂತಾಗಿದೆ. ಉಚ್ಚ ನ್ಯಾಯಾಲಯದ ಆದೇಶ ಏನೇ ಇರಲಿ ವಿಶ್ವ ನಾಯಕನಿಗೆ ಅಗೌರವ ತೋರಿಸಿರುವುದು ನಮ್ಮ ರಾಷ್ಟ್ರವೇ ತಲೆತಗ್ಗಿಸುವಂತಾಗಿದೆ ಎಂದರು.
ಪುಟ್ಟರಾಜಯ್ಯ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಮಲ್ಲಿಕಾರ್ಜುನ ಗೌಡರು, ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಡಾ.ಬಿ.ಆರ್ ಅಂಬೇಡ್ಕರ್ ರಚಿಸಿ ದೇಶಕ್ಕೆ ನೀಡಿದಂತಹ ಸಂವಿಧಾನದಡಿ ಬರುವಂತಹ ನ್ಯಾಯಾಂಗದಲ್ಲಿ ಇಂತಹ ಘಟನೆಗಳು ನೆಡೆಯುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಭಾವುಕರಾದರು.
ಪ್ರತಿಭಟನಾ ಕಾರ್ಯಕ್ರಮದಲ್ಲಿ ವಕೀಲ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಲ್. ಸಂತೋಷ್, ವಕೀಲರುಗಳಾದ ನಾಗೇಂದ್ರಪ್ಪ, ರಾಮಚಂದ್ರಯ್ಯ, ಹುಸೇನ್ ಪಾಷ, ತಿಮ್ಮರಾಜು, ಜಿ.ಎಂ.ಕೃಷ್ಣಮೂರ್ತಿ, ನರಸಿಂಹರಾಜು, ಕೃಷ್ಣಪ್ಪ, ಮಂಜುನಾಥ್ ಶ್ರೀಮತಿ ಸಂತೋಷ ಲಕ್ಷೀ, ಹೆ.ಆರ್.ರಾಮಚಂದ್ರಯ್ಯ,ಶಿವಕುಮಾರ್,ಕ್ಯಾಶವಾರ ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB