nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025

    ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?

    October 4, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ
    • ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ
    • ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?
    • ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ
    • ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ
    • ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ
    • ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾಷಾ ಸ್ವಾಯತ್ತತೆಗೆ ಅಂಬೇಡ್ಕರ್‌ ಕೊಡುಗೆ ಅಪಾರ: ಮಂಜುನಾಥ್‌ ಹೆತ್ತೇನಹಳ್ಳಿ
    ತುಮಕೂರು December 2, 2024

    ಭಾಷಾ ಸ್ವಾಯತ್ತತೆಗೆ ಅಂಬೇಡ್ಕರ್‌ ಕೊಡುಗೆ ಅಪಾರ: ಮಂಜುನಾಥ್‌ ಹೆತ್ತೇನಹಳ್ಳಿ

    By adminDecember 2, 2024No Comments2 Mins Read
    kannadarajyothsava

    ಹೆಬ್ಬೂರು: ಕನ್ನಡಕ್ಕೂ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ಗೆ ಒಂದು ನಂಟಿದೆ ಎಂದು ಮುಖಂಡರು ಹಾಗೂ ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯರಾದ ಮಂಜುನಾಥ್ ಹೆತ್ತೇನಹಳ್ಳಿ ತಿಳಿಸಿದರು.

    ಹೋಬಳಿಯ ಅಂಬೇಡ್ಕರ್ ಆಟೋ ಚಾಲಕರ ಸಂಘದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಷಾವಾರು ಪ್ರಾಂತ್ಯಗಳ ಸ್ವಾಯತ್ತತೆ ಬಗ್ಗೆ ಅಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ಸಭೆಯಲ್ಲಿ ಮಾತನಾಡಿದ್ದರು. ಇಲ್ಲದಿದ್ದರೆ ಇಂತಹ ಹೆಮ್ಮೆಯ ಕರುನಾಡನ್ನು ಕಟ್ಟಿಕೊಳ್ಳಲು ನಮಗೆ ಸಾಧ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟರು.


    Provided by
    Provided by
    Provided by

    ಭಾರತ ಆಚಾರ, ವಿಚಾರ ಹಾಗೂ ಭಾಷೆಗಳಲ್ಲಿ ವೈವಿಧ್ಯತೆಯನ್ನು ಹೊಂದಿರುವ ದೇಶವೆಂದು ಅಂಬೇಡ್ಕರ್ ಅವರಿಗೆ ತಿಳಿದಿತ್ತು. ಇಂತಹ ವೈವಿಧ್ಯಮಯ ದೇಶ ಸಂವಿಧಾನದ ಮೂಲಕ ಮಾತ್ರವೇ ಏಕತೆ ಸಾಧಿಸಲು ಸಾಧ್ಯ ಎಂದು ಅವರಿಗೆ ತಿಳಿದಿತ್ತು ಎಂದು ಹೇಳಿದರು.

    ನಮ್ಮ ದೇಶವನ್ನು ಹೊರತು ಪಡಿಸಿ ಇಡೀ ಪ್ರಪಂಚ ಬಾಬಾ ಸಾಹೇಬರನ್ನು ನೋಡಿದ್ದು ಜ್ಞಾನದ ದೃಷ್ಟಿಯಿಂದ ಮಾತ್ರ. ಬಾಬಾ ಸಾಹೇಬರ ವಿವೇಚನೆಗೆ ಬರದಂತಹ ಯಾವ ವಿಷಯಗಳೂ ಈ ಪ್ರಪಂಚದಲ್ಲಿ ಇಲ್ಲ. ವರ್ಷದ 365 ದಿನಗಳು ಹಾಗೂ ದಿನದ 24 ಗಂಟೆಯೂ ಒಬ್ಬ ವ್ಯಕ್ತಿ ಬಗ್ಗೆ ನಿರಂತರ ಸಂಶೋಧನೆಗಳು ನಡೆಯುತ್ತಿದ್ದರೆ ಅದು ಡಾ.ಬಾಬಾ ಸಾಹೇಬ್ ಅವರ ಬಗ್ಗೆ ಮಾತ್ರ. ಇತಿಹಾಸ, ಅರ್ಥಶಾಸ್ತ್ರ, ಕಾನೂನುಶಾಸ್ತ್ರ ಹೀಗೆ ಎಲ್ಲ ವಿಷಯಗಳನ್ನು ಅಧ್ಯಯನ ಮಾಡಬೇಕೆಂದರೆ ಅಂಬೇಡ್ಕರ್ ಅವರನ್ನು ಓದಬೇಕು ಎಂದು ಸಲಹೆ ನೀಡಿದರು.

    ಕನ್ನಡ ಎಂಬ ಭಾಷೆಯೇ ಸುಂದರ. ನಮ್ಮ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದೆ. ಈಗ ಕನ್ನಡದ ಕುರಿತಾಗಿ ದೊರೆತಿರುವ ತಾಳುಗುಂದ ಶಾಸನವು ಹಲ್ಮಿಡಿ ಶಾಸನಕ್ಕೂ ಹಿಂದಿನ ಇನ್ನೂರು ವರ್ಷದ ಇತಿಹಾಸವನ್ನು ಹೇಳಲಿದೆ ಎಂದು ಭಾವಿಸುತ್ತೇನೆ. ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ ಎಂಬುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಸಾರುತ್ತದೆ. ಮೂರನೇ ಶಾಸ್ತ್ರೀಯ ಸ್ಥಾನಮಾನವನ್ನೂ ಪಡೆದಿರುವ ಭಾಷೆ ಎಂದರೆ ಅದು ಕನ್ನಡ ಎಂದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಕನ್ನಡ ಎಂದರೆ ರೋಮಾಂಚನ. ಕವಿ ಪುಂಗವರ ಪ್ರಕಾರ ಬಹುತೇಕ ದಕ್ಷಿಣ ಭಾರತನ್ನು ಕನ್ನಡ ನಾಡು ಎಂದು ಕರೆಯಲಾಗುತ್ತಿತ್ತು. ಆಲೂರು ವೆಂಕಟರಾಯರ ನೇತೃತ್ವದಲ್ಲಿ ಕನ್ನಡದ ಏಕೀಕರಣ ಶುರುವಾಯಿತು. ಅವರೊಂದಿಗೆ ಹಲವಾರು ಮಹನೀಯರು ತಮ್ಮ ತನು, ಮನ, ಧನ ಅರ್ಪಿಸಿ ನಮಗೆ ಸುಂದರವಾದ ಕನ್ನಡ ದೇಶವನ್ನು ಕಟ್ಟಿಕೊಟ್ಟಿದ್ದಾರೆ ಎಂದು ಇತಿಹಾಸ ನೆನಪಿಸಿಕೊಂಡರು.

    ಈ ಸಂದರ್ಭದಲ್ಲಿ ಕರ್ನಾಟಕ ಕೃಷಿಕ್ ಸಮಾಜ ಕಾರ್ಯಾಧ್ಯಕ್ಷರು, ಚಿಕ್ಕಣ್ಣ ಸ್ವಾಮಿ ಧರ್ಮದರ್ಶಿಗಳು ಪೂಜ್ಯ ಪಾಪಣ್ಣ, ಕೆಂಪಮ್ಮ ದೇವಿಯ ಪ್ರಧಾನ ಅರ್ಚಕ ಹಾಗೂ ತಾಪಂ ಮಜಿ ಸದಸ್ಯರಾದ, ಕೆಂಪ ಹನುಮಣ್ಣ, ಮುಖಂಡರಾದ ಕೆ.ಬಿ.ರಾಜಣ್ಣ, ರಂಗಣ್ಣ, ಕೃಷ್ಣ, ದೇವರಾಜ್, ಶಂಕರ್, ಚಿಕ್ಕಣ್ಣ, ನರಸಪ್ಪ ಹಾಗೂ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಗಿರೀಶ್ ಹಾಗೂ ಮಲ್ಲೇಶ್, ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು: ಸಕಾರಣವಿಲ್ಲದೆ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ ಕುಣಿಗಲ್ ತಾಲ್ಲೂಕು ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ…

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025

    ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?

    October 4, 2025

    ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು

    October 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.