ಮಧುಗಿರಿ: ಸಕಾಲಕ್ಕೆ ಆಂಬುಲೆನ್ಸ್ ಸಿಗದೇ ಮಹಿಳೆಯೊಬ್ಬರು ಮನೆಯಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಐಡಿಹಳ್ಳಿ ಗ್ರಾಮದ ಬಡ ಕುಟುಂಬದ 65 ವರ್ಷದ ಜಯಮ್ಮ ಮೃತಪಟ್ಟವರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲು 108ಕ್ಕೆ ಕುಟುಂಬಸ್ಥರು ಕರೆ ಮಾಡಿದ್ದರು. ಆದರೆ ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಮಹಿಳೆ ಸಕಾಲಕ್ಕೆ ಚಿಕಿತ್ಸೆ ಲಭಿಸದೇ ಅನ್ಯಾಯವಾಗಿ ಸಾವನ್ನಪ್ಪಿದ್ದಾರೆ.
ಘಟನೆಯ ಬಗ್ಗೆ ಟಿಎಚ್ ಓ ಗೆ ಕರೆ ಮಾಡಿದ ಬಳಿಕ ಆಂಬುಲೆನ್ಸ್ ಬಂದಿದೆ. ಆದರೆ ಆಂಬುಲೆನ್ಸ್ ಬರುವಷ್ಟರಲ್ಲಿ ಜಯಮ್ಮ ಕೊನೆಯುಸಿರೆಳೆದಿದ್ದರು. ಆಂಬುಲೆನ್ಸ್ ಸಕಾಲಕ್ಕೆ ದೊರಕುತ್ತಿದ್ದರೆ, ಮಹಿಳೆಯ ಪ್ರಾಣ ಉಳಿಸಬಹುದಿತ್ತು ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy