nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್

    August 30, 2026

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026
    Facebook Twitter Instagram
    ಟ್ರೆಂಡಿಂಗ್
    • ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು
    • ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್
    • ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ
    • KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ
    • ಬೀದರ್‌ ಜಿಲ್ಲಾ ಪಂಚಾಯತ್‌ ಸಿಇಒ ಬದಲಾವಣೆ: ನೂತನ ಸಿಇಒ ಆಗಿ ಗಿತ್ತೆ ಮಾಧವ್ ನೇಮಕ
    • ನಗರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ: ಸೌಲಭ್ಯಗಳ ಸದ್ಬಳಕೆಗೆ ಕರೆ
    • SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ
    • Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮಿತ್ ಶಾ ಅವರದ್ದು ಮೊಂಡುತನದ ಹೇಳಿಕೆ: ಎಸ್.ಎನ್.ನಾಗರಾಜು ವಾಗ್ದಾಳಿ
    ರಾಜ್ಯ ಸುದ್ದಿ December 22, 2024

    ಅಮಿತ್ ಶಾ ಅವರದ್ದು ಮೊಂಡುತನದ ಹೇಳಿಕೆ: ಎಸ್.ಎನ್.ನಾಗರಾಜು ವಾಗ್ದಾಳಿ

    By adminDecember 22, 2024No Comments2 Mins Read
    nagaraju

    ಸರಗೂರು: ದೇವರ ಹೆಸರು ಹೇಳಿದರೆ ಮುಕ್ತಿ ಸಿಗುತ್ತದೆ. ಅಂಬೇಡ್ಕರ್ ಹೆಸರು ಹೇಳಿದರೆ ಮುಕ್ತಿ ಸಿಗಲ್ಲ ಎಂದರೆ, ಇದು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾಡಿದ ಅವಮಾನ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಕಿಡಿಕಾರಿದರು.
    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿದರು.

    ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಕೊಡದೇ ಇದ್ದಿದ್ದರೆ ಅಮಿತ್ ಶಾ ಗೃಹ ಮಂತ್ರಿಯೂ ಆಗುತ್ತಿರಲಿಲ್ಲ. ಆದರೆ ಇಂದು ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆಗ್ರಹಿಸಿದರು.

    ಗೃಹ ಸಚಿವ ಅಮಿತ್ ಶಾ ಎದುರಾಳಿ ಪಕ್ಷವನ್ನು ಎದುರಿಸುವ ಸಲುವಾಗಿ ಅಂಬೇಡ್ಕರ್ ಅವರನ್ನು ಬಳಸಿಕೊಂಡಿದ್ದಾರೆ. ಮತ್ತೊಂದು ಪಕ್ಷವನ್ನು ಮಣಿಸಲು ಬಾಬಾ ಸಾಹೇಬರನ್ನು ಬಳಸಿಕೊಂಡರೆ ಸಹಿಸಲು ಅದನ್ನು ಸಾಧ್ಯವಿಲ್ಲ .ವಿವಾದ ಕಿಡಿ ಅಕ್ಷಮ್ಯ ಅಪರಾಧ. ಈ ಮೊಂಡುತನದ ಹೇಳಿಕೆಯನ್ನು ಪಕ್ಷಾತೀತವಾಗಿ ಖಂಡಿಸಬೇಕು. ಎಲ್ಲ ಸಮುದಾಯಗಳ ಜತೆಗೂಡಿ ಪ್ರತಿಭಟನೆ ಮಾಡಲಾಗುವುದು ಎಂದರು.

    ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ಧರಾಜು ಮಾತನಾಡಿ, ಸಂವಿಧಾನ ಶಿಲ್ಪಿ ವಿಶ್ವಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಸರಿಯಿಲ್ಲ. ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

    ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆ ಖಂಡನೀಯ. ಇಡೀ ವಿಶ್ವ ಅಂಬೇಡ್ಕರ್ ಬಗ್ಗೆ ಪ್ರಶಂಸೆಯಿಂದ ಮಾತನಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಸಂವಿಧಾನ ಕೊಡುವ ಮೂಲಕ ದೇಶವನ್ನು ಒಗ್ಗೂಡಿಸಿದವರು ಅಂಬೇಡ್ಕರ್. ಅವರ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆ ಕೇಳಬೇಕು. ಹಾಗೂ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿರವರಿಗೆ ಅಂಬೇಡ್ಕರ್ ಬಗ್ಗೆ ಗೌರವ ಇದ್ದಾರೆ ಸಚಿವ ಸಂಪುಟದಿಂದ ಶಾ ಅವರನ್ನು ವಜಾಗೊಳಿಸಿ ಎಂದು ವಾಗ್ದಾಳಿ ನಡೆಸಿದರು.

    ಪ.ಪಂ. ಸದಸ್ಯ ಶ್ರೀನಿವಾಸ ಮಾತನಾಡಿ, ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಇನ್ನೂ ಹೆಚ್ಚು ತಿಳಿದುಕೊಳ್ಳಬೇಕು ಎಂದರು.

    ಅಂಬೇಡ್ಕರ್ ಟ್ರಸ್ಟ್ ನಾಗರಾಜು ಮಾತನಾಡಿ, ಅಂಬೇಡ್ಕರ್ ಅವರ ವ್ಯಕ್ತಿತ್ವದ ಬಗ್ಗೆ ಮಾತಾಡಿದ್ದು, ನಮಗೆ ನೋವಾಗಿದೆ. ಹೀಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅಂಬೇಡ್ಕರ್ ಕೂಡಾ ನಮಗೆ ದೇವರೇ. ಅವರನ್ನು ಪೂಜ್ಯ ಭಾವನೆಯಿಂದ ನೋಡುವ ಕೋಟ್ಯಂತರ ಜನ ಇದ್ದಾರೆ. ಅಮೆರಿಕ, ಯು.ಕೆಯಲ್ಲಿ ಅವರ ಪ್ರತಿಮೆ ಇಟ್ಟಿದಾರೆ ಎಂದು ಹೇಳಿದರು.

    ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ವಾಹನ ಚಾಲಕರ ಸಂಘದ ಅಧ್ಯಕ್ಷ ಬಿರ್ವಾಳ್ ಚಿಕ್ಕಣ್ಣ ಮಾತನಾಡಿದರು.

    ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಚಿಕ್ಕಣ್ಣ , ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಚನ್ನೀಪುರ ನಾಗರಾಜು ,ಗ್ರಾ.ಪಂ. ಉಪಾಧ್ಯಕ್ಷ ಲಂಕೆ ರಮೇಶ್, ಮಹಾಸಭಾ ಪ್ರಧಾನ ಕಾರ್ಯದರ್ಶಿ ಚನ್ನೀಪುರ ಮಲ್ಲೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹುಣಸಹಳ್ಳಿ ನಾಗರಾಜು, ಮುಖಂಡರು ಗ್ರಾಮೀಣ ಮಹೇಶ್, ಉಯ್ಯಂಬಳ್ಳಿ ನಾಗರಾಜು ಲಂಕೆ ಲಕ್ಷ್ಮಣ್, ಚಿನ್ನಯ್ಯ, ದೊಡ್ಡಯ್ಯ, ಬಿಲ್ಲಯ್ಯ, ಮಲ್ಲಿಕಾರ್ಜುನ, ಚೆಲುವರಾಜು, ಇದಿಯಪ್ಪ, ಇನ್ನೂ ಮುಖಂಡರು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026

    KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    August 30, 2026

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅರಕಲಗೂಡು: ಕುಡಿಯುವ ನೀರಿಗೆ ಹಾಹಾಕಾರ, ಜನ ಜಾನುವಾರುಗಳು ಕಂಗಾಲು

    August 30, 2026

    ಹಾಸನ: ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ನಿಡುವಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪೆ ಗ್ರಾಮದಲ್ಲಿ ತೀವ್ರವಾದ ಕುಡಿಯುವ ನೀರಿನ ಅಭಾವ…

    ಹಾಸನದಲ್ಲಿ ಜಿಲ್ಲಾಧಿಕಾರಿಗೆ ಹೆಚ್.ಡಿ. ರೇವಣ್ಣ ಮತ್ತೆ ವಾರ್ನಿಂಗ್

    August 30, 2026

    ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ

    August 30, 2026

    KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    August 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.