ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ಏಪ್ರಿಲ್ 1 ರಂದು ತುಮಕೂರಿಗೆ ಆಗಮಿಸುವ ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ಕೋರಲು ಜಿಲ್ಲೆಯ ಎಲ್ಲಾ ಬಿಜೆಪಿ ಕಾರ್ಯಕರ್ತರು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದ್ದಾರೆ ಎಂದು ಗುಬ್ಬಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಆಗಮನಕ್ಕೆ ಬಿಜೆಪಿ ಸನ್ನದ್ಧವಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಅಮಿತ್ ಷಾ ಅವರನ್ನು ಹಾಗೂ ಸಿಎಂ ಬೊಮ್ಮಾಯಿ ಅವರನ್ನು ಸ್ವಾಗತಿಸಲಿದ್ದಾರೆ ಎಂದರು.ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ರಾಜ್ಯ ದ ಸಚಿವರು, ಶಾಸಕರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಉಸ್ತುವಾರಿಯನ್ನು ಯುವ ನಾಯಕ ವಿ.ವೈ.ವಿಜಯೇಂದ್ರ ವಹಿಸುತ್ತಿದ್ದು ಬಹಳ ಅದ್ದೂರಿಯಾಗಿ ಕೇಂದ್ರ ಗೃಹ ಅಮಿತ್ ಷಾ ರವರನ್ನು ಸ್ವಾಗತಿಸಲು ಸಜ್ಜಾಗಿದ್ದೇವೆ ಎಂದರು.
ಏಪ್ರಿಲ್ ಒಂದನೇ ತಾರೀಖು ಯೂನಿವರ್ಸಿಟಿ ಆವರಣಕ್ಕೆ ಆಗಮಿಸುವ ಅಮಿತ್ ಷಾ ಅವರನ್ನು ಸಿದ್ದಗಂಗಾ ಮಠಕ್ಕೆ ರೋಡ್ ಶೋ ಮೂಲಕ ಸ್ವಾಗತ ಕೋರಿ ಪುಷ್ಪ ಅರ್ಪಿಸಲಾಗುವುದು. ಮಠದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ರಾಷ್ಟ್ರೀಯ ನಾಯಕರು ಸಿದ್ದಗಂಗಾ ಮಠಕ್ಕೆ 10.30 ಕ್ಕೆ ಆಗಮಿಸಿ ನೇರ ಮಠಕ್ಕೆ ತಲುಪುವ ದಾರಿಯುದ್ದಕ್ಕೂ ಭವ್ಯ ಸ್ವಾಗತಕ್ಕೆ ಮಾತ್ರ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.
ಗುಬ್ಬಿ ತಾಲ್ಲೂಕಿನಿಂದ ಸುಮಾರು 3 ಸಾವಿರ ಕಾರ್ಯಕರ್ತರನ್ನು ಕರೆದೊಯ್ಯಲಾಗುವುದು. ಪ್ರತಿ ಗ್ರಾಮ ಪಂಚಾಯಿತಿಗೆ ಬಸ್ ಕಳುಹಿಸುವ ಜೊತೆಗೆ ವೈಯಕ್ತಿಕ ವಾಹನದಲ್ಲಿ ಮುಖಂಡರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಪ್ರಮುಖ ಮುಂಚೂಣಿ ನಾಯಕರು ಪಂಚಾಯಿತಿ ಮಟ್ಟದಲ್ಲಿ ಪ್ರವಾಸ ನಡೆಸಿ ಸಂಘಟನೆ ನಡೆಸುತ್ತಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಗುಬ್ಬಿ ತಾಲ್ಲೂಕಿನ ಬಿಜೆಪಿ ಮುಖಂಡರು ಹಾಜರಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5