nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026
    Facebook Twitter Instagram
    ಟ್ರೆಂಡಿಂಗ್
    • ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್
    • ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ
    • ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ
    • ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    • ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ
    • ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.
    • ತುಮಕೂರು: ಛಲವಾದಿ ಮಹಾಸಭಾದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಗ್ರಾಮದೇವತೆ ಅಮ್ಮನವರ ನೂತನ ದೇವಾಲಯ ಪ್ರವೇಶ; ನೂತನ ಸ್ಥಿರಮೂರ್ತಿ ಪ್ರತಿಷ್ಟಾನಾ ಮತ್ತು ವಿಮಾನಗೋಪುರ ಕಳಶ ಸ್ಥಾಪನಾ ಕುಂಭಾಭಿಷೇಕ ಮಹೋತ್ಸವ
    ಗುಬ್ಬಿ November 25, 2021

    ಶ್ರೀ ಗ್ರಾಮದೇವತೆ ಅಮ್ಮನವರ ನೂತನ ದೇವಾಲಯ ಪ್ರವೇಶ; ನೂತನ ಸ್ಥಿರಮೂರ್ತಿ ಪ್ರತಿಷ್ಟಾನಾ ಮತ್ತು ವಿಮಾನಗೋಪುರ ಕಳಶ ಸ್ಥಾಪನಾ ಕುಂಭಾಭಿಷೇಕ ಮಹೋತ್ಸವ

    By adminNovember 25, 2021No Comments2 Mins Read
    ammanavaru

    ಗುಬ್ಬಿ: ಪಟ್ಟಣದ ಆದಿಶಕ್ತಿ  ಶ್ರೀ ಗ್ರಾಮದೇವತೆ ಅಮ್ಮನವರ ಪುರಾತನ ದೇವಾಲಯವನ್ನು ಮೂಲ ಸ್ಥಳದಲ್ಲೇ ಜೀರ್ಣೋದ್ಧಾರ ನಡೆಸಿ ನೂತನ ದೇವಾಲಯವನ್ನು ಹದಿನೆಂಟು ಕೋಮಿನ ಭಕ್ತರ ಸಹಕಾರದಲ್ಲಿ ನವೆಂಬರ್ 29, 30 ಮತ್ತು ಡಿಸೆಂಬರ್ 1 ರಂದು ಮೂರು ದಿನಗಳ ಕಾಲ ಧಾರ್ಮಿಕ ವಿಧಿವತ್ತಾಗಿ  ದೇವತಾಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಿ.ಎನ್.ಬೆಟ್ಟಸ್ವಾಮಿ ತಿಳಿಸಿದರು.

    ಪಟ್ಟಣದ ಹಳೇ ಸಂತೆ ಮೈದಾನದ  ಬಳಿಯಿರುವ ಗದ್ದುಗೆ ಗ್ರಾಮದೇವತೆ ದೇವಾಲಯ ಬಳಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸ  ಪ್ರಸಿದ್ಧ  ಶ್ರೀ ಗ್ರಾಮದೇವತೆ ಗುಬ್ಬಿ  ಹಳೇ ಗ್ರಾಮದ ಹೃದಯ ಭಾಗದಲ್ಲಿದ್ದು ದೇವಸ್ಥಾನ ಕಟ್ಟಡದ  ಶಿಥಿಲಾವಸ್ಥೆ ಕಂಡ ನಂತರದಲ್ಲಿ ಗುಬ್ಬಿ  ಪಟ್ಟಣದ ಹದಿನೆಂಟು ಕೋಮಿನ ಮುಖಂಡರು ಸಭೆ ಸೇರಿ ಚರ್ಚಿಸಿ ಜೀರ್ಣೋದ್ದಾರ ಕಾರ್ಯಕ್ಕೆ ಚಾಲನೆ ನೀಡಲಾಗಿ 13 ವರ್ಷದ ನಂತರ ಸಂಪೂರ್ಣಗೊಳಿಸಲಾಗಿದೆ ಎಂದರು.


    Provided by
    Provided by

    ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮವನ್ನು ಈ ತಿಂಗಳ 29 ರಂದು ಪೂರ್ಣಕುಂಭದ  ಮೆರವಣಿಗೆ ಮೂಲಕ  ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದಿಂದ ನಗರದ ರಾಜ ಬೀದಿಯಲ್ಲಿ ಹೊರಟು ಪಣಗಾರರ ಬೀದಿಯಲ್ಲಿನ ಗ್ರಾಮದೇವತೆಯ ಮೂಲ ಸ್ಥಳದ ನೂತನ ದೇವಾಲಯ ತಲುಪಿ,  30ನೇ ತಾರೀಕು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ವಿವಿಧ ರೀತಿಯ ಹೋಮ ಹವನ ಮಾಡುವ ಮೂಲಕ ದೇವತಾರಾಧನೆಯ ಕಾರ್ಯಕ್ರಮಗಳು  ನಡೆಯಲಿದೆ ಎಂದರು.

    ಡಿಸೆಂಬರ್ 1 ರಂದು ಶ್ರೀ ಅಟವೀ ಜಂಗಮ  ಮಠದ ಶ್ರೀ ಆಟವಿ ಶಿವಲಿಂಗ ಸ್ವಾಮೀಜಿ ಚಿಕ್ಕತೂಟ್ಲುಕೆರೆ  ಹಾಗೂ ಗುಬ್ಬಿ ಶ್ರೀ ತೊರೇಮಠಾಧ್ಯಕ್ಷರಾದ ಶ್ರೀ ರಾಜಶೇಖರಮಹಾ ಸ್ವಾಮೀಜಿಗಳವರ ಅಮೃತ ಹಸ್ತದಿಂದ ಗೋಪುರ ಕಳಸ ಸ್ಥಾಪನೆ ನಡೆಯಲಿದೆ. ನಂತರ ನಡೆಯುವ  ಧಾರ್ಮಿಕ ಸಮಾರಂಭವನ್ನು ಸಂಸದರಾದ  ಜಿ.ಎಸ್.ಬಸವರಾಜು ಉದ್ಘಾಟನೆ ಮಾಡಲಿದ್ದಾರೆ.

    ಕಾರ್ಯಕ್ರಮದಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್ ಅತಿಥಿಗಳಾಗಿ ಭಾಗವಹಿಸುವರು, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್, ಸಚಿವ ವಿ.ಸೋಮಣ್ಣ ಸೇರಿದಂತೆ ಎಲ್ಲಾ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದೇವಾಲಯ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲಾ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

    ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಟೇಲ್ ಕೆಂಪೇಗೌಡ ಮಾತನಾಡಿ, ಕಳೆದ 13 ವರ್ಷದ ಹಿಂದೆ ದೇವಾಲಯ ಜೀರ್ಣೋದ್ಧಾರದ ಕಾರ್ಯವನ್ನು ಆರಂಭಿಸಲಾಯಿತು  ಅಂದಿನಿಂದ ಇಂದಿನವರೆಗೂ ದೇವಸ್ಥಾನದ ನಿರ್ಮಾಣಕ್ಕೆ ಅಂದಾಜು 1 ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಿ ಕೆಲಸ ಪ್ರಾರಂಭಿಸಲಾಯಿತು. ಗ್ರಾಮದೇವತೆ ನೆಲೆಸಿರುವ ಮೂಲ ಸ್ಥಳದಲ್ಲೇ  ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಅಗತ್ಯ ಸ್ಥಳ ನೀಡಲು ಕುರುಹಿನಶೆಟ್ಟಿ ಸಿದ್ದಲಿಂಗಪ್ಪ ವಂಶಸ್ಥರ ಕೊಡುಗೆಯನ್ನು ನಾವೆಲ್ಲರೂ  ಸ್ಮರಿಸಬೇಕಾಗಿದೆ. ಇದರ ಜೊತೆಗೆ  ಗುಬ್ಬಿ ಗ್ರಾಮದ ಹದಿನೆಂಟು ಕೋಮಿನ ಜನತೆ ಆರ್ಥಿಕ ನೆರವು ಮಾಡಿದ್ದರಿಂದ ಇಂದು ಈ  ಸುಂದರ ದೇವಾಲಯ ನಿರ್ಮಾಣಕ್ಕೆ ಸಹಕಾರವಾಯಿತು ಎಂದು ತಿಳಿಸಿದರು.

    ನಾಳೆ ನಡೆಯುವ ದೇವಸ್ಥಾನ  ಪ್ರಾರಂಭೋತ್ಸವ ಕಾರ್ಯಕ್ರಮದ ದಿನದಿಂದ ಭಕ್ತರ ಸಹಕಾರದಲ್ಲಿ ಮೂರು ದಿನಗಳ ಕಾಲ ದಾಸೋಹ ಕಾರ್ಯ ನಡೆಸಲಾಗುವುದು. ಈ ದೇವಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಗುಬ್ಬಿ ತಾಲ್ಲೂಕಿನ ಎಲ್ಲಾ ಭಕ್ತರು ಆಗಮಿಸಿ ತಾಯಿಯ ಆಶಿರ್ವಾದ ಪಡೆಯುವ ಮೂಲಕ ಈ ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದರು.

    ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ

    January 6, 2026

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು

    December 25, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ತುಮಕೂರು: ಜಿಲ್ಲೆಯ 17 ವರ್ಷದ ಯುವ ಪ್ರತಿಭೆ ಟಿ.ಎಸ್.ಪ್ರತೀಕ್ ಎಜೆಂಟಿಕ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (Agentic AI) ಕ್ಷೇತ್ರದಲ್ಲಿ ಸಾಧನೆ ಮಾಡಿ…

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026

    ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ

    January 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.