ಕೊರಟಗೆರೆ: ತುಮಕೂರು ನಗರದಲ್ಲಿ ಮೇ 13ರಂದು ನಡೆಯುವ ರಾಜ್ಯದ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ನವರ 75ನೇ ಜನ್ಮದಿನದ ಅಮೃತೋತ್ಸವದ ಸಮಾರಂಭದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಿದ್ದು, ಸಹಕಾರ ರತ್ನ ಕೆ.ಎನ್.ರಾಜಣ್ಣನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಧನ್ಯಕುಮಾರ್ ಕರೆ ನೀಡಿದರು..
ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದವರು ತೀರ್ಮಾನದಂತೆ ಮೇ 13 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ನಡೆಸಲು ತೀರ್ಮಾನಿಸಲಾಗಿದ್ದು, ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ದಿಗೆ ಬದ್ದತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ ಸಹಕಾರ ರಂಗದ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕೃತರು, ಕರ್ನಾಟಕ ಸರ್ಕಾರದ ಸಹಕರ ಸಚಿವರಾದ ಕೆ.ಎನ್.ರಾಜಣ್ಣ ನವರು 75ನೇ ವರ್ಷಕ್ಕೆ ಕಾಲಿರಿಸಿದ್ದಾರೆ, ಅವರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಬೆಳ್ಳಾವಿ ಶಾಸಕರಾಗಿ, ಪ್ರಸ್ತುತ ಎರಡನೇ ಅವಧಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರೂ ಆಗಿರುವ ಕೆ.ಎನ್.ರಾಜಣ್ಣ ನವರ ಸೇವೆ ಬಹಳ ಅಪಾರವಾದದು ಎಂದು ತಿಳಿಸಿದರು.
ತುಮಕೂರು ಡಿಸಿಸಿ ಬ್ಯಾಂಕ್ ನಲ್ಲಿ ಕಳೆದ 3 ದಶಕಗಳಿಂದ ಅಧ್ಯಕ್ಷರಾಗಿ ಜಿಲ್ಲೆಯ ರೈತರ ಹಿತೈಷಿಯಾಗಿ ಅತ್ಯುತ್ತಮ ಸಹಕಾರ ನೀಡುತ್ತಿದ್ದಾರೆ, ನೇರ ನಡೆ ನುಡಿಯ ಕೆ.ಎನ್. ರಾಜಣ್ಣ ರವರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತರ, ಶೋಷಿತರ ಹಾಗೂ ಎಲ್ಲಾ ಜಾತಿಯ ಬಡವರ ಏಳಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು , ಬಂಗಾರಪ್ಪ, ಪ್ರಚಲಿತ ರಾಜಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರುಗಳ ಆದರ್ಶದಂತೆ ತಮ್ಮ ಜೀವನವನ್ನು ಹಿಂದುಳಿದ ವರ್ಗ ಮತ್ತು ದಲಿತರ ಏಳಿಗೆಗೆ ದುಡಿಯುತ್ತಿದ್ದು ರೈತರ ಪಾಲಿನ ಜೀವನಾಡಿಯಾಗಿ ಸಹಕಾರ ಕ್ಷೇತ್ರವನ್ನು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ದ ಮಹಾನ್ ರಾಜಕಾರಣಿ ಆಗಿದ್ದಾರೆ ಎಂದು ತಿಳಿಸಿದರು.
ಪ.ಪಂ. ಸದಸ್ಯ ಹಿಂದುಳಿದ ವರ್ಗಗಳ ನಾಯಕ ಎ.ಡಿ.ಬಲರಾಮಯ್ಯ ಮಾತನಾಡಿ. ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ 75ನೇ ಜನ್ಮದಿನವನ್ನು ಬಹಳ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕೊರಟಗೆರೆ ತಾಲೂಕಿನಿಂದ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಈ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಕೆ.ಎನ್.ರಾಜಣ್ಣ ಕಳೆದ 50 ವರ್ಷಗಳಿಂದ ಸಾಮಾಜಿಕ ಹಾಗೂ ಸಹಕಾರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಗುರುತಿಸಿ ಅವರ ಬದುಕಿನ ಸಾರ್ಥಕತೆಯ 75ನೇ ಜನ್ಮದಿನದ ಅಂಗವಾಗಿ ತುಮಕೂರು ಜಿಲ್ಲೆಯ ಆತ್ಮೀಯ ಅಭಿಮಾನಿಗಳು, ಹಿತೈಷಿಗಳು ಬಿಡುಗಡೆ ಗೊಳಿಸುತ್ತಿರುವ ಕೆ.ಎನ್.ಆರ್. ಅಭಿನಂದನಾ ಗ್ರಂಥ ಬಿಡುಗಡೆ ಮಾಡುತ್ತಿರುವುದು ಅಭಿನಂದನಾರ್ಹವಾಗಿದೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಮೇಲ್ವಿಚಾರಕ ಬೋರಣ್ಣ, ಶಿವಣ್ಣ, ಮಂಜೇಶ್, ಶಾಂತಕುಮಾರ್, ಪವನ್ ಕುಮಾರ್, ಆಂಜನೇಯುಲು, ಎನ್, ಪದ್ಮನಾಬ್, ರುದ್ರೇಶ್, ಅಶ್ವತ್ಥ ನಾರಾಯಣರಾಜು, ಗಟ್ಲಹಳ್ಳಿ ಕುಮಾರ್, ವಿನಯ್ ಕುಮಾರ್, ಕೇಶವಮೂರ್ತಿ, ಗೋವಿಂದರಾಜು, ಚಿಕ್ಕಣ್ಣ,ರವಿಕುಮಾರ್, ದೊಡ್ಡಣ್ಣ, ಓಬಳರಾಜು, ಶಶಿಕುಮಾರ್, ರಾಜೇಶ್ ದೊಡ್ಡಮುನಿ, ಚಿನ್ನಿ ವೆಂಕಟಶೆಟ್ಟಿ, ಶಶಿಕುಮಾರ್, ಮಂಜುನಾಥ್,ಗೌರಿಶಂಕರ್, ಆನಂದ್, ಕಾಲಿ ಚರಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW