ಪ್ರಧಾನಿ ನರೇಂದ್ರ ಮೋದಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್ ನಲಪಾಡ್ ರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದರು. ಸಮಾವೇಶದ ಬಳಿಕ ಮೋದಿ ಹಿಂದಿರುಗುತ್ತಿದ್ದರು, ಈ ವೇಳೆ ಮೇಖ್ರಿ ಸರ್ಕಲ್ ಬಳಿ ಚೊಂಬು ಪ್ರದರ್ಶನಕ್ಕೆ ಕಾಂಗ್ರೆಸ್ ಮುಖಂಡರು ಯತ್ನಿಸಿದ್ದರು.
ಯುವ ಕಾಂಗ್ರೆಸ್ ಮುಖಂಡ ನಲಪಾಡ್ ನೇತೃತ್ವದಲ್ಲಿ ಮೋದಿಗೆ ಚೊಂಬು ತೋರಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ನಲಪಾಡ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ನಲಪಾಡ್ ಚೊಂಬು ಪ್ರದರ್ಶನ ಮಾಡೋದು ತಪ್ಪಾ ಅಂತಾ ಆಕ್ರೋಶ ಹೊರಹಾಕಿದ್ರು. ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ (ಮೇಖ್ರಿ ಸರ್ಕಲ್) ಅರ್ಧಗಂಟೆ ಮುಂಚೆಯೇ ಬಂದಿದ್ದ ನಲಪಾಡ್ ನಂಬರ್ ಇಲ್ಲದ ಕಾರಿನಲ್ಲಿ ಕಾದು ಕುಳಿತಿದ್ದರು.
ಕಪ್ಪು ಬಣ್ಣದ ಲ್ಯಾಂಡ್ರೋವರ್ ಡಿಫೆಂಡರ್ ಕಾರಿನಲ್ಲಿ ನಲಪಾಡ್ ಜೊತೆಗೆ 8 ಜನ ಇದ್ದರು. ಮೋದಿ ತೆರಳುವ ಸಂದರ್ಭದಲ್ಲೇ ಚೊಂಬು ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296