ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಶಿಫಾರಸು ಜಾರಿಗೆ ಕ್ರಮ ಕೈಗೊಳ್ಳಲಾಗಿದೆ.
ಹಿಂದಿನ ವೇತನ ಆಯೋಗದ ಎರಡನೇ ವರದಿಯಲ್ಲಿ ಕಾರ್ಯಾಚರಣೆ ವೃಂದ ಬಲಪಡಿಸಬೇಕು, ಸಹಾಯಕ ಸಿಬ್ಬಂದಿ ವೃಂದ ಕಡಿಮೆ ಮಾಡಬೇಕೆಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಸಹಕಾರ ಇಲಾಖೆಯಲ್ಲಿ 300ಕ್ಕೂ ಹೆಚ್ಚು ಹುದ್ದೆಗಳನ್ನು ರದ್ದು ಮಾಡಲಾಗುತ್ತೆ. ಇವುಗಳಲ್ಲಿ 50 ದ್ವಿತೀಯ ದರ್ಜೆ ಸಹಾಯಕರು, 200 ಡಿ ಗ್ರೂಪ್ ನೌಕರರು, 32 ಶೀಘ್ರ ಲಿಪಿಕಾರರು, 30 ಡೇಟಾ ಎಂಟ್ರಿ ಆಪರೇಟರ್ ಗಳು ಸೇರಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಶೇ. 34 ರಷ್ಟು ಹುದ್ದೆಗಳು ಖಾಲಿ ಇವೆ. ಮಂಜೂರಾದ 7.69 ಲಕ್ಷ ಹುದ್ದೆಗಳಿದ್ದು, 5.11 ಲಕ್ಷ ಮಂದಿ ನೌಕರರಿದ್ದಾರೆ. 2.58 ಲಕ್ಷ ಖಾಲಿ ಹುದ್ದೆಗಳು ಇವೆ ಎಂದು ಹೇಳಲಾಗಿದೆ.ಅನಗತ್ಯ ಹುದ್ದೆಗಳನ್ನು ರದ್ದು ಮಾಡಲಾಗುತ್ತಿದ್ದು, ಸರ್ಕಾರದ ಮೇಲಿನ ಆರ್ಥಿಕ ಹೊರೆ ತಗ್ಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


