nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025
    Facebook Twitter Instagram
    ಟ್ರೆಂಡಿಂಗ್
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    • ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    • ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    • ಮನೆ–ಮನೆಗೆ ಪೊಲೀಸ್‌: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
    • ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
    • ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    • ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಸಂಕಷ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಯಶಸ್ವಿಯಾಗಿ  ಕಾರ್ಯನಿರ್ವಹಿಸಿದ್ದಾರೆ | ಕ್ಷೇತ್ರಶಿಕ್ಷಣಾಧಿಕಾರಿ ನಾಗಭೂಷಣ್
    ಜಿಲ್ಲಾ ಸುದ್ದಿ January 11, 2022

    ಕೊರೊನಾ ಸಂಕಷ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಯಶಸ್ವಿಯಾಗಿ  ಕಾರ್ಯನಿರ್ವಹಿಸಿದ್ದಾರೆ | ಕ್ಷೇತ್ರಶಿಕ್ಷಣಾಧಿಕಾರಿ ನಾಗಭೂಷಣ್

    By adminJanuary 11, 2022No Comments2 Mins Read
    hiriyuru

    ಹಿರಿಯೂರು: ಭಾರತದಾದ್ಯಂತ ನಿರ್ಗತಿಕರನ್ನು ಸಂಕಷ್ಟಕ್ಕೆ ಸಿಲುಕುತ್ತಿರುವ ಮಾರಕ ಕೊರೊನಾ ರೋಗದ ಸಂಕಷ್ಟ ಪರಿಸ್ಥಿತಿಯ ಎರಡೂ ಅಲೆಗಳ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದು, ಕೊರೊನಾ 3ನೇ ಅಲೆಯು ಮಕ್ಕಳ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂಬುದು ತಜ್ಞರ ಅಭಿಪ್ರಾಯವಾಗಿದ್ದು ಈ ಬಾರಿ ತಾಲ್ಲೂಕಿನ ಮಕ್ಕಳ ಕಡೆ ಹೆಚ್ಚು ಗಮನ ಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್ ಹೇಳಿದರು.

    ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ 48 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರಿಗೆ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಚಿಕಿತ್ಸೆ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


    Provided by
    Provided by

    ರೋಟರಿ, ರೆಡ್ ಕ್ರಾಸ್ ಸಂಸ್ಥೆಗಳು ಸಮನ್ವಯ ಸಾಧಿಸಿ, ಜನತೆಗೆ ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದ್ದು, ರೆಡ್ ಕ್ರಾಸ್ ಸಂಸ್ಥೆಗೆ ತಾಲ್ಲೂಕು ಆಡಳಿತದಿಂದ ನಿವೇಶನಕ್ಕೆ ಶಿಫಾರಸ್ಸು ಮಾಡಲಾಗಿದ್ದು, ನಮ್ಮ ಇಲಾಖೆಯಿಂದ ಎಲ್ಲಾ ತರಹದ ಸಹಕಾರ ನೀಡಲಾಗುವುದು ಎಂಬುದಾಗಿ ಹೇಳಿದರು.

    ತಾಲ್ಲೂಕು ತಹಶೀಲ್ದಾರರಾದ ಶಿವಕುಮಾರ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್ ಆಗಿ ಎರಡೂ ಅಲೆಗಳಲ್ಲಿ ಮುಂಚೂಣಿ ಕಾರ್ಯ ನಿರ್ವಹಿಸಿದ್ದು, ಇದೀಗ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹಾಗೂ ಬೂಸ್ಟರ್ ಡೋಸ್ ಅರ್ಹರಿಗೆ ಲಸಿಕೆ ಕೊಡುವ ಕಾರ್ಯದಲ್ಲಿ ಮುಂದಾಗಬೇಕು, ಎಂದರಲ್ಲದೆ, ತಾಲ್ಲೂಕಿನಲ್ಲಿ ಶೇ.80 ರಷ್ಟು ಲಸಿಕೆ ಕಾರ್ಯ ಪೂರ್ಣಗೊಂಡಿದ್ದು, ಉಳಿದಂತೆ ಲಸಿಕೆ ನೀಡುವ ಕಾರ್ಯ ಮುಂದುವರೆದಿದೆ ಎಂಬುದಾಗಿ ಹೇಳಿದರು.

    ರೋಟರಿ ಅಧ್ಯಕ್ಷರಾದ ಕಿರಣ್ ಕುಮಾರ್ ಮಾತನಾಡಿ, ರೋಟರಿ ಹಾಗೂ ರೆಡ್ ಕ್ರಾಸ್ ಸಂಸ್ಥೆಗಳು ಜೊತೆಯಾಗಿ ನೂರಾರು ಆರೋಗ್ಯ ಶಿಬಿರಗಳನ್ನು ನಡೆಸುವ ಜೊತೆಗೆ ಗಾಯನ ಸ್ಪರ್ಧೆ, ಕಲೆ, ಸಾಂಸ್ಕೃತಿಕ, ಕ್ರೀಡೆ, ಶಿಕ್ಷಣದಂತಹ ಜನಪಯೋಗಿ ಕೆಲಸಗಳಲ್ಲಿ ಸೇವೆ ಸಲ್ಲಿಸುತ್ತಿವೆ ಎಂಬುದಾಗಿ ಹೇಳಿದರು.

    ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಎಂ.ಎಸ್.ರಾಘವೇಂದ್ರ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ರೆಡ್ ಕ್ರಾಸ್ ಸಂಸ್ಥೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಜನರಿಗೆ ಸೇವೆ ಸಲ್ಲಿಸಿದ್ದು, ಇದರಿಂದ 10 ಬಾರಿ ರಾಜ್ಯಮಟ್ಟದ ಪ್ರಶಸ್ತಿಗೆ ಪಾತ್ರವಾಗಿದೆ ಎಂಬುದಾಗಿ ಹೇಳಿದರು. ಈ ಸಂದರ್ಭದಲ್ಲಿ ಹೆಚ್.ಎಸ್. ಸುಂದರ್ ರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಯಿ ಮುದ್ದಮ್ಮ, ವಕೀಲರ ಸಂಘದ ಕಾರ್ಯದರ್ಶಿ ರಂಗಸ್ವಾಮಿ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ತೇಜು, ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಎಸ್.ಜೋಗಪ್ಪ, ಕೇಶವಮೂರ್ತಿ, ಎ.ರಾಘವೇಂದ್ರ, ಸಣ್ಣಭೀಮಣ್ಣ, ರಾಜೇಶ್, ಪಿ.ಆರ್.ಸತೀಶ್ ಬಾಬು, ಶಶಿಕಲಾ ರವಿಶಂಕರ್, ಸಿ.ನಾರಾಯಣಾಚಾರ್, ನಗರಸಭೆ ಅಧ್ಯಕ್ಷರಾದ ರತ್ನಮ್ಮ, ಸುರೇಖಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ

    November 11, 2025

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಕೇಳಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ತಿಪಟೂರು ವಿಭಾಗದ…

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025

    ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!

    November 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.