ರಾಜ್ಯದಲ್ಲಿ ಉಷ್ಣತೆ ಹೆಚ್ಚಳವಾಗಿದೆ. ತಾಪಮಾನದ ಏರಿಕೆ ಇನ್ನೂ ಕೆಲ ದಿನಗಳ ಕಾಲ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪುಟ್ಟ ಪುಟ್ಟ ಮಕ್ಕಳು ರಣ ಬಿಸಿಲಿಗೆ ಅಂಗನವಾಡಿಗೆ ಹೋಗಲು ಹಿಂದೇಟು ಹಾಕುತ್ತಿರುವ ಕುರಿತು ಅರಿತ ಸರಕಾರ ಇದೀಗ ಅಂಗನವಾಡಿಗಳ ಸಮಯವನ್ನು ಎರಡು ತಿಂಗಳ ಕಾಲ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ಕಿತ್ತೂರು ಕರ್ನಾಟಕ ಭಾಗದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.
ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಈ ಎಂಟು ಜಿಲ್ಲೆಯಲ್ಲಿನ ಅಂಗನವಾಡಿಗಳು. ಬದಲಾದ ವೇಳಾಪಟ್ಟಿಗೆ ತಕ್ಕಂತೆ ಐಸಿಡಿಎಸ್ ಸೇವೆ ನಿಯಮಾನುಸಾರ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಲು ಸೂಚಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA