ಚಿತ್ರದುರ್ಗ: : ಅಂಗವಿಕಲರಿಗೆ ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ನೀಡಿದರೆ ಅನುಕೂಲವಾಗಲಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ ನೀಡಿದರು.
ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಅಂಗವಿಕಲರ ಸಬಲೀಕರಣ ಮತ್ತು ಹಿರಿಯ ನಾಗರಿಕರ ಇಲಾಖೆ, ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನಿಫ್ಯಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ಸಂಯಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಅಂಗವಿಕಲರಿಗೆ ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿ ನೀಡಿದರೆ ಅನುಕೂಲವಾಗಲಿದೆ. ಉದ್ಯೋಗದಾತರು ಈ ಬಗ್ಗೆ ಆಲೋಚನೆ ಮಾಡುವುದು ಒಳಿತು ಎಂದು ಸಲಹೆ ನೀಡಿದರು.
‘ಅಂಗವಿಕಲರಲ್ಲಿ ಬಹುತೇಕರಿಗೆ ಸ್ವಾವಲಂಭಿಯಾಗುವ ಹಂಬಲವಿದೆ. ಉದ್ಯೋಗ ಅರಸಿ ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಸರ್ಕಾರಿ ವ್ಯವಸ್ಥೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಸೌಲಭ್ಯವಿದೆ. ಇದೇ ಮಾದರಿಯಲ್ಲಿ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸಿದರೆ ಅನುಕೂಲವಾಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5