ಹೆಚ್.ಡಿ.ಕೋಟೆ: ತಾಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಅನಿಲ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮತ್ತು ಶ್ರೀ ವಾಲ್ಮೀಕಿ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದ್ದರು.
ಚುನಾವಣೆ ಅಧಿಕಾರಿ ರಾಮಸ್ವಾಮಿ ಮಾತನಾಡಿ, ಚುನಾವಣಾ ಅಧಿಕಾರಿಯಾಗಿ ಹೈರಿಗೆ ಪಂಚಾಯಿತಿಗೆ ನನ್ನನ್ನು ನೇಮಿಸಿದ್ದರು. 12 ದಿನಗಳ ಕಾಲ ಸದಸ್ಯರಿಗೆ ನೋಟಿಸ್ ನೀಡಿ 17 ಸದಸ್ಯರಲ್ಲಿ 14 ಸದಸ್ಯರು ಹಾಜರಾಗಿದ್ದು, 3 ಜನ ಗೈರಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅನಿಲ್ ಕುಮಾರ್ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.
ನೂತನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ಈ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಬಹಳ ಸಂತಸ ತಂದಿದೆ. ನನ್ನ ಎಲ್ಲಾ ಸದಸ್ಯರಿಗೂ ಕೃತಜ್ಞತೆ ಹೇಳುತ್ತೇನೆ. ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ಅವರಿಗೆ ಮತ್ತು ಜನತೆಗೆ ಯಾವುದೇ ಕಪ್ಪು ಚುಕ್ಕಿ ಬರದ ರೀತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಅಧ್ಯಕ್ಷರಾದ ಜಯ ನಾಗರಾಜ್ ಜೊತೆಗೂಡಿ ಎಲ್ಲಾ 17 ಸದಸ್ಯರ ವಿಶ್ವಾಸಕ್ಕೆ ತೆಗೆದುಕೊಂಡು ನಾನು ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಡಿಓ, ಸಂತೋಷ್ ನಾಗ್, ಗ್ರಾಮ ಪಂಚಾಯತಿ ಅಧ್ಯಕ್ಷ ಜಯ ನಾಗರಾಜ್, ಕಾರ್ಯದರ್ಶಿ ಬಸವರಾಜ್, ಮಾಜಿ ಅಧ್ಯಕ್ಷ ಶಿವಣ್ಣ, ದಿನೇಶ್, ಮಟಕೆರೆ ರಾಜೇಶ್, ಕೆಂಪಮ್ಮ, ಪುಷ್ಪ, ಹೆಚ್, ಕೆ, ಶ್ರೀಧರ್, ರಾಜೇಶ್, ಗಾಯಿತ್ರಿ, ಜವರ ನಾಯಕ, ಚೆನ್ನಮದನಾಯಕ, ಶಿವಮಲ್ಲಯ್ಯ, ವೆಂಕಟೇಶ್, ಶೋಭಾ, ವಸಂತ, ನಿರ್ಮಲ, ಮಂಜುಳಾ, ತೇಜಾಮಣಿ, ಹಾಗೂ ಗ್ರಾಮದ ಮುಖಂಡರಾದ ಸಿದ್ದಲಿಂಗೇಗೌಡ, ವರಸಿಂಗೇಗೌಡ, ನಾಗರಾಜ್, ಗೋವಿಂದೇಗೌಡ, ಉದಯಕುಮಾರ್, ಕಾಳಿಂಗ, ಶಿವರಾಜ್, ಶಿವಣ್ಣೇಗೌಡ, ಪಣಿಂದ್ರ, ಹಲಗೇಗೌಡ, ಹಾಗೂ ಆಡಳಿತ ವರ್ಗದವರು ಗ್ರಾಮಸ್ಥರು ಇದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx